27.7 C
Mumbai
July 23, 2026
Mumbai News Kannada
ಕರ್ನಾಟಕ

ಬೆಳಗಾವಿ : ಸದನದಲ್ಲಿ ಗೃಹಲಕ್ಷ್ಮಿ ಗದ್ದಲ; ತಪ್ಪೊಪ್ಪಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್







 ವಿಧಾನಸಭೆಯಲ್ಲಿ ಇಂದು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಭಾರೀ ಚರ್ಚೆ ನಡೆಯಿತು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ರೂಪಾಯಿಗಳನ್ನು ಡಿಬಿಟಿ ಮೂಲಕ ತಲುಪಿಸುತ್ತಿದ್ದೇವೆ. ರಾಜ್ಯದ ಈ ಮಾದರಿಯನ್ನು ನೋಡಿ ಬೇರೆ ರಾಜ್ಯಗಳೂ ಇಂತಹ ಯೋಜನೆ ಜಾರಿಗೆ ತಂದಿವೆ. ಈವರೆಗೆ 1.26 ಲಕ್ಷ ಕುಟುಂಬಗಳ ಯಜಮಾನಿಯರಿಗೆ ಒಟ್ಟು 46 ಸಾವಿರ ಕೋಟಿ ರೂಪಾಯಿ ನೀಡಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಾಹಿತಿ ನೀಡಿದರು. ಆದರೆ, ಎರಡು ತಿಂಗಳ ಹಣ ಬಾಕಿ ಇರುವ ವಿಚಾರವಾಗಿ ವಿಪಕ್ಷಗಳು ಪ್ರಶ್ನಿಸಿದಾಗ, ‘ಸದನಕ್ಕೆ ತಪ್ಪು ಮಾಹಿತಿ ನೀಡುವ ಉದ್ದೇಶ ನನಗಿರಲಿಲ್ಲ. ಮಾಹಿತಿ ಪಡೆಯುವಲ್ಲಿ ವ್ಯತ್ಯಾಸವಾಗಿದೆ, ಹಣ ಇನ್ನೂ ಸಂದಾಯವಾಗಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ’ ಎಂದು ಸಚಿವರು ತಪ್ಪೊಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದರು.

ಸಚಿವರ ಸಮರ್ಥನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಶಾಸಕ ಸುನಿಲ್ ಕುಮಾರ್, ‘ಸರ್ಕಾರದ ಬಳಿ ಹಣ ಇಲ್ಲದಿದ್ದರೆ ನೇರವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಳ್ಳಲಿ. ಪದೇ ಪದೇ ತಪ್ಪು ಮಾಹಿತಿ ನೀಡಿ ಜನರನ್ನು ಹಾದಿ ತಪ್ಪಿಸುವುದು ಬೇಡ. ಎರಡು ತಿಂಗಳ ಹಣ ಹಾಕದೆ ಈಗ ಸದನಕ್ಕೆ ಬಂದು ಸಮರ್ಥಿಸಿಕೊಳ್ಳುವುದು ಸರಿಯಲ್ಲ. ಹಣ ಹಾಕಿದ್ದೇವೆ ಎಂದು ಹೇಳುವ ಬದಲು, ಇಲ್ಲ ಎಂದು ಒಪ್ಪಿಕೊಳ್ಳುವ ಧೈರ್ಯ ತೋರಲಿ’ ಎಂದು ಆಕ್ರೋಶ ಹೊರಹಾಕಿದರು. ಇದೇ ವೇಳೆ ಸಚಿವ ಬೈರತಿ ಸುರೇಶ್ ಮಧ್ಯಪ್ರವೇಶಿಸಿ, ‘ರಾಜ್ಯದ ಜನರಿಗೆ ಬಿಜೆಪಿ ಒಂದು ರೂಪಾಯಿ ಕೊಡುವ ಕೆಪಾಸಿಟಿ ಇಲ್ಲ’ ಎಂದು ಹೇಳಿದ್ದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಯಿತು.



Related posts

ಕರ್ನಾಟಕ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ದಾಖಲೆಯ ಶೇ.86 ಫಲಿತಾಂಶ : ಆಳ್ವಾಸ್ ಕಾಲೇಜ್ ನ ದಿಶಾ ರಾಜ್ಯಕ್ಕೆ ಪ್ರಥಮ

Mumbai News Desk

ಕರ್ನಾಟಕ : ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನವಂಬರ್ 12ರವರೆಗೆ ಮಧ್ಯಂತರ ತಡೆ.

Mumbai News Desk

ಜೆಸಿಐ ವಲಯ 15ರ ವಲಯಾಧ್ಯಕ್ಷರಾಗಿ ಗಿರೀಶ್ ಎಸ್ ಪಿ ಆಯ್ಕೆ

Mumbai News Desk

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2025 ಪ್ರಕಟ : ಮುಂಬೈ ಯ ಡಾ ಪಿ. ವಿ. ಶೆಟ್ಟಿ ಸೇರಿದಂತೆ, 70 ಮಂದಿಗೆ ಗೌರವ

Mumbai News Desk

ಈಗ ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ, ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಪುರುಷೋತ್ತಮ ಬಿಳಿಮಲೆ

Mumbai News Desk