May 6, 2026
Mumbai News Kannada
ತುಳುನಾಡು

ಮುಲ್ಕಿ : ಸಾಧಕರ ಅರಸು ಕಂಬಳ ಪ್ರಶಸ್ತಿ 2025 ಪ್ರಕಟ – ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ





ಮುಲ್ಕಿ ಸೀಮೆಯ ಅರಸು ಕಂಬಳದ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರತೀ ವರ್ಷ ಕೊಡಮಾಡುವ ಅರಸು ಪ್ರಶಸ್ತಿ 2025 ಪ್ರಕಟವಾಗಿದೆ.
ಮುಲ್ಕಿ ಸೀಮೆಯ 9 ಮಾಗಣೆಯ ಸಾಧಕರು ಮತ್ತು ಕೂಟದವರನ್ನು ಗುರುತಿಸಿ ಮುಲ್ಕಿ ಅರಮನೆ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ಮತ್ತು ಪ್ರಿಯದರ್ಶಿನಿ ಸೊಸೈಟಿ ಕೂಡಿ ಪ್ರಶಸ್ತಿ ಕೊಡುತ್ತಿದೆ.
ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಮುಲ್ಕಿಯ ‘ಹೊಸ ಆಂಗಣ’ ಪತ್ರಿಕೆಯ ಸಂಪಾದಕ ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್ ರವರು ಪ್ರಸ್ತುತ ವರ್ಷದ ಸಾಹಿತ್ಯ ಕ್ಷೇತ್ರ ಪ್ರಶಸ್ತಿ 2025ಗೆ ಭಾಗಿಯಾಗಿದ್ದಾರೆ.
ಡಾ. ಸಾಲ್ಯಾನ್ ರವರು ಪರಿಸರದ ಓರ್ವ ಹಿರಿಯ ಹಾಗೂ ಶ್ರೇಷ್ಠ ಲೇಖಕರಿಗಿದ್ದು ಜ್ಯೋತಿಷ್ಯ ಹಾಗೂ ವಾಸ್ತು ತಜ್ಞರೂ ಆಗಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಕೃತಿಗಳನ್ನು ಬರೆದು ಲೋಕಾರ್ಪಣೆ ಮಾಡಿದ್ದಾರೆ. ಕೆಲವು ಕೃತಿಗಳನ್ನು ಮರುಮುದ್ರಣವನ್ನೂ ಕಂಡಿವೆ.ಇವರ ಅದೆಷ್ಟೋ ಲೇಖನಗಳು ಊರಿನ ಪ್ರಸಿದ್ಧ ಪತ್ರಿಕೆಗಳಾದ ವಿಜಯಾ ಕರ್ನಾಟಕ, ಕನ್ನಡ ಪ್ರಭ, ಜಯಕಿರಣ, ಆತ್ಮ ಶಕ್ತಿ, ಜ್ಯೋತಿಷ್ಯ ಮಂಡಳಿ, ತ್ರಿಕಣ್ಣೇಶ್ವರಿ ಅಲ್ಲದೆ ಮುಂಬಯಿಯ ಕರ್ನಾಟಕ ಮಲ್ಲ, ಅಕ್ಷಯ ಮೊದಲಾದ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ, ಬಿರುದುಗಳು ಇವರ ಮಡಿಲು ಸೇರಿವೆ.
ಈ ಪ್ರಶಸ್ತಿ ಪ್ರಧಾನ ಸಮಾರಂಭವು ಡಿ.28ರ ಅರಸು ಕಂಬಳದ ದಿನದಂದು ಮುಲ್ಕಿ ಸೀಮೆಯ ಅರಸರಾದ ಎಂ. ದುಗ್ಗಣ್ಣ ಸಾಮಂತರ ಮಾರ್ಗದರ್ಶನದಲ್ಲಿ ಅರಮನೆಯ ಧರ್ಮ ಚಾವಡಿಯಲ್ಲಿ ನಡೆಯಲಿದೆ ಎಂದು ಟ್ರಸ್ಟಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಬಂಟರ ಸಂಘ ಸುರತ್ಕಲ್ ನಿಂದ ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣೆ

Mumbai News Desk

ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ  ಪ್ರಶಾಂತ್ ಶೆಟ್ಟಿ  ಮಂಡೇಡಿ ಆಯ್ಕೆ 

Mumbai News Desk

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ 

Mumbai News Desk

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ: 2027ರ ಫೆಬ್ರವರಿ 18 ರಿಂದ 28ರ ವರೆಗೆ ದಿನಾಂಕ ನಿಗದಿ; ಸಮಿತಿ ಕಚೇರಿ ಉದ್ಘಾಟನೆ

Mumbai News Desk

ಹೆಜಮಾಡಿ ಕೋಡಿಕರೆ ಬಿಲ್ಲವರ ಸಮಿತಿ – ವಿದ್ಯಾರ್ಥಿವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk