September 6, 2026
Mumbai News Kannada
ಪ್ರಕಟಣೆ

ಡೊಂಬಿವಲಿ: “ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಆಶ್ರಯದಲ್ಲಿ ಜ. 3ರಂದು ಶ್ರೀ ಶನೀಶ್ವರ ಮಹಾಪೂಜೆ ಹಾಗೂ ಸತ್ಯನಾರಾಯಣ ಪೂಜೆ





ಡೊಂಬಿವಲಿ, ಡಿ. 31: ಇಲ್ಲಿನ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ಅಂಗ ಸಂಸ್ಥೆಯಾದ ಶ್ರೀ ಶನೀಶ್ವರ ಪೂಜಾ ಸಮಿತಿ ವತಿಯಿಂದ 34ನೇ ವರ್ಷದ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನೀಶ್ವರ ಮಹಾಪೂಜೆಯು ಜನವರಿ 3ರ ಶನಿವಾರದಂದು ಅದ್ದೂರಿಯಾಗಿ ಜರುಗಲಿದೆ.

​ಡೊಂಬಿವಲಿ ರೈಲ್ವೆ ನಿಲ್ದಾಣದ ಸಮೀಪವಿರುವ ರೇತಿ ಭವನದ ಭರತ್ ಭೋಯಿರ್ ಸಭಾಗೃಹದಲ್ಲಿ ಈ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮಂಡಳಿಯ ಧರ್ಮದರ್ಶಿ ಹಾಗೂ ಶನೀಶ್ವರ ಮಹಾಪೂಜೆಯ ಅರ್ಚಕರಾದ ಅಶೋಕ ದಾಸು ಶೆಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಪೂಜಾ ವಿಧಿವಿಧಾನಗಳು ನೆರವೇರಲಿವೆ.

​ಕಾರ್ಯಕ್ರಮದ ವಿವರ:

ಜನವರಿ 2ರ ಶುಕ್ರವಾರ ಭಜನಾ ಮಂದಿರದಲ್ಲಿ ಭಜನಾ ಸೇವೆ ನಡೆಯಲಿದೆ.

ಜ. 3ರ ಶನಿವಾರ:

  • ಬೆಳಿಗ್ಗೆ 9:00: ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ.
  • ಮಧ್ಯಾಹ್ನ 12:00: ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ.
  • ಮಧ್ಯಾಹ್ನ 12:30: ಸಾರ್ವಜನಿಕ ಅನ್ನ ಸಂತರ್ಪಣೆ.
  • ಮಧ್ಯಾಹ್ನ 2:00: ಶ್ರೀ ಶನೀಶ್ವರ ದೇವರ ಕಲಶ ಪ್ರತಿಷ್ಠೆ ಹಾಗೂ ಸುರೇಶ್ ಅಂಚನ್ ಮತ್ತು ತಂಡದವರಿಂದ ಗ್ರಂಥ ಪಾರಾಯಣ.
  • ರಾತ್ರಿ 7:30: ಮಂಡಳಿಯ ಸದಸ್ಯರಿಂದ ಭಜನಾ ಸೇವೆ.
  • ರಾತ್ರಿ 8:00: ಮಹಾಪೂಜೆ, ಆರತಿ ಹಾಗೂ ತೀರ್ಥ ಪ್ರಸಾದ ವಿತರಣೆ.

​ಈ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಶ್ರೀ ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿ ಪುನೀತರಾಗಬೇಕೆಂದು ಮಂಡಳಿಯ ಧರ್ಮದರ್ಶಿ ಅಶೋಕ್ ಡಿ. ಶೆಟ್ಟಿ, ಪೂಜಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಜತ್ತನ್, ಉಪಾಧ್ಯಕ್ಷ ಬ್ರಹ್ಮಾನಂದ ಶೆಟ್ಟಿಗಾರ್, ಕಾರ್ಯದರ್ಶಿ ಸುನೀಲ್ ಎಸ್‌. ಶೆಟ್ಟಿ, ಕೋಶಾಧಿಕಾರಿ ತಾರಾನಾಥ ಅಮಿನ್, ಜೊತೆ ಕಾರ್ಯದರ್ಶಿ ನಾರಾಯಣ ಮೈಂದನ್, ಜೊತೆ ಕೋಶಾಧಿಕಾರಿ ನಾರಾಯಣ ಭಂಡಾರಿ ಹಾಗೂ ಮಹಿಳಾ ವಿಭಾಗದ ಅಧ್ಯಕ್ಷೆ ವಿಲಾಸಿನಿ ಎಸ್. ಶೆಟ್ಟಿ ಅವರು ಸಮಸ್ತ ಸದ್ಭಕ್ತರನ್ನು ಆಮಂತ್ರಿಸಿದ್ದಾರೆ.



Related posts

ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ. ಮೇ27:- ಶನಿ ಜಯಂತಿ ಉತ್ಸವ .ತಿಲದೀಪೋತ್ಸವ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ನಾಯ್ಗಾಂವ್ – ವಿರಾರ್ ಶಾಖೆಜು. 28ಕ್ಕೆ “ಪ್ರಸ್ತುತ ಶಿಕ್ಷಣ ವ್ಯವಸ್ಥೆ” ಬಗ್ಗೆ ವಿಚಾರ ಸಂಕಿರಣ

Mumbai News Desk

‘AATIDONJI DINA 2025’ Festival is all set to light up Dubai on 14th September 2025,

Mumbai News Desk

ಸಾಂತಾಕ್ರೂಸ್ :  ಶ್ರೀ ಮಂತ್ರ ದೇವಿ ದೇವಸ್ಥಾನದಲ್ಲಿ ಅ 3 ರಿಂದ 11 ವರೆಗೆ ನವರಾತ್ರಿ ಉತ್ಸವ.

Mumbai News Desk

ಜ. 12ಕ್ಕೆ ಎನ್. ಪಿ. ಸುವರ್ಣ – ಪ್ರಭಾ ಸುವರ್ಣ ಅವರ ಅಭಿನಂದನಾ ಸಮಾರಂಭ.

Mumbai News Desk

25 ವರ್ಷಗಳ ಪರಿಸರ ಕಾಳಜಿ, ಕರಾವಳಿ ಅಭಿವೃದ್ಧಿಯ ದೂರದೃಷ್ಟಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಾಧನೆಯ ಪಯಣ

Mumbai News Desk