ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ, ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯವರಲ್ಲಿ ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ, ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಚಂದ್ರಶೇಖರ್ ಬೆಳ್ಚಡ ಇವರು ವಿಸ್ತ್ರುತ ಮಾಹಿತಿ ನೀಡಿದರು, ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ಪೂಜ್ಯಖಾವಂದರಿಂದ ಪಡೆದರು. ಈ ಸಂಧರ್ಭದಲ್ಲಿ ದೇವಾಡಿಗ ಮಹಾಮಂಡಲದ ಅಧ್ಯಕ್ಷರಾದ ಧರ್ಮಪಾಲ್ ದೇವಾಡಿಗ ಇವರು ಉಪಸ್ಥಿತರಿದ್ದರು. ಇದಕ್ಕೆ ಮೊದಲು ಶ್ರೀ ಮಂಜುನಾಥನ ದರ್ಶನ ಪಡೆದರು.




