30.5 C
Mumbai
June 8, 2026
Mumbai News Kannada
ಕರ್ನಾಟಕ

ಬೆಳಗಾವಿ : ಸದನದಲ್ಲಿ ಗೃಹಲಕ್ಷ್ಮಿ ಗದ್ದಲ; ತಪ್ಪೊಪ್ಪಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್





 ವಿಧಾನಸಭೆಯಲ್ಲಿ ಇಂದು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಭಾರೀ ಚರ್ಚೆ ನಡೆಯಿತು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ರೂಪಾಯಿಗಳನ್ನು ಡಿಬಿಟಿ ಮೂಲಕ ತಲುಪಿಸುತ್ತಿದ್ದೇವೆ. ರಾಜ್ಯದ ಈ ಮಾದರಿಯನ್ನು ನೋಡಿ ಬೇರೆ ರಾಜ್ಯಗಳೂ ಇಂತಹ ಯೋಜನೆ ಜಾರಿಗೆ ತಂದಿವೆ. ಈವರೆಗೆ 1.26 ಲಕ್ಷ ಕುಟುಂಬಗಳ ಯಜಮಾನಿಯರಿಗೆ ಒಟ್ಟು 46 ಸಾವಿರ ಕೋಟಿ ರೂಪಾಯಿ ನೀಡಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಾಹಿತಿ ನೀಡಿದರು. ಆದರೆ, ಎರಡು ತಿಂಗಳ ಹಣ ಬಾಕಿ ಇರುವ ವಿಚಾರವಾಗಿ ವಿಪಕ್ಷಗಳು ಪ್ರಶ್ನಿಸಿದಾಗ, ‘ಸದನಕ್ಕೆ ತಪ್ಪು ಮಾಹಿತಿ ನೀಡುವ ಉದ್ದೇಶ ನನಗಿರಲಿಲ್ಲ. ಮಾಹಿತಿ ಪಡೆಯುವಲ್ಲಿ ವ್ಯತ್ಯಾಸವಾಗಿದೆ, ಹಣ ಇನ್ನೂ ಸಂದಾಯವಾಗಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ’ ಎಂದು ಸಚಿವರು ತಪ್ಪೊಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದರು.

ಸಚಿವರ ಸಮರ್ಥನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಶಾಸಕ ಸುನಿಲ್ ಕುಮಾರ್, ‘ಸರ್ಕಾರದ ಬಳಿ ಹಣ ಇಲ್ಲದಿದ್ದರೆ ನೇರವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಳ್ಳಲಿ. ಪದೇ ಪದೇ ತಪ್ಪು ಮಾಹಿತಿ ನೀಡಿ ಜನರನ್ನು ಹಾದಿ ತಪ್ಪಿಸುವುದು ಬೇಡ. ಎರಡು ತಿಂಗಳ ಹಣ ಹಾಕದೆ ಈಗ ಸದನಕ್ಕೆ ಬಂದು ಸಮರ್ಥಿಸಿಕೊಳ್ಳುವುದು ಸರಿಯಲ್ಲ. ಹಣ ಹಾಕಿದ್ದೇವೆ ಎಂದು ಹೇಳುವ ಬದಲು, ಇಲ್ಲ ಎಂದು ಒಪ್ಪಿಕೊಳ್ಳುವ ಧೈರ್ಯ ತೋರಲಿ’ ಎಂದು ಆಕ್ರೋಶ ಹೊರಹಾಕಿದರು. ಇದೇ ವೇಳೆ ಸಚಿವ ಬೈರತಿ ಸುರೇಶ್ ಮಧ್ಯಪ್ರವೇಶಿಸಿ, ‘ರಾಜ್ಯದ ಜನರಿಗೆ ಬಿಜೆಪಿ ಒಂದು ರೂಪಾಯಿ ಕೊಡುವ ಕೆಪಾಸಿಟಿ ಇಲ್ಲ’ ಎಂದು ಹೇಳಿದ್ದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಯಿತು.



Related posts

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ

Mumbai News Desk

ಧರ್ಮಸ್ಥಳ ಬುರುಡೆ ಕೇಸ್ನಲ್ಲಿ ಮೇಜರ್ ಟ್ವಿಸ್ಟ್, ಮಾಸ್ಕ್ ಮ್ಯಾನ್ ಅರೆಸ್ಟ್.

Mumbai News Desk

ಚಿಕ್ಕಮಗಳೂರು: ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನ ಹೊರಗೆ ಕಳ್ಸಿದ ಪ್ರಿನ್ಸಿಪಾಲ್ : ನಗರದಲ್ಲಿ ರೊಚ್ವಿಗೆದ್ದ ಹಿಂದೂ ಸಂಘಟನೆಗಳು

Mumbai News Desk

ಕರ್ನಾಟಕ : ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣ ಬಹಿಷ್ಕಾರ ಮತ್ತು ಸದನದ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ಹೈಡ್ರಾಮಾ

Mumbai News Desk

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ. ಶಿವಕುಮಾರ್ – ನಂತರ ಸ್ಪಷ್ಟನೆ !

Mumbai News Desk

ಬೆಂಗಳೂರು: ನಗರದ ತಾಪಮಾನ ತಗ್ಗಿಸಿದ ಮಾರ್ಚ್ ತಿಂಗಳ ಮೊದಲ ಮಳೆ

Mumbai News Desk