32 C
Mumbai
March 7, 2026
Mumbai News Kannada
ಮುಂಬಯಿ

ಮೀರಾಬಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿಯವರು ವಾರ್ಡ್ 3ರ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ.






ಮುಂಬಯಿ,ಡಿ.31:ಮೀರಾ ಭಾಯಂದರ್ ಪರಿಸರದಲ್ಲಿ ಧಾರ್ಮಿಕ, ಶೈಕ್ಷಣಿಕ ಹಾಗೂ ಸಮಾಜ ಸೇವೆಯಲ್ಲಿ ತೊಡಗಿರುವ ಮಾಜಿ ನಗರ ಸೇವಕ , ಕೇಬುಲ್ ಆಪರೇಟರ್ ಹಾಗೂ ಹೋಟೇಲು ಉದ್ಯಮಿ ಗಣೇಶ್ ಗೋಪಾಲ್ ಶೆಟ್ಟಿಯವರು ಮೀರಾಬಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭಾಯಂದರ್ ಪೂರ್ವದಲ್ಲಿರುವ ಮೂರನೇ ವಾರ್ಡಿನ ಪ್ರತಿನಿಧಿಯಾಗಿ ಡಿ.30ರಂದು ನಾಮಪತ್ರ ಸಲ್ಲಿಸಿದರು.
ಭಾಯಂದರ್ ಪಶ್ಚಿಮದ ಎಸ್.ವಿ.ರೋಡ್ ನಿವಾಸಿಯಾಗಿರುವ ಶೆಟ್ಟಿಯವರು 2007ರಿಂದ ನಗರ ಸೇವಕರಾಗಿ ಜನಸೇವೆಯಲ್ಲಿ ನಿರತರಾಗಿದ್ದಾರೆ. ಪರಿಸರದ ಯಾವುದೇ ಸಂಘಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಸಭೆಯಲ್ಲಿ ಉಪಸ್ಥಿತರಿರದೆ ಸಂಪೂರ್ಣ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುತ್ತಾ ಜಾತಿಭೇದ ಮಾಡಿದೆ ಅಪಾರ ಅಭಿಮಾನಿಗಳನ್ನು ಪಡೆದಿದ್ದಾರೆ.ತನ್ನ ವಾರ್ಡಿನಲ್ಲಿ ಸುರಕ್ಷೆ ಮತ್ತು ಸ್ವಚ್ಛತೆಗಾಗಿ ಹೆಚ್ಚಿನ ಒತ್ತು ನೀಡಿ ಪರಿಸರದಲ್ಲಿ ಹಿರಿಯ ನಾಗರಿಕರ ಸೆಲ್ಫೀ ಪೋಯಿಂಟ್ ಸ್ಟ್ಯಾಂಡ್ ನಿರ್ಮಿಸಿ ಪ್ರಶಂಶಿಸಲ್ಪಟ್ಟಿದ್ದಾರೆ.
ಭಾರತೀಯ ಜನತಾಪಕ್ಷದ ಓರ್ವ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿರುವ ಗಣೇಶ್ ಜಿ.ಶೆಟ್ಟಿಯವರನ್ನು ಮೀರಾಭಾಯಯಂದರ್ ಬಿಜೆಪಿ ಶಾಸಕ ನರೇಂದ್ರ ಎಲ್.ಮೆಹತಾ, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ವಾರ್ಡ್ ನಂಬರ್ ಮೂರರ ಅಭ್ಯರ್ಥಿಯಾಗಿ ಆಯ್ಕೆ ಗೊಳಿಸಿದ್ದಾರೆ.
ಶೆಟ್ಟಿಯವರು ಸುಮಾರು 38000 ಮತದಾರರಿರುವ ವಾರ್ಡಿನ ವಿವಿಧ ಜಾತಿಯ ಸಂಘಟನೆಗಳ, ಸಂಘಸಂಸ್ಥೆಗಳ,ತುಳು ಕನ್ನಡಿಗರ ಹಾಗೂ ಕನ್ನಡೇತರರ ಬೆಂಬಲವನ್ನು ಆಶಿಸಿದ್ದಾರೆ.



Related posts

ಗೊರೆಗಾಂವ್ ಪೂರ್ವ ನಿತ್ಯಾನಂದ ಆಶ್ರಮದಲ್ಲಿ ಉಚಿತ ವೈದ್ಯಕೀಯ ಶಿಬಿರ

Mumbai News Desk

ಶ್ರೀ ರಾಧಾಕೃಷ್ಣ ಶನೀಶ್ವರ ಮಂದಿರ ಡೊಂಬಿವಲಿ, ಸಂಚಾಲಕರು ಶ್ರೀ ರಾಧಾಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ಸೋಮನಾಥ ಪೂಜಾರಿ ಪುನರಾಯ್ಕೆ

Mumbai News Desk

ಮಲಾಡ್ ಪೂರ್ವ  ಶನಿ ಮಂದಿರದ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ   ಪುಸ್ತಕ,   ಸಾಮಗ್ರಿಗಳ  ವಿತರಣೆ,

Mumbai News Desk

ವಿಜಯ ಕಾಲೇಜು ಮೂಲ್ಕಿ ಜಾಗತಿಕ ಹಳೆವಿದ್ಯಾರ್ಥಿ ಸಂಘದ ಮಹಾಸಭೆ

Mumbai News Desk

ಮೀರಾರೋಡಿನಲ್ಲಿ ಗೆಜ್ಜೆ ಗಿರಿ ಮೇಳದವರಿಂದ……ಎಡ್ಮೂರ ಮುಗೇರ ಸತ್ಯೊಲು…ಯಕ್ಷಗಾನ ಪ್ರದರ್ಶನ.

Mumbai News Desk

ಭಾರತ್ ಬ್ಯಾಂಕ್ ಕಾಂದಿವಿಲಿ ಪೂರ್ವ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Mumbai News Desk