28.4 C
Mumbai
March 7, 2026
Mumbai News Kannada
ತುಳುನಾಡು

ಮೂಲ್ಕಿ : ಕೊಳಚಿ ಕಂಬಳ ಶ್ರೀ ಬೊಬ್ಬರ್ಯ ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಶಿಲನ್ಯಾಸ





ಕೊಳಚಿಕಂಬಳ ಬಸವ ಮರಕಾಲ ಕುಟುಂಬಿಕರು ಮತ್ತು ಬಪ್ಪನಾಡು ಮೊಗವೀರ ಮಹಾಸಭಾದ ಕೊಳಚಿಕಂಬಳದಲ್ಲಿರುವ ಶ್ರೀ ಬೊಬ್ಬರ್ಯ ದೈವಸ್ಥಾನದ ಪುನರ್ ನಿರ್ಮಾಣ ಕಾಮಗಾರಿಗೆ ಶುಕ್ರವಾರ(ಡಿ. 12) ಶಿಲನ್ಯಾಸ ನೆರವೇರಿಸಲಾಯಿತು.
ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ದೈವಸ್ಥಾನ ಕಾಮಗಾರಿಗೆ ಗುರಿಕಾರ ಸುಜಿತ್ ಎಸ್ ಅಮೀನ್- ರೇಖಾ ಸುಜಿತ್ ದಂಪತಿ ಶಿಲನ್ಯಾಸ ನೆರವೇರಿಸಿದರು. ಬಪ್ಪನಾಡು ಕೃಷ್ಣರಾಜ ಭಟ್ ಧಾರ್ಮಿಕ ವಿಧಿ ನೆರವೇರಿಸಿದರು.


ಮೊಗವೀರ ಮಹಾಸಭಾದ ಅಧ್ಯಕ್ಷ ಪಂಡರಿಕಾಕ್ಷ ಎಸ್ ಕೋಟ್ಯಾನ್, ಕಾರ್ಯದರ್ಶಿ ಸುದೀಪ್ ಕೋಟ್ಯಾನ್, ಕೋಶಾಧಿಕಾರಿ ಪ್ರೇಮ ಎಂ ಕುಂದರ್, ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾಗೇಶ್ ಬಂಗೇರ, ಗೌರವಾಧ್ಯಕ್ಷ ನವೀನ್ ಕೋಟ್ಯಾನ್, ವಿಕ್ರಂ ರಾಜ್, ಗ್ರಾಮದ ಪ್ರಮುಖರಾದ ಗುರಿಕಾರ ಹರಿಶ್ಚಂದ್ರ ಪಿ ಸಾಲ್ಯಾನ್, ಕೃಷ್ಣ,ಕೋಟ್ಯಾನ್, ಕರುಣಾಕರ್ ಸುವರ್ಣ, ತೇಜ ಪೂಜಾರಿ,ಪ್ರಾಣೇಶ್ ಪೂಜಾರಿ, ಚರಣ್ ಕೊಳಚಿಕಂಬಳ, ಮುಲ್ಕಿ 4 ನಾಲ್ಕು ಪಟ್ಣ ಮೊಗವೀರ ಮಹಾಸಭಾಧ್ಯಕ್ಷ ಸುಜಿತ್ ಸಾಲಿಯನ್, ರೋಹಿತ್ ಎಸ್ ಅಮೀನ್, ಹರೀಶ್ ಮಲ್ಪೆ ಉಪಸ್ಥಿತರಿದ್ದರು.
ಶಿಲ್ಪಿ ಕೆ ಗೋಪಾಲ್ ಕಾರ್ಕಳ, ಎಂಜಿನಿಯರ್ ಸುಹಾನ್ ಕರ್ಕೇರ ನೇತೃತ್ವದಲ್ಲಿ ಪುನರ್ ನಿರ್ಮಾಣ ಕಾಮಗಾರಿ ನಡೆಯಲಿದ್ದು, ಎಪ್ರಿಲ್ 29ರಂದು ಪುನರ್ ಪ್ರತಿಷ್ಠೆ ನೇಮೋತ್ಸವ ಜರಗಲಿದೆ.



Related posts

ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ನ 16ನೇ ವರ್ಷದ ವಾರ್ಷಿಕೋತ್ಸವ

Mumbai News Desk

ಕಾಪು: ಜನ ಮೆಚ್ಚಿದ ತಹಶೀಲ್ದಾರ್ ಡಾ. ಪ್ರತಿಭಾ ಅವರಿಗೆ ಆತ್ಮೀಯ ಬೀಳ್ಕೊಡುಗೆ

Mumbai News Desk

ಕಾರ್ಲೆ ಭಗವತಿ ಕ್ಷೇತ್ರದ ದೈವ ಪಾತ್ರಿ, ಮೋಯ ಜನಾಂಗದ ದಿವ್ಯ ಚೇತನ ದಿ.ಕೃಷ್ಣ ಬೆಳ್ಚಪ್ಪಾಡರು ಶಿರಿಯ, ಅವರ 42ನೇ ಪುಣ್ಯ ಸ್ಮರಣೆ

Mumbai News Desk

ಬನ್ನಂಜೆ ಬಿಲ್ಲವರ ಸೇವಾ ಸಂಘ: ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ.

Mumbai News Desk

ಮಲ್ಪೆ- ಕಡಲ ಮಕ್ಕಳಿಂದ ಸಂಭ್ರಮದ ಸಮುದ್ರ ಪೂಜೆ.

Mumbai News Desk

ಮಧೂರು ಶ್ರೀ ಮದನಂತೇಶ್ವರ ದೇಗುಲ; ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ

Mumbai News Desk