30.9 C
Mumbai
June 8, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 65ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭ





ಸಂತಾಕ್ರೂಜ್ : ಹೊರನಾಡ ಕನ್ನಡಿಗರ ಪ್ರತಿಷ್ಟಿತ ಜಾತಿಯ ಸಂಘ-ಸಂಸ್ಥೆಗಳಲ್ಲಿ ಒಂದಾದ ಬಿಲ್ಲವರ ಅಸೋಸಿಯೇಶನ್ ಮುಂಬೈ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 65ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭವು ದಿನಾಂಕ 10 ಜನೇವರಿ 2026ರ ಶನಿವಾರ ಸಾಯಂಕಾಲ 4. 00 ಗಂಟೆಯ ಸುಮಾರಿಗೆ ಸಾಂತಾಕ್ರೂಜ್ ಪೂರ್ವದ ನೆಹರು ಮಾರ್ಗದಲ್ಲಿರುವ ಬಿಲ್ಲವ ಭವನದ 5ನೇ ಮಹಡಿಯ ಗುರು ನಾರಾಯಣ ಆಡಿಟೋರಿಯಂ ನಲ್ಲಿ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಈ ಶಾಲೆಯ ವಾರ್ಷಿಕೋತ್ಸವವು ಮಾತೃ ಸಂಸ್ಥೆಯ ಅಧ್ಯಕ್ಷ ಶ್ರೀ ಹರೀಶ ಜಿ. ಅಮೀನ್ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.

ಶಾಲೆಯ 65ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭದಲ್ಲಿ ಗೌರವ ಅಧ್ಯಕ್ಷ ಶ್ರೀ ಎಲ್. ವಿ. ಅಮೀನ್ ಮುಖ್ಯ ಅತಿಥಿಗಳಾಗಿ ಶ್ರೀಮತಿ ಜ್ಯೋತಿ ರವಿ. ಹೊಸ್ಕೋಟಿ (ಸಂಸ್ಥಾಪಕರು: ಪೋರ್ ಕ್ಲಾಜ್ ಅಕಾಡೆಮಿ IB ಮತ್ತು IGCSE ಕೋಚಿಂಗ್ ಡೊಂಬಿವಲಿ ಪೂರ್ವ) ಮತ್ತು ಗೌರವ ಅತಿಥಿಗಳಾಗಿ ಶ್ರೀ.ಸಿ ಎ.ಪ್ರಕಾಶ ಶೆಟ್ಟಿ (ಚಾರ್ಟೆಡ್ ಅಕೌಂಟೆಂಟ್ ಸಂತಾಕ್ರೂಜ್ ಪೂರ್ವ) ಇನ್ನೋರ್ವ ಅತಿಥಿಗಳಾದ
ಡಾ ಈಶ್ವರ್ ಅಲೆವೂರು ( ಪ್ರದಾನ ಸಂಪಾದಕರು: ಅಕ್ಷಯ ಮಾಸಿಕ ಪತ್ರಿಕೆ) ಆಶೀರ್ವಚನ: ಶ್ರೀ ಅಶೋಕ ಪುರೋಹಿತ (ಅಂತಾರಾಷ್ಟ್ರೀಯ ಖ್ಯಾತ ವಾಸ್ತು ಶಾಸ್ತ್ರಜ್ಞರು ಮತ್ತು ಜ್ಯೋತಿಷ್ಯರು) ಭಾಗವಹಿಸಲಿದ್ದಾರೆ.

ಶಾಲೆಯ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು,ಕನ್ನಡಾಭಿಮಾನಿಗಳು,ಶಿಕ್ಷಣ ಪ್ರೇಮಿಗಳು,ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಮಾತೃಸಂಸ್ಥೆಯ ಗೌರವ ಪ್ರದಾನ ಕಾರ್ಯದರ್ಶಿ ಶ್ರೀ ಹರೀಶ ಜಿ ಸಾಲಿಯಾನ್,ಗೌರವ ಪ್ರದಾನ ಕೋಶಾಧಿಕಾರಿ ಮತ್ತು ಶಾಲಾ ಸಮಿತಿಯ ಕಾರ್ಯಧ್ಯಕ್ಷ ಶ್ರೀ ರವಿ ಸನಿಲ್ ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಶಕುಂತಲಾ ಕೆ. ಕೋಟ್ಯಾನ್ ಹಾಗೂ ಪದಾಧಿಕಾರಿಗಳು ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ ಸಲಹೆಗಾರ ಬನ್ನಂಜೆ ರವೀಂದ್ರ ಅಮೀನ ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಮಲ್ಲಿಕಾರ್ಜುನ ಈ.ಬಡಿಗೇರ ಮತ್ತು ಶಿಕ್ಷಕ ವೃಂದವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾರ್ಯಕ್ರಮದ ಮೊದಲು ಲಘು ಉಪಹಾರ ಮತ್ತು ರಾತ್ರಿ ಪ್ರೀತಿ ಭೋಜನದ ವ್ಯವಸ್ಥೆ ಮಾಡಲಾಗಿದೆ.

===============================

===============================



Related posts

ವಿಶ್ವ ರಂಗ ದಿನಾಚರಣೆ- 2024ರ ಅಂಗವಾಗಿನಾಟಕ ರಚನಾ ಕಮ್ಮಟ ಮತ್ತು ರಂಗ ನಿರ್ದೇಶಕರ ಸಮ್ಮಿಲನ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ರೋಷನ್ ಬಾಲಕೃಷ್ಣ ಮೂಲ್ಯ ಗೆ ಶೇ 84.60 ಅಂಕ.

Mumbai News Desk

ಮುಂಬೈ ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ರಿತು ತಾವ್ಡೆ, ಶಿವಸೇನೆಯ ಸಂಜಯ್ ಘಾಡಿ ಉಪ ಮೇಯರ್ ಅಭ್ಯರ್ಥಿಯಾಗಿ ಘೋಷಣೆ

Mumbai News Desk

ಶಿವಸೇನಾದಕ್ಷಿಣ ಭಾರತ ಘಟಕದಿಂದ ಮಾಹಿತಿ ಶಿಬಿರ.

Mumbai News Desk

ಕರ್ನಾಟಕ ಸಂಘ ಮುಂಬಯಿ ವತಿಯಿಂದ ಉದ್ಯಮಿ ಉದಯ ಶೆಟ್ಟಿ ಅವರ ಭೇಟಿ.

Mumbai News Desk

ಪಾಲ್ಗರ್ ಜಿಲ್ಲಾ ಬಿಲ್ಲವರಿಂದ ವಿಹಾರ ಕೂಟ : ಮುಂಬೈ ಬಿಲ್ಲವರ   ಒಗ್ಗಟ್ಟು ಬಲಿಷ್ಠ ಗೊಳಿಸಲು ಚಂದ್ರಶೇಖರ್ ಪೂಜಾರಿ ಕರೆ

Mumbai News Desk