30 C
Mumbai
April 24, 2026
Mumbai News Kannada
ಪ್ರಕಟಣೆ

ಡೊಂಬಿವಲಿ: ಜ. 17ರಂದು ಶ್ರೀ ಮಹಾವಿಷ್ಣು ಮಂದಿರದ 49ನೇ ವಾರ್ಷಿಕ ಸತ್ಯನಾರಾಯಣ ಪೂಜೆ, ಶನಿ ಪೂಜೆ





ಡೊಂಬಿವಲಿ: ಇಲ್ಲಿನ ಮುಂಬ್ರಾ ಮಿತ್ರ ಭಜನಾ ಮಂದಿರದ ಸಂಚಾಲಕತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಡೊಂಬಿವಲಿ (ಪಶ್ಚಿಮ) ಶ್ರೀ ಮಹಾವಿಷ್ಣು ಮಂದಿರದಲ್ಲಿ ಜನವರಿ 17ರ ಶನಿವಾರದಂದು ’49ನೇ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ’ ಅತ್ಯಂತ ವೈಭವದಿಂದ ಜರುಗಲಿದೆ.

​ಧಾರ್ಮಿಕ ಕಾರ್ಯಕ್ರಮಗಳ ವಿವರ:

​ಅಂದು ಬೆಳಿಗ್ಗೆ 6ರಿಂದ 7ರ ವರೆಗೆ ಗಣಹೋಮ, 9ರಿಂದ 10.30ರ ವರೆಗೆ ಸತ್ಯನಾರಾಯಣ ಮಹಾಪೂಜೆ ನೆರವೇರಲಿದೆ. ಮಧ್ಯಾಹ್ನ 12.30ಕ್ಕೆ ಕಳಸ ಪ್ರತಿಷ್ಠೆ ಹಾಗೂ ಶನಿಗ್ರಂಥ ಪಾರಾಯಣ ಆರಂಭವಾಗಲಿದ್ದು, ಮಧ್ಯಾಹ್ನ 12.30ರಿಂದ 3.00ರ ವರೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30ಕ್ಕೆ ಭಜನೆ, 7ರಿಂದ 7.30ರ ವರೆಗೆ ಧಾರ್ಮಿಕ ಸಭೆ ಹಾಗೂ ರಾತ್ರಿ 7.30ಕ್ಕೆ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಮತ್ತು ರಾತ್ರಿಯ ಅನ್ನಸಂತರ್ಪಣೆ ಜರುಗಲಿದೆ.

​ಶನಿ ಗ್ರಂಥ ಪಾರಾಯಣದ ದೀಪ ಪ್ರಜ್ವಲನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಹರೀಶ್ ಶೆಟ್ಟಿ (ಮಾಜಿ ಗೌರವ ಅಧ್ಯಕ್ಷರು, ಶ್ರೀ ಜಗದಾಂಬ ಮಂದಿರ), ರವಿ ಪೂಜಾರಿ (ಹೋಟೆಲ್ ವರ್ಷ ರೆಸ್ಟೋರೆಂಟ್, ಠಾಕುರ್ಲಿ), ಸಮಾಜ ಸೇವಕ ನಿತ್ಯಾನಂದ್ ಜತ್ತನ್ ಹಾಗೂ ಸಮಾಜ ಸೇವಕಿ ಜಯಂತಿ ಬಂಗೇರ ಪಾಲ್ಗೊಳ್ಳಲಿದ್ದಾರೆ.

​ರಾತ್ರಿ 7 ಗಂಟೆಗೆ ಮಂದಿರದ ಅಧ್ಯಕ್ಷ ಇಂದುಶೇಖರ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಈ ಕೆಳಗಿನ ಗಣ್ಯರು ಭಾಗವಹಿಸಲಿದ್ದಾರೆ:

  • ಡಾ. ದಿವಾಕರ್ ಶೆಟ್ಟಿ ಇಂದ್ರಾಳಿ (ಕಾರ್ಯಾಧ್ಯಕ್ಷರು, ಕರ್ನಾಟಕ ಸಂಘ, ಡೊಂಬಿವಲಿ)
  • ಸುಕುಮಾರ್ ಶೆಟ್ಟಿ (ಅಧ್ಯಕ್ಷರು, ಕರ್ನಾಟಕ ಸಂಘ, ಡೊಂಬಿವಲಿ)
  • ಸುಬ್ಬಯ್ಯ ಶೆಟ್ಟಿ (ಉಪ ಕಾರ್ಯಾಧ್ಯಕ್ಷರು, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ, ಬಂಟ್ಸ್ ಸಂಘ ಮುಂಬೈ)
  • ಆನಂದ್ ಶೆಟ್ಟಿ ಎಕ್ಕಾರ್ (ಕಾರ್ಯಾಧ್ಯಕ್ಷರು, ಬಂಟ್ಸ್ ಸಂಘ ಮುಂಬೈ – ಡೊಂಬಿವಲಿ ಪ್ರಾದೇಶಿಕ ವಲಯ)
  • ಚಂದ್ರಹಾಸ್ ಪಾಲನ್ (ಉಪ ಕಾರ್ಯಾಧ್ಯಕ್ಷರು, ಬಿಲ್ಲವರ ಅಸೋಸಿಯೇಷನ್ – ಡೊಂಬಿವಲಿ ಸ್ಥಳೀಯ ಸಮಿತಿ)
  • ಯದುವೀರ್ ಪುತ್ರನ್ (ಕಾರ್ಯಾಧ್ಯಕ್ಷರು, ಮೊಗವೀರ ವ್ಯವಸ್ಥಾಪಕ ಮಂಡಳಿ – ಡೊಂಬಿವಲಿ ಪ್ರಾದೇಶಿಕ ವಲಯ)
  • ಪ್ರಭಾಕರ್ ಶೆಟ್ಟಿ (ಉಪ ಕಾರ್ಯಾಧ್ಯಕ್ಷರು, ಬಂಟ್ಸ್ ಸಂಘ ಮುಂಬೈ – ಡೊಂಬಿವಲಿ ಪ್ರಾದೇಶಿಕ ವಲಯ)
  • ರಾಜೀವ್ ಭಂಡಾರಿ (ಕಾರ್ಯಾಧ್ಯಕ್ಷರು, ವಾಚನಾಲಯ ಸಮಿತಿ, ಕರ್ನಾಟಕ ಸಂಘ, ಡೊಂಬಿವಲಿ)

​ಈ ಪುಣ್ಯ ಕಾರ್ಯಕ್ರಮಗಳಲ್ಲಿ ಭಕ್ತಾಭಿಮಾನಿಗಳು ಮತ್ತು ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಂದಿರದ ಗೌರವ ಅಧ್ಯಕ್ಷ ನಿತಿನ್ ಪ್ರಕಾಶ್ ಪುತ್ರನ್, ಉಪಾಧ್ಯಕ್ಷ ಅರವಿಂದ್ ಪದ್ಮಶಾಲಿ, ಕಾರ್ಯದರ್ಶಿ ಸಚಿನ್ ಪೂಜಾರಿ, ಕೋಶಾಧಿಕಾರಿ ಪ್ರವೀಣ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸವಿತಾ ಸಾಲಿಯಾನ್ ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು, ಅರ್ಚಕ ವೃಂದದವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಮಾ. 23: ಕಾಂದಿವಲಿ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮ

Mumbai News Desk

ಮುಂಬೈ ವಿಶ್ವವಿದ್ಯಾನಿಲಯದಲ್ಲಿ ಎ. 4: ಮಾಜಿ ಮುಖ್ಯಮಂತ್ರಿ ಡಾ. ವೀರಪ್ಪ ಮೊಯ್ಲಿ ಅವರಿಂದ ‘ಧೀಮಂತ ಧರ್ಮಪಾಲ’ ಆತ್ಮಕಥನ ಕೃತಿ ಲೋಕಾರ್ಪಣೆ

Mumbai News Desk

 ವಿಜಯ ಕಾಲೇಜು ಮುಲ್ಕಿ ಹಳೇವಿದ್ಯಾರ್ಥಿ ಸಂಘ ಮುಂಬಯಿ ಫೆ. 22ಕ್ಕೆ ಸ್ನೇಹ ಮಿಲನ, ಗುರುವಂದನೆ,ಸಾಧಕ ಪುರಸ್ಕಾರ,

Mumbai News Desk

KARNATAKA SANGHA DUBAI GEARED UP FOR THE MEGA ‘RAJYOTSAVA 2024’ EVENT ON 10th Nov in DUBAI

Mumbai News Desk

ಬ್ರಹ್ಮಕಲಶ ಸಂಭ್ರಮದಲ್ಲಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ಮೂರ್ತಿ ದೇವಸ್ಥಾನ

Mumbai News Desk

ಆದಿ ಕಿಲ್ಲಾಡಿ ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಕಿಲ್ಪಾಡಿ, ಮೂಲ್ಕಿ : ಫೆ. 7ಕ್ಕೆ. ಸಿರಿಸಿಂಗಾರದ ನೇಮೋತ್ಸವ

Mumbai News Desk