ಕಟಪಾಡಿಯ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಹಾಗೂ ಶ್ರೀ ಕ್ಷೇತ್ರ ಶಂಕರಪುರ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ, ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯದ ಶಬರಿಮಲೆ ಯಾತ್ರಾರ್ಥಿಗಳಿಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಉಡುಪಿ-ಮಂಗಳೂರು ಹೆದ್ದಾರಿಯಾಗಿ ಶಬರಿಮಲೆಗೆ ತೆರಳುವ ಅಯ್ಯಪ್ಪ ವ್ರತಧಾರಿಗಳಿಗೆ ನಿತ್ಯ ಅನ್ನದಾನ ಸೇವೆ ಹಾಗೂ ವಿಶ್ರಾಂತಿಗಾಗಿ ವ್ಯವಸ್ಥೆ ಮಾಡಲಾಗಿದೆ. ಶಬರಿಮಲೆ ಯಾತ್ರಾರ್ತಿಗಳ ಸುಗಮ ಪ್ರಯಾಣಕ್ಕಾಗಿ ಕಾಪು ಪಾಂಗಾಳ ಸೇತುವೆ ಸಮೀಪ ವಿಶ್ರಾಂತಿ ಕೊಠಡಿಯ ಅವಕಾಶ ಕಲ್ಪಿಸಲಾಗಿದ್ದು, ಜನವರಿ 1ರಿಂದ ಜನವರಿ 14ರ ತನಕ ಈ ಸೇವೆ ಜಾರಿಯಲಿರುತ್ತದೆ, ಎಂದು ಅಖಿಲ ಭಾರತೀಯ ಸಂತ ಸಮಿತಿ ಮತ್ತು ಶ್ರೀ ಕ್ಷೇತ್ರ ಶಂಕರಪುರ ಪ್ರಕಟಣೆ ಮೂಲಕ ತಿಳಿಸಿದೆ.




