July 23, 2026
Mumbai News Kannada
ಸುದ್ದಿ

ಭಿವಂಡಿ:ಹಿರಿಯ ಹೋಟೆಲ್ ಉದ್ಯಮಿ ಸಮಾಜ ಸೇವಕ ದೇವು ಎಸ್ ಪೂಜಾರಿ ನಿಧನ







ಭಿವಂಡಿ, ಜ.8-  ಭಿವಂಡಿ ಪದ್ಮ ನಗರ್ ನಿವಾಸಿ ಹಿರಿಯ ಹೋಟೆಲ್ ಉದ್ಯಮಿ ಸಮಾಜ ಸೇವಕ ದೇವು ಎಸ್. ಪೂಜಾರಿಯವರು(88)  ಜ.8 ರಂದು ನಿಧನ ಹೊಂದಿದರು.ಭಿವಂಡಿ ದಾಮನ್ ನಾಕಾದಲ್ಲಿನ ಸರಾಯಿ ಬಾರ್ ಆ್ಯಂಡ್ ರೆಸ್ಟೋರೆಂಟ್(ಪ್ರಿಯಾ)ಮಾಲಕರಾಗಿದ್ದ ದೇವು ಎಸ್. ಪೂಜಾರಿಯವರು  ಬಿಲ್ಲವರ ಎಸೋಸಿಯೇಷನ್ ಮುಂಬಯಿಯ ಹಿರಿಯ ಸದಸ್ಯ, ಭಿವಂಡಿ ಸ್ಥಳೀಯ ಕಚೇರಿಯ ಸ್ಥಾಪಕ ಕಾರ್ಯಾಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದರು. ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ದೇವು ಪೂಜಾರಿಯವರು ಭಿವಂಡಿ  ಸ್ಥಳೀಯ ಕಚೇರಿ ಜಾಗ ಎಸೋಸಿಯೇಷನ್ ಗೆ ದಾನ ಮಾಡಿದ ಕೊಡುಗೈ ದಾನಿಯಾಗಿರುವರು.ಮೂಲತಃ ಗಂಜಿಮಠದವರಾಗಿದ್ದ ದೇವು ಪೂಜಾರಿಯವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ,ಅಳಿಯ,ಸೊಸೆಯಂದಿರು, ಮೊಮ್ಮಕ್ಕಳ ಸಹಿತ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ದೇವು ಪೂಜಾರಿಯವರ ನಿಧನಕ್ಕೆ

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಅಧ್ಯಕ್ಷ ಹರೀಶ್ ಜಿ ಅಮೀನ್ ಹಾಗೂ ಪದಾಧಿಕಾರಿಗಳು,ಭಿವಂಡಿ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಜಯಂತ್ ಎಸ್ ಸಾಲಿಯಾನ್ ಹಾಗೂ ಪದಾಧಿಕಾರಿಗಳು ಸದಸ್ಯರು, ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ, ಮಾಜಿನಗರ ಸೇವಕ ಭಿವಂಡಿ ಸಂತೋಷ್ ಎಂ ಶೆಟ್ಟಿ ,ಭಿವಂಡಿ ಹೋಟೆಲ್ ಓನರ್ಸ ಅಸೋಸಿಯೇಷನ್ ಅಧ್ಯಕ್ಷ ದೊಂಡೆರಂಗಡಿ ಭಾಸ್ಕರ್ ಟಿ.ಶೆಟ್ಟಿ ಇವರೆಲ್ಲ ಶೋಕವನ್ನು ವ್ಯಕ್ತಪಡಿಸಿದ್ದಾರೆ.



Related posts

ಡಾ. ಜಿ. ಪಿ. ಕುಸುಮ ಅವರಿಗೆ ಮಾತ್ರ ವಿಯೋಗ

Mumbai News Desk

ಮುಲುಂಡ್:ಸದಾಶಿವ ಕುಕ್ಯಾನ್ ನಿಧನ

Mumbai News Desk

ಹೆಜಮಾಡಿ : ಸಾವಿತ್ರಿ ಡಿ ಸಾಲ್ಯಾನ್ ನಿಧನ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಲಕ್ಷ ಎಸ್ ಶೆಟ್ಟಿಗೆ  85.17 ಅಂಕ

Mumbai News Desk

ತ್ರಿಶಿಕಾ ನರೇಂದ್ರ ಶೆಟ್ಟಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk

ಭಾರತ್ ಬ್ಯಾಂಕ್ ಕುರಿತು ಪತ್ರಿಕೆಯಲ್ಲಿ ಸುಳ್ಳು ಸುದ್ದಿ ಪ್ರಕಟಣೆಯ ಬಗ್ಗೆ, ಬ್ಯಾಂಕ್ ನ ಎಂ ಡಿ ಮತ್ತು ಸಿ ಇ ಓ ವಿದ್ಯಾನಂದ ಕರ್ಕೇರರಿಂದ ಸ್ಪಷ್ಟನೆ

Mumbai News Desk