July 22, 2026
Mumbai News Kannada
ತುಳುನಾಡು

ಮೂಲ್ಕಿ : ಕೊಳಚಿ ಕಂಬಳ ಶ್ರೀ ಬೊಬ್ಬರ್ಯ ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಶಿಲನ್ಯಾಸ







ಕೊಳಚಿಕಂಬಳ ಬಸವ ಮರಕಾಲ ಕುಟುಂಬಿಕರು ಮತ್ತು ಬಪ್ಪನಾಡು ಮೊಗವೀರ ಮಹಾಸಭಾದ ಕೊಳಚಿಕಂಬಳದಲ್ಲಿರುವ ಶ್ರೀ ಬೊಬ್ಬರ್ಯ ದೈವಸ್ಥಾನದ ಪುನರ್ ನಿರ್ಮಾಣ ಕಾಮಗಾರಿಗೆ ಶುಕ್ರವಾರ(ಡಿ. 12) ಶಿಲನ್ಯಾಸ ನೆರವೇರಿಸಲಾಯಿತು.
ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ದೈವಸ್ಥಾನ ಕಾಮಗಾರಿಗೆ ಗುರಿಕಾರ ಸುಜಿತ್ ಎಸ್ ಅಮೀನ್- ರೇಖಾ ಸುಜಿತ್ ದಂಪತಿ ಶಿಲನ್ಯಾಸ ನೆರವೇರಿಸಿದರು. ಬಪ್ಪನಾಡು ಕೃಷ್ಣರಾಜ ಭಟ್ ಧಾರ್ಮಿಕ ವಿಧಿ ನೆರವೇರಿಸಿದರು.


ಮೊಗವೀರ ಮಹಾಸಭಾದ ಅಧ್ಯಕ್ಷ ಪಂಡರಿಕಾಕ್ಷ ಎಸ್ ಕೋಟ್ಯಾನ್, ಕಾರ್ಯದರ್ಶಿ ಸುದೀಪ್ ಕೋಟ್ಯಾನ್, ಕೋಶಾಧಿಕಾರಿ ಪ್ರೇಮ ಎಂ ಕುಂದರ್, ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾಗೇಶ್ ಬಂಗೇರ, ಗೌರವಾಧ್ಯಕ್ಷ ನವೀನ್ ಕೋಟ್ಯಾನ್, ವಿಕ್ರಂ ರಾಜ್, ಗ್ರಾಮದ ಪ್ರಮುಖರಾದ ಗುರಿಕಾರ ಹರಿಶ್ಚಂದ್ರ ಪಿ ಸಾಲ್ಯಾನ್, ಕೃಷ್ಣ,ಕೋಟ್ಯಾನ್, ಕರುಣಾಕರ್ ಸುವರ್ಣ, ತೇಜ ಪೂಜಾರಿ,ಪ್ರಾಣೇಶ್ ಪೂಜಾರಿ, ಚರಣ್ ಕೊಳಚಿಕಂಬಳ, ಮುಲ್ಕಿ 4 ನಾಲ್ಕು ಪಟ್ಣ ಮೊಗವೀರ ಮಹಾಸಭಾಧ್ಯಕ್ಷ ಸುಜಿತ್ ಸಾಲಿಯನ್, ರೋಹಿತ್ ಎಸ್ ಅಮೀನ್, ಹರೀಶ್ ಮಲ್ಪೆ ಉಪಸ್ಥಿತರಿದ್ದರು.
ಶಿಲ್ಪಿ ಕೆ ಗೋಪಾಲ್ ಕಾರ್ಕಳ, ಎಂಜಿನಿಯರ್ ಸುಹಾನ್ ಕರ್ಕೇರ ನೇತೃತ್ವದಲ್ಲಿ ಪುನರ್ ನಿರ್ಮಾಣ ಕಾಮಗಾರಿ ನಡೆಯಲಿದ್ದು, ಎಪ್ರಿಲ್ 29ರಂದು ಪುನರ್ ಪ್ರತಿಷ್ಠೆ ನೇಮೋತ್ಸವ ಜರಗಲಿದೆ.



Related posts

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ವಿಶ್ವ ಗಾಣಿಗರ ಚಾವಡಿ ಮಂಗಳೂರು – ಉಚಿತ ವೈದ್ಯಕೀಯ ಶಿಬಿರ

Mumbai News Desk

ಚಂದ್ರಶೇಖರ ಬೆಳ್ಚಡ ಸಾರಥ್ಯದಲ್ಲಿ ಕಟೀಲಿನಲ್ಲಿ 50ನೇ ವರ್ಷದ ಗಂಪ ಯಕ್ಷ ಸುವರ್ಣ ಸಂಭ್ರಮ.

Mumbai News Desk

ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಹಾಗೂ ಸಾಧಕರ ಗೌರವಾರ್ಪಣೆ: ಕಾರ್ಮಿಕರು ಶ್ರಮ ಮತ್ತು ಪರೋಪಕಾರಿ ಜೀವನದ ನಿಜವಾದ ಸಾಧಕರು – ಡಾ.ಹರಿಕೃಷ್ಣ ಪುನರೂರು

Mumbai News Desk

ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ‘ಭಾರತ್ ಬ್ಯಾಂಕ್’: ಬೆಳ್ತಂಗಡಿಯ ಸುಸಜ್ಜಿತ ಕಟ್ಟಡದಲ್ಲಿ ಶಾಖೆ ಕಾರ್ಯಾರಂಭ.

Mumbai News Desk

ಸಸಿಹಿತ್ಲು: ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಧನ್ಯೋತ್ಸವ ಕಾರ್ಯಕ್ರಮ

Mumbai News Desk