September 6, 2026
Mumbai News Kannada
ಪ್ರಕಟಣೆ

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 15 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.





ಸುದ್ದಿ ವಿವರ : ಪಿ.ಆರ್.ರವಿಶಂಕರ್

ಬೊಯಿಸರ್ :   

ಇದೇ ಡಿಸೆಂಬರ್ ತಾ. 27 ನೆಯ ಶನಿವಾರದಂದು  ಪಾಲ್ಘರ್ ಜಿಲ್ಲೆಯ ಬೊಯಿಸರ್ ನಲ್ಲಿಯ  ಸಂತಶ್ರೇಷ್ಟ ಗುರು ನಿತ್ಯಾನಂದ ಸ್ವಾಮಿ ಮಂದಿರದಲ್ಲಿ  14 ನೆಯ ವರ್ಷದ ಪ್ರತಿಷ್ಟಾಪನಾ ಉತ್ಸವವು ಜರಗಲಿದೆ.

ಪ್ರಾತಃ ಕಾಲದ 6 ಗಂಟೆಗೆ ಸಂಕಲ್ಪ ಪೂಜೆ ಹಾಗೂ ಗಣಹೋಮದೊಂದಿಗೆ ಕಾರ್ಯಕ್ರಮ ಆರಂಭವಾಗುವುದು. 7. ಗಂಟೆಗೆ  ನಿತ್ಯಾನಂದ ಬಾಬಾ ಪಂಚಾಮೃತ ಅಭಿಷೇಕ ಮತ್ತು ಪ್ರಾತಃ ಆರತಿಯು ಸರ್ವ ಭಕ್ತಾಭಿಮಾನಿಗಳ ಭಾಗವಹಿಸುವಿಕೆಯಲ್ಲಿ ಜರಗಲಿದೆ.

ಬೆಳಿಗ್ಗೆ 9 ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಸದ್ಗುರು ನಿತ್ಯಾನಂದ ಭಜನಾ ಮಂಡಳಿಯವರಿಂದ ಭಕ್ತಿ ಗೀತೆ ಹಾಗೂ ಭಜನಾ ಕಾರ್ಯಕ್ರಮವಿರುತ್ತದೆ. 12 ಗಂಟೆಗೆ ಮದ್ಯಾಹ್ನದ ಆರತಿಯ ಬಳಿಕ ಅನ್ನಸಂತರ್ಪಣೆ ಜರಗಲಿದೆ.

ಸಂಜೆ 6 ಗಂಟೆಗೆ ನಿತ್ಯಾನಂದ ಬಾಬಾ ಇವರ ಪಲ್ಲಕ್ಕಿಯಲ್ಲಿ ಭವ್ಯ ಮೆರವಣಿಗೆ ಇದ್ದು ಸಂಜೆ 8 ಗಂಟೆಯ ಮಂಗಳಾರತಿಯೊಂದಿಗೆ ಕಾರ್ಯಕ್ರಮ ಪೂರ್ಣಗೊಳ್ಳಲಿದೆ.

ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವ ಈ ಪೂರ್ಣ ದಿನದ ಪ್ರತಿಷ್ಟಾಪನೋತ್ಸವಕ್ಕೆ ಭಕ್ತಾಭಿಮಾನಿಗಳೆಲ್ಲರೂ ಸಹ ಕುಟುಂಬ ಆಗಮಿಸಿ ಭಾಗವಹಿಸಬೇಕಾಗಿ ಶ್ರೀಮತಿ ಸುಹಾಸಿನಿ ದಾಮೋದರ್ ನಾಯ್ಕ್ ಹಾಗೂ ಸದ್ಗುರು ನಿತ್ಯಾನಂದ ಸೇವಾ ಟ್ರಸ್ಟ್ ವಿಶ್ವಸ್ಥ ಮಂಡಳಿಯವರು ಸಮಸ್ಥ ಭಕ್ತಮಂಡಳಿಯ ಪರವಾಗಿ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.

ಸುದ್ದಿ ವಿವರ : ಪಿ.ಆರ್.ರವಿಶಂಕರ್

            8483980035



Related posts

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ, ಜ. 26 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk

ಮೀರಾಗಾಂವ್: ಜ.1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಸಾವರ್ಕರ್ ನಗರ್ -ಥಾಣೆ : ಎ. 13ಕ್ಕೆ ಮಾಸಿಕ ಸಂಕ್ರಮಣ ಪೂಜೆ, ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk

ಜ. 24 ಮತ್ತು 25 ; ಗೋರೆಗಾಂವ್ (ಪೂರ್ವ)ದ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ 61ನೇ ವಾರ್ಷಿಕ ಮಹೋತ್ಸವ ಹಾಗೂ ಗುರುಮೂರ್ತಿ ಅಭಿಷೇಕ

Mumbai News Desk

ಮಾ.7, ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ), ಮುಂಬೈ: ಜೂನ್ 21ರಂದು ಯೋಗ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ

Mumbai News Desk