September 6, 2026
Mumbai News Kannada
ಮಹಾರಾಷ್ಟ್ರ

ಮಹಾರಾಷ್ಟ್ರ: ಸಚಿವ ಸ್ಥಾನಕ್ಕೆ ಮಾಣಿಕ್ರಾವ್ ಕೊಕಾಟೆ ರಾಜೀನಾಮೆ!





ನಾಸಿಕ್‌ ಅಪಾರ್ಟ್‌ಮೆಂಟ್ ಹಗರಣದಿಂದ ಮಹಾರಾಷ್ಟ್ರ ರಾಜ್ಯ ಕ್ರೀಡಾ ಸಚಿವ ಮಾಣಿಕ್​ರಾವ್ ಕೊಕಾಟೆ ಸಂಕಷ್ಟಕ್ಕೆ ಸಿಲುಕಿದ್ದು ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಪ್ರಕರಣ ಸಂಬಂಧ ನಾಸಿಕ್ ಸೆಷನ್ಸ್ ನ್ಯಾಯಾಲಯವು ಸಚಿವ ಮಾಣಿಕ್​ರಾವ್ ಕೊಕಾಟೆ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. 1995ರಲ್ಲಿ ನಡೆದಿದ್ದ ಪ್ರಕರಣ ಇದಾಗಿದೆ. ಈ ಪ್ರಕರಣದಲ್ಲಿ ಕೊಕಾಟೆಗೆ ಎರಡು ವರ್ಷಗಳ ಶಿಕ್ಷೆ ವಿಧಿಸಲಾಗಿತ್ತು. ಅದರ ನಂತರ ನಾಸಿಕ್ ಸೆಷನ್ಸ್ ನ್ಯಾಯಾಲಯವು ಈಗ ಮಾಣಿಕ್​ರಾವ್ ಕೊಕಾಟೆ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.

ನಾಸಿಕ್‌ನಲ್ಲಿ 1995ರ ಜುನ್ಯಾ ಸದನಿಕಾ ಹಗರಣ ಪ್ರಕರಣವು ಮಾಣಿಕ್ರಾವ್ ಕೊಕಾಟೆ ಅವರಿಗೆ ದೊಡ್ಡ ಹೊಡೆತ ನೀಡಿತ್ತು. ನಾಸಿಕ್ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಕೊಕಾಟೆ ವಿರುದ್ಧ ವಾರಂಟ್ ಹೊರಡಿಸಿತ್ತು. ಕೊಕಾಟೆ ಕಥೆ ಸುಮಾರು 30 ವರ್ಷಗಳಿಂದ ನಡೆಯುತ್ತಿದ್ದು ಯಾವುದೇ ಕ್ಷಣದಲ್ಲಾದರೂ ಅವರ ಬಂಧನವಾಗಬಹುದು.

ಏತನ್ಮಧ್ಯೆ, ಮಾಣಿಕ್​ರಾವ್ ಕೊಕಾಟೆ ತಮ್ಮ ರಾಜೀನಾಮೆ ಪತ್ರವನ್ನು ಅಜಿತ್ ಪವಾರ್ ಅವರಿಗೆ ಸಲ್ಲಿಸಿದ್ದಾರೆ. ಸದ್ಯ ನಾಸಿಕ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನೀಡಿದ ಆದೇಶಗಳ ವಿರುದ್ಧ ಕೊಕಾಟೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ಶುಕ್ರವಾರ ತನ್ನ ನಿರ್ಧಾರವನ್ನು ನೀಡಲಿದೆ. ಆದ್ದರಿಂದ, ಹೈಕೋರ್ಟ್ ಆದೇಶದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.



Related posts

ಶ್ರೀ ರಾಮಚಂದ್ರಾಪುರ ಮಠದ ಭಾರತ ಮಂಡಲ, ಕೊಲಾಡಿನ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ವನಮಹೋತ್ಸವ

Mumbai News Desk

ಓಲ್ಡ್ ಮಾಂಕ್, ರಾಯಲ್ ಚಾಲೆಂಜ್, ಆಂಟಿಕ್ವಿಟಿ, ಬ್ಯಾಗ್‌ಪೈಪರ್ ಹಾಗೂ ಓಲ್ಡ್ ಕ್ಯಾಸ್ಕ್‌ಗೆ FSSAI ಶಾಕ್: ರಮ್-ವಿಸ್ಕಿ ಅಂದುಕೊಂಡು ಕುಡಿದಿದ್ದಕ್ಕೆ ಬಿತ್ತು ಬ್ಯಾನ್ ಮಾರ್ಕ್!!!!,

Mumbai News Desk

ನಾಸಿಕ್ ಬಂಟರ ಸಂಘದ 20ನೇ ವಾರ್ಷಿಕೋತ್ಸವ: ಸಾಂಸ್ಕೃತಿಕ ವೈವಿಧ್ಯದ ಸಂಭ್ರಮ

Mumbai News Desk

ಶ್ರೀ ದುರ್ಗಾ ಕಾಳಿ ಮಂದಿರ, ಅಂಬರ್ ನಾಥ್ ನವರಾತ್ರಿ ಉತ್ಸವ ಸಂಪನ್ನ.

Mumbai News Desk

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ

Mumbai News Desk

ಶ್ರೀ ದುರ್ಗಾ ಕಾಳಿ ಮಂದಿರದಲ್ಲಿ ನವರಾತ್ರಿ ಉತ್ಸವ.

Chandrahas