30 C
Mumbai
April 24, 2026
Mumbai News Kannada
ತುಳುನಾಡು

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ





ಉಪ್ಪುರು ಉಗ್ಗೇಲ್ ಬೆಟ್ಟು ನಿವಾಸಿ ಕುಮಾರಿ ಅಕ್ಷತಾ ಪೂಜಾರಿ ಅವರ ಮನೆಗೆ 10/12/2025 ರಂದು ಮುಂಜಾನೆ ಸುಮಾರು 4:00 ಗಂಟೆಗೆ 4 ಮಂದಿ ಮನೆಗೆ ಬಂದು ತಾವು ಪೊಲೀಸ್ ಎಂದು ಹೇಳಿಕೊಂಡು ದಾಂದಲೆ ನಡೆಸಿ, ಅಕ್ಷತಾ ಅವರ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.

ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದಾಗ, ನ್ಯಾಯ ದೊರಕುವ ಬದಲು ಅವರ ಮೇಲೆಯೇ FIR ದಾಖಲಾಗಿರುವುದು ವಿಷಾದಕರ ವಿಷಯವಾಗಿದೆ. ಪ್ರಸ್ತುತ ಅವರು ಅಜ್ಜೆರ್ಕಾಡು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ತನಗೆ ನ್ಯಾಯ ದೊರಕಿಸಿಕೊಡಬೇಕೆಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯನ್ನು ಸಂಪರ್ಕಿಸಿದ್ದಾರೆ.

ಈ ಗಂಭೀರ ವಿಷಯದ ಬಗ್ಗೆ ಚರ್ಚಿಸಿ ಮುಂದಿನ ಕ್ರಮಗಳನ್ನು ನಿರ್ಧರಿಸುವ ಸಲುವಾಗಿ ಸರ್ವ ಸಂಘಗಳ ತುರ್ತು ಸಭೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಉಡುಪಿ, ಕೆಳಗಿನಂತೆ ಕರೆಯಲಾಗಿದೆ:

ದಿನಾಂಕ: 15/12/2025
ಸಮಯ: ಸಂಜೆ 4:00 ಗಂಟೆ
ಸ್ಥಳ: ಬಿಲ್ಲವರ ಸೇವಾ ಸಂಘ(ರಿ.) ಬನ್ನಂಜೆ, ಉಡುಪಿ

ದಯವಿಟ್ಟು ಎಲ್ಲ ಸ್ವಜಾತಿ ಭಾಂದವರು ಸರಿಯಾದ ಸಮಯಕ್ಕೆ ಹಾಜರಾಗಿ ಸಹಕರಿಸಬೇಕಾಗಿ ವಿನಂತಿ.

ಧನ್ಯವಾದಗಳು 🙏

ಅಧ್ಯಕ್ಷರು ಹಾಗೂ ಸರ್ವ ಸದಸ್ಯರು

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.)



Related posts

ಸಣ್ಣ ವಯಸ್ಸಿನಲ್ಲೇ ದೈವ ನರ್ತನದ ಮೂಲಕ ಕರಾವಳಿಯ ಗಮನ ಸೆಳೆದ ಅಜೆಕಾರಿನ ಬಾಲಕ ಸಮರ್ಥ್

Mumbai News Desk

ಚಂದ್ರಶೇಖರ ಬೆಳ್ಚಡ ಸಾರಥ್ಯದಲ್ಲಿ ಕಟೀಲಿನಲ್ಲಿ 50ನೇ ವರ್ಷದ ಗಂಪ ಯಕ್ಷ ಸುವರ್ಣ ಸಂಭ್ರಮ.

Mumbai News Desk

ಹೆಜಮಾಡಿ ಬಿಲ್ಲವ ಸಂಘದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Mumbai News Desk

ಬಂಟರ ಸಂಘ ಸುರತ್ಕಲ್ ನಿಂದ ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣೆ

Mumbai News Desk

ಕಾಪು: ಗಾಳಿ – ಮಳೆಗೆ ಮನೆಗೆ ಮರಬಿದ್ದು ಅಪಾರ ನಷ್ಟ.

Mumbai News Desk

ರಾಮನ ಸೇವೆಯೇ ರಾಷ್ಟ್ರಸೇವೆ: ಒಡಿಯೂರು ಶ್ರೀ

Mumbai News Desk