July 23, 2026
Mumbai News Kannada
ಪ್ರಕಟಣೆ

ಸಾಂತಕ್ರೂಸ್   ಶ್ರೀ ಮಂತ್ರ ದೇವಿ   ದೇವಸ್ಥಾನ ವಾರ್ಷಿಕ ಮಹಾಪೂಜೆ.







ಧರ್ಮ ಕಾರ್ಯದಲ್ಲಿ ಪಾಲ್ಗೊಂಡಾಗ ಬದುಕು ಪಾವನ: ವಾಸುದೇವ ಬಂಜನ್

ಚಿತ್ರ ವರದಿ : ದಿನೇಶ್ ಕುಲಾಲ್

ಧಾರ್ಮಿಕ ಮುಖಂಡರಾಗಿ, ಸಾಮಾಜಿಕ ಸೇವೆಯ ಮೂಲಕ ಸಾಂತಕ್ರೂಸ್ ಪರಿಸರದಲ್ಲಿ ಜನಾನುರಾಗಿರುವ 
ವಾಸುದೇವ ಬಂಜನ್  ಅವರು  ಸಾಂತಕ್ರೂಸ್, ಆಶಾ ಚಾಲ್, ಮಿಲನ್ ಸಬ್ ವೇ ರೋಡ್, ಸಂತಾಕ್ರೂಸ್, (ಪ.) ಇಲ್ಲಿ ಸ್ಥಾಪಿಸಿರುವ ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್ ಆಡಳಿತದ ಶ್ರೀ ಮಂತ್ರದೇವಿ ದೇವಸ್ಥಾನದ ವಾರ್ಷಿಕ ಮಹಾಪೂಜೆಯು  ಭಕ್ತಿ ಸಂಭ್ರಮದೊಂದಿಗೆ ಸಂಪನ್ನಗೊಂಡಿದೆ.

ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವಿಗೆ ನವಕ ಪ್ರಧಾನ ಹೋಮ, ಕಲಶಾಭಿಷೇಕ ನಡೆದು ಸ್ನಾನಿಧ್ಯ ದೇವರಿಗೆ ಪಂಚಾಮೃತ ಅಭಿಷೇಕ ಹಾಗೂ ಪರಿವಾರ ದೇವತೆಗಳಿಗೆ ಹೋಮಪರ್ವ ಹಾಗೂ ಅಮ್ಮನವರಿಗೆ ಗದ್ದಿಗೆ ಏರಿಸಿ ಶ್ರೀ ದೇವಿಯ ಆವೇಶದೊಂದಿಗೆ ಪ್ರಸಾದ ವಿತರಣೆ ಹಾಗೂ ಮಹಾ ಪ್ರಸಾದ ಅನ್ನಸಂತರ್ಪಣೆ   ನಡೆಯಿತು.

ಮಧ್ಯಾಹ್ನ ಮಹಾ ಮಂಗಳಾರತಿ ನಡೆದು ಬಳಿಕ ಸಂಜೆ ತನಕ ಮಹಾ ಅನ್ನದಾನ ಸೇವೆ ನಡೆಯಿತು. ಈ ಪುಣ್ಯ ಕಾರ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀದೇವರ ದರ್ಶನ ಪಡೆದರು.
ಕ್ಷೇತ್ರದ ಧಾನಿಗಳನ್ನು,ವಿಶೇಷ ಅತಿಥಿ ಮೊಕ್ತೇಸರಸರರಾದ ವಾಸುದೇವ ಬಂಜನ್ (ಅರ್ಚಕರು) ಅಧ್ಯಕ್ಷರು, ಟ್ರಸ್ಟಿ ಮಧ್ಯಸ್ಥರು, ಕಾರ್ಯಕಾರಿ ಸಮಿತಿಯವರು, ಮಹಿಳಾ ವಿಭಾಗದ ಸದಸ್ಯರು ಗೌರವಿಸಿದ

ಕ್ಷೇತ್ರದ  ಮೊತ್ತೇಸರರಾದ ವಾಸುದೇವ ಬಂಜನ್ ಅವರು ಭಕ್ತರಿಗೆ ಪ್ರಸಾದ ನೀಡಿದ ಬಳಿಕ ಆಶೀರ್ವಚನದ ನೀಡುತ್ತಾ “ಧರ್ಮ ಕಾರ್ಯದಲ್ಲಿ ನಡೆದಾಗ ಬದುಕು ಪಾವನ, ನಿರಂತರ ಭಗವಂತನ  ಸ್ಮರಣೆ ಮಾಡಿದಾಗ ನಮಗೆ ಸತ್ಕಾರ್ಯಗಳು   ಮಾಡಲು ಸಾಧ್ಯವಾಗುತ್ತದೆ” ಎಂದು ನುಡಿದರು.
  ದಿನೇಶ್ ಕೋಟ್ಯಾನ್ ಜೆರಿಮೆರಿ ಇವರಿಂದ  ಸ್ಯಾಕ್ರೋಫೋನ್, ಚಂಡೆ ಮದ್ದಳೆ ವಾದನದ ಸೇವೆ, ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಿತು.



Related posts

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಜ1 ರಂದು, ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ.

Mumbai News Desk

ಶ್ರೀ ಮದ್ಭಾರತ ಮಂಡಳಿ ಮುಂಬೈ : ಫೆ. 21-22ರಂದು “148ನೇ ವಾರ್ಷಿಕ ಮಂಗಳೋತ್ಸವ” ಮತ್ತು “ಕುಮಾರವ್ಯಾಸ ಭಾರತ” ಗ್ರಂಥ ಪಾರಾಯಣದ ಸಮಾಪ್ತಿ ಮಂಗಳೋತ್ಸವ, 24ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ : ಅ. 9ರಂದು ನಾಗರಪಂಚಮಿ ಉತ್ಸವ.

Mumbai News Desk

ಮೀರಾ ರೋಡ್   ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೂ.14 : 35ನೇ ವಾರ್ಷಿಕ ಮಹಾಪೂಜೆ

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಲ್ಲಿಕಾರು, ಮೂಡಬಿದೆರೆ ಶತಮಾನೋತ್ಸವದ ಸಂಭ್ರಮದಲ್ಲಿ ನಮ್ಮ ಶಾಲೆ :

Mumbai News Desk

ಶ್ರೀ ಮಣಿಕಂಠ ಸೇವಾ ಸಮಿತಿ ,ವಸಾಯಿ ಡಿ.13ರಂದು 22ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk