28.4 C
Mumbai
March 7, 2026
Mumbai News Kannada
ಸುದ್ದಿ

ಭಿವಂಡಿ:ಹಿರಿಯ ಹೋಟೆಲ್ ಉದ್ಯಮಿ ಸಮಾಜ ಸೇವಕ ದೇವು ಎಸ್ ಪೂಜಾರಿ ನಿಧನ





ಭಿವಂಡಿ, ಜ.8-  ಭಿವಂಡಿ ಪದ್ಮ ನಗರ್ ನಿವಾಸಿ ಹಿರಿಯ ಹೋಟೆಲ್ ಉದ್ಯಮಿ ಸಮಾಜ ಸೇವಕ ದೇವು ಎಸ್. ಪೂಜಾರಿಯವರು(88)  ಜ.8 ರಂದು ನಿಧನ ಹೊಂದಿದರು.ಭಿವಂಡಿ ದಾಮನ್ ನಾಕಾದಲ್ಲಿನ ಸರಾಯಿ ಬಾರ್ ಆ್ಯಂಡ್ ರೆಸ್ಟೋರೆಂಟ್(ಪ್ರಿಯಾ)ಮಾಲಕರಾಗಿದ್ದ ದೇವು ಎಸ್. ಪೂಜಾರಿಯವರು  ಬಿಲ್ಲವರ ಎಸೋಸಿಯೇಷನ್ ಮುಂಬಯಿಯ ಹಿರಿಯ ಸದಸ್ಯ, ಭಿವಂಡಿ ಸ್ಥಳೀಯ ಕಚೇರಿಯ ಸ್ಥಾಪಕ ಕಾರ್ಯಾಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದರು. ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ದೇವು ಪೂಜಾರಿಯವರು ಭಿವಂಡಿ  ಸ್ಥಳೀಯ ಕಚೇರಿ ಜಾಗ ಎಸೋಸಿಯೇಷನ್ ಗೆ ದಾನ ಮಾಡಿದ ಕೊಡುಗೈ ದಾನಿಯಾಗಿರುವರು.ಮೂಲತಃ ಗಂಜಿಮಠದವರಾಗಿದ್ದ ದೇವು ಪೂಜಾರಿಯವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ,ಅಳಿಯ,ಸೊಸೆಯಂದಿರು, ಮೊಮ್ಮಕ್ಕಳ ಸಹಿತ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ದೇವು ಪೂಜಾರಿಯವರ ನಿಧನಕ್ಕೆ

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಅಧ್ಯಕ್ಷ ಹರೀಶ್ ಜಿ ಅಮೀನ್ ಹಾಗೂ ಪದಾಧಿಕಾರಿಗಳು,ಭಿವಂಡಿ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಜಯಂತ್ ಎಸ್ ಸಾಲಿಯಾನ್ ಹಾಗೂ ಪದಾಧಿಕಾರಿಗಳು ಸದಸ್ಯರು, ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ, ಮಾಜಿನಗರ ಸೇವಕ ಭಿವಂಡಿ ಸಂತೋಷ್ ಎಂ ಶೆಟ್ಟಿ ,ಭಿವಂಡಿ ಹೋಟೆಲ್ ಓನರ್ಸ ಅಸೋಸಿಯೇಷನ್ ಅಧ್ಯಕ್ಷ ದೊಂಡೆರಂಗಡಿ ಭಾಸ್ಕರ್ ಟಿ.ಶೆಟ್ಟಿ ಇವರೆಲ್ಲ ಶೋಕವನ್ನು ವ್ಯಕ್ತಪಡಿಸಿದ್ದಾರೆ.



Related posts

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk

ಟ್ರಂಪ್ ಸುಂಕದ ಕ್ರಮಗಳ ಮೇಲಿನ ಸುಪ್ರೀಂ ಕೋರ್ಟ್ ತೀರ್ಪು ಮತ್ತು ಅದರ ಪರಿಣಾಮಗಳು

Mumbai News Desk

ನಿಟ್ಟೆಗುತ್ತು ಸುಮಿತ್ರಾ ಆರ್. ಶೆಟ್ಟಿ ನಿಧನ

Mumbai News Desk

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು

Mumbai News Desk

ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಕೆ.ಪಿ. ಆಚಾರ್ಯ ನಿಧನ

Mumbai News Desk

ಡಹಾಣೂವಿನ ಉದ್ಯಮಿ ಸಮಾಜಸೇವಕ ಅಶೋಕ್ ಎಸ್‌. ಶೆಟ್ಟಿ ಉಳೆಪಾಡಿ ಇವರಿಗೆ ವಿಶೇಷ ಸನ್ಮಾನ

Mumbai News Desk