July 23, 2026
Mumbai News Kannada
ಪ್ರಕಟಣೆ

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 15 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.







ಸುದ್ದಿ ವಿವರ : ಪಿ.ಆರ್.ರವಿಶಂಕರ್

ಬೊಯಿಸರ್ :   

ಇದೇ ಡಿಸೆಂಬರ್ ತಾ. 27 ನೆಯ ಶನಿವಾರದಂದು  ಪಾಲ್ಘರ್ ಜಿಲ್ಲೆಯ ಬೊಯಿಸರ್ ನಲ್ಲಿಯ  ಸಂತಶ್ರೇಷ್ಟ ಗುರು ನಿತ್ಯಾನಂದ ಸ್ವಾಮಿ ಮಂದಿರದಲ್ಲಿ  14 ನೆಯ ವರ್ಷದ ಪ್ರತಿಷ್ಟಾಪನಾ ಉತ್ಸವವು ಜರಗಲಿದೆ.

ಪ್ರಾತಃ ಕಾಲದ 6 ಗಂಟೆಗೆ ಸಂಕಲ್ಪ ಪೂಜೆ ಹಾಗೂ ಗಣಹೋಮದೊಂದಿಗೆ ಕಾರ್ಯಕ್ರಮ ಆರಂಭವಾಗುವುದು. 7. ಗಂಟೆಗೆ  ನಿತ್ಯಾನಂದ ಬಾಬಾ ಪಂಚಾಮೃತ ಅಭಿಷೇಕ ಮತ್ತು ಪ್ರಾತಃ ಆರತಿಯು ಸರ್ವ ಭಕ್ತಾಭಿಮಾನಿಗಳ ಭಾಗವಹಿಸುವಿಕೆಯಲ್ಲಿ ಜರಗಲಿದೆ.

ಬೆಳಿಗ್ಗೆ 9 ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಸದ್ಗುರು ನಿತ್ಯಾನಂದ ಭಜನಾ ಮಂಡಳಿಯವರಿಂದ ಭಕ್ತಿ ಗೀತೆ ಹಾಗೂ ಭಜನಾ ಕಾರ್ಯಕ್ರಮವಿರುತ್ತದೆ. 12 ಗಂಟೆಗೆ ಮದ್ಯಾಹ್ನದ ಆರತಿಯ ಬಳಿಕ ಅನ್ನಸಂತರ್ಪಣೆ ಜರಗಲಿದೆ.

ಸಂಜೆ 6 ಗಂಟೆಗೆ ನಿತ್ಯಾನಂದ ಬಾಬಾ ಇವರ ಪಲ್ಲಕ್ಕಿಯಲ್ಲಿ ಭವ್ಯ ಮೆರವಣಿಗೆ ಇದ್ದು ಸಂಜೆ 8 ಗಂಟೆಯ ಮಂಗಳಾರತಿಯೊಂದಿಗೆ ಕಾರ್ಯಕ್ರಮ ಪೂರ್ಣಗೊಳ್ಳಲಿದೆ.

ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವ ಈ ಪೂರ್ಣ ದಿನದ ಪ್ರತಿಷ್ಟಾಪನೋತ್ಸವಕ್ಕೆ ಭಕ್ತಾಭಿಮಾನಿಗಳೆಲ್ಲರೂ ಸಹ ಕುಟುಂಬ ಆಗಮಿಸಿ ಭಾಗವಹಿಸಬೇಕಾಗಿ ಶ್ರೀಮತಿ ಸುಹಾಸಿನಿ ದಾಮೋದರ್ ನಾಯ್ಕ್ ಹಾಗೂ ಸದ್ಗುರು ನಿತ್ಯಾನಂದ ಸೇವಾ ಟ್ರಸ್ಟ್ ವಿಶ್ವಸ್ಥ ಮಂಡಳಿಯವರು ಸಮಸ್ಥ ಭಕ್ತಮಂಡಳಿಯ ಪರವಾಗಿ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.

ಸುದ್ದಿ ವಿವರ : ಪಿ.ಆರ್.ರವಿಶಂಕರ್

            8483980035



Related posts

ಶ್ರೀ ಧರ್ಮಶಾಸ್ತ ಭಕ್ತವೃಂದ ದೋಲ್ಗೊಟ್ಟು, ಕೆಲ್ಲಪುತ್ತಿಗೆ ಜ 4 ಮತ್ತು 5, ರಂದು 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”

Mumbai News Desk

ಶ್ರೀ ಅಯ್ಯಪ್ಪ ಸೇವ ಸಮಿತಿ, ಕಿಸನ್ ನಗರ ಥಾಣೆ – ಡಿ.16, ಮತ್ತು 17ರಂದು 23ನೇ ವಾರ್ಷಿಕ ಮಹಾಪೂಜೆ.

Mumbai News Desk

ಡೊಂಬಿವಿಲಿಯಲ್ಲಿನ ವರದ ಸಿದ್ಧಿವಿನಾಯಕ ಮಂದಿರದಲ್ಲಿ  ಫೆ.01 ರಂದು ಮಾಘಿ ಗಣೇಶೋತ್ಸವ ಮತ್ತು ಯಕ್ಷಗಾನ ಪ್ರದರ್ಶನ

Mumbai News Desk

ಶ್ರೀ ಮಹಿಷಮರ್ಧಿನಿ ದೇವಸ್ಥಾನ ಬೊರಿವಿಲಿ 35ನೇ ವಾರ್ಷಿಕ ಶರನ್ನವರಾತ್ರಿ ಉತ್ಸವ.

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ವತಿಯಿಂದ (ನಾಳೆ) ಫೆ.26 ರಂದು ಪಾನಕ ಸೇವೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ದೀಪಾವಳಿ ಹಬ್ಬದ ಪ್ರಯುಕ್ತ ಭಜನಾ ಸಂಕೀರ್ತನೆ

Mumbai News Desk