31 C
Mumbai
June 8, 2026
Mumbai News Kannada
ಪ್ರಕಟಣೆ

ಡೊಂಬಿವಲಿ: “ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಆಶ್ರಯದಲ್ಲಿ ಜ. 3ರಂದು ಶ್ರೀ ಶನೀಶ್ವರ ಮಹಾಪೂಜೆ ಹಾಗೂ ಸತ್ಯನಾರಾಯಣ ಪೂಜೆ





ಡೊಂಬಿವಲಿ, ಡಿ. 31: ಇಲ್ಲಿನ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ಅಂಗ ಸಂಸ್ಥೆಯಾದ ಶ್ರೀ ಶನೀಶ್ವರ ಪೂಜಾ ಸಮಿತಿ ವತಿಯಿಂದ 34ನೇ ವರ್ಷದ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನೀಶ್ವರ ಮಹಾಪೂಜೆಯು ಜನವರಿ 3ರ ಶನಿವಾರದಂದು ಅದ್ದೂರಿಯಾಗಿ ಜರುಗಲಿದೆ.

​ಡೊಂಬಿವಲಿ ರೈಲ್ವೆ ನಿಲ್ದಾಣದ ಸಮೀಪವಿರುವ ರೇತಿ ಭವನದ ಭರತ್ ಭೋಯಿರ್ ಸಭಾಗೃಹದಲ್ಲಿ ಈ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮಂಡಳಿಯ ಧರ್ಮದರ್ಶಿ ಹಾಗೂ ಶನೀಶ್ವರ ಮಹಾಪೂಜೆಯ ಅರ್ಚಕರಾದ ಅಶೋಕ ದಾಸು ಶೆಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಪೂಜಾ ವಿಧಿವಿಧಾನಗಳು ನೆರವೇರಲಿವೆ.

​ಕಾರ್ಯಕ್ರಮದ ವಿವರ:

ಜನವರಿ 2ರ ಶುಕ್ರವಾರ ಭಜನಾ ಮಂದಿರದಲ್ಲಿ ಭಜನಾ ಸೇವೆ ನಡೆಯಲಿದೆ.

ಜ. 3ರ ಶನಿವಾರ:

  • ಬೆಳಿಗ್ಗೆ 9:00: ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ.
  • ಮಧ್ಯಾಹ್ನ 12:00: ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ.
  • ಮಧ್ಯಾಹ್ನ 12:30: ಸಾರ್ವಜನಿಕ ಅನ್ನ ಸಂತರ್ಪಣೆ.
  • ಮಧ್ಯಾಹ್ನ 2:00: ಶ್ರೀ ಶನೀಶ್ವರ ದೇವರ ಕಲಶ ಪ್ರತಿಷ್ಠೆ ಹಾಗೂ ಸುರೇಶ್ ಅಂಚನ್ ಮತ್ತು ತಂಡದವರಿಂದ ಗ್ರಂಥ ಪಾರಾಯಣ.
  • ರಾತ್ರಿ 7:30: ಮಂಡಳಿಯ ಸದಸ್ಯರಿಂದ ಭಜನಾ ಸೇವೆ.
  • ರಾತ್ರಿ 8:00: ಮಹಾಪೂಜೆ, ಆರತಿ ಹಾಗೂ ತೀರ್ಥ ಪ್ರಸಾದ ವಿತರಣೆ.

​ಈ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಶ್ರೀ ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿ ಪುನೀತರಾಗಬೇಕೆಂದು ಮಂಡಳಿಯ ಧರ್ಮದರ್ಶಿ ಅಶೋಕ್ ಡಿ. ಶೆಟ್ಟಿ, ಪೂಜಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಜತ್ತನ್, ಉಪಾಧ್ಯಕ್ಷ ಬ್ರಹ್ಮಾನಂದ ಶೆಟ್ಟಿಗಾರ್, ಕಾರ್ಯದರ್ಶಿ ಸುನೀಲ್ ಎಸ್‌. ಶೆಟ್ಟಿ, ಕೋಶಾಧಿಕಾರಿ ತಾರಾನಾಥ ಅಮಿನ್, ಜೊತೆ ಕಾರ್ಯದರ್ಶಿ ನಾರಾಯಣ ಮೈಂದನ್, ಜೊತೆ ಕೋಶಾಧಿಕಾರಿ ನಾರಾಯಣ ಭಂಡಾರಿ ಹಾಗೂ ಮಹಿಳಾ ವಿಭಾಗದ ಅಧ್ಯಕ್ಷೆ ವಿಲಾಸಿನಿ ಎಸ್. ಶೆಟ್ಟಿ ಅವರು ಸಮಸ್ತ ಸದ್ಭಕ್ತರನ್ನು ಆಮಂತ್ರಿಸಿದ್ದಾರೆ.



Related posts

ಬೋಂಬೆ ಬಂಟ್ಸ್ ಅಸೋಷಿಯೇಶನ ಮಾ.9ರಂದ 41 ನೇ ಮಹಾಸಭೆ, ಸಾಧಕರಿಗೆ ಸನ್ಮಾನ! ಮಾಜಿ ಅಧ್ಯಕ್ಷರುಗಳಿಗೆ ಗೌರವ!

Mumbai News Desk

ಬಂಟ್ಸ್ ಪೊರಮ್ ಮೀರಾಭಾಯಂದರ್:ಆ 7 ರಂದು “ಭೀಷ್ಮ ವಿಜಯ” ಯಕ್ಷಗಾನ ತಾಳಮದ್ದಳೆ.

Mumbai News Desk

ಮಿಸ್ಟರ್/ಮಿಸ್/ಮಿಸೆಸ್ ಕರ್ನಾಟಕ ಸ್ಟೈಲ್ ಐಕಾನ್‌-2025: ಗ್ರ್ಯಾಂಡ್ ಫಿನಾಲೆ ಡಿ. 18 ರಂದು ನಿಶಿತಾ ಸೂರ್ಯಕಾಂತ್ ಸುವರ್ಣ ಆಯೋಜನೆಯಲ್ಲಿ ‘ಸೀಸನ್‌ 6’ ರ ಅಂತಿಮ ಹಂತ

Mumbai News Desk

ನ 25 ಕ್ಕೆ ಕರ್ನಾಟಕ ಮಿತ್ರ ಮಂಡಳಿ (ರಿ) ಕಲ್ಯಾಣ್ ನ ಆಶ್ರಯದಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) : ಫೆ. 8ರಂದು ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ

Mumbai News Desk

ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು : ಮೇ. 8ರಂದು “ಕಚ್ಚೂರು ಶ್ರೀ ನಾಗೇಶ್ವರ ಉತ್ಸವ”

Mumbai News Desk