31 C
Mumbai
June 8, 2026
Mumbai News Kannada
ಪ್ರಕಟಣೆ

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ: ಜ.17 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ





ಮುಂಬಯಿ : ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ, ಮಲಾಡ್ ಇದರ ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವು ಶನಿವಾರ ಜ. 17 ರಂದು ಸಂಜೆ  6 ರಿಂದ ಉತ್ಕರ್ಷ ಸಭಾಗೃಹ, ಉತ್ಕರ್ಷ ವಿದ್ಯಾ ಮಂದಿರ, ಮಲಾಡ್ ಪೂರ್ವ ಇಲ್ಲಿ ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಯ ಅಧ್ಯಕ್ಷರಾದ ನ್ಯಾ. ಜಗನ್ನಾಥ್ ಎನ್. ಶೆಟ್ಟಿ ಪಣಿಯೂರು  ಇವರ ಅಧ್ಯಕ್ಷತೆಯಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಕುಮರೇಶ್ ಆಚಾರ್ಯ ಇವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಸಮಾರಂಭದಲ್ಲಿ ಮಹಿಳಾ ವಿಭಾಗದವರಿಂದ ಭಜನೆ, ಯುವ ವಿಭಾಗದವರಿಂದ ಕುಣಿತ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ನಡೆಯಲಿರುವ ಸಭಾ ಕಾರ್ಯಕ್ರಮ. ಮುಖ್ಯ ಅತಿಥಿಯಾಗಿ, ಬಂಟರ ಸಂಘ ಮುಂಬಯಿಯ ಅಂಧೇರಿ -ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಅಮರ್ ನಾಥ್ ಶೆಟ್ಟಿ, ಮಲಾಡ್ ಪೂರ್ವ ಅಂಚೆ ಇಲಾಖೆಯ ಮುಖ್ಯಸ್ಥೆ ಜಯ ಬಂಗೇರ ಮತ್ತು ಸಾಫಲ್ಯ ತ್ರೈಮಾಸಿಕದ ಸಂಪಾದಕಿ ಡಾ. ಜಿ. ಪಿ. ಕುಸುಮ ಪಾಲ್ಗೊಳ್ಳಲಿದ್ದಾರೆ. 

ಬಳಿಕ ಹಳದಿ ಕುಂಕುಮ ನಡೆಯಲಿದೆ. 

 ಈ ಕಾರ್ಯಕ್ರಮಕ್ಕೆ ಸದಸ್ಯರು  ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ  ಪೂಜಾ ಸಮಿತಿಯ ಮಹಿಳಾ ವಿಭಾಗದ  ಕಾರ್ಯದರ್ಶಿ ಶ್ರೀಲಾ ಎಂ. ಪೂಜಾರಿ, ಕೋಶಾಧಿಕಾರಿ ನಳಿನಿ ಪಿ. ಕರ್ಕೇರ, ಉಪಕಾರ್ಯಾಧ್ಯಕ್ಷೆರುಗಳಾದ ಗೀತಾ ಜೆ. ಮೆಂಡನ್, ಲಲಿತಾ ಎಸ್ ಗೌಡ, ಸಂಧ್ಯ ಎಸ್. ಪ್ರಭು, ಜೊತೆ  ಕಾರ್ಯದರ್ಶಿಗಳಾದ ಭಾರತಿ ಎಸ್ ಆಚಾರ್ಯ, ವಿಧ್ಯಾ ಡಿ. ಆಚಾರ್ಯ, ಜೊತೆ  ಕೋಶಾಧಿಕಾರಿಗಳಾದ  ಶೋಭಾ ಎಲ್ ರಾವ್, ವಿಧ್ಯಾ ಎಸ್ ನಾಯಕ್, ಸಲಹಾ ಸಮಿತಿಯ ಮೋಹಿನಿ ಜೆ. ಶೆಟ್ಟಿ ಮತ್ತು ರತ್ನಾ ಡಿ. ಕುಲಾಲ್ ಹಾಗೂ ಮಹಿಳಾ ವಿಭಾಗದ ಎಲ್ಲಾ ಸದಸ್ಯರು ವಿನಂತಿಸಿದ್ದಾರೆ.

———-

.

 



Related posts

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ:* ವಸಾಯಿ-ದಹಾಣು ಪ್ರಾದೇಶಿಕ ಸಮಿತಿಯಿಂದ ಮಾ. 24 ಕ್ಕೆ ಅರ್ಜಿ ವಿತರಣೆ

Mumbai News Desk

ಪತ್ರಕರ್ತ ಪ್ರದೀಪ್ ಕುಮಾರೈ ಐಕಳಬಾವರವರಿಗೆ ಸುಳ್ಯ ಬಂಟರ ಸಂಘದಿಂದ ಸನ್ಮಾನ

Mumbai News Desk

ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

Mumbai News Desk

ಗೊರೆಗಾಂವ್‌ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮ ಜು21: ಗುರುಪೂರ್ಣಿಮಾ  ಆಚರಣೆ,

Mumbai News Desk

ಫೆ. 23; ಕರ್ನಾಟಕ ಸಂಘ ಪನ್ವೆಲ್ ಇದರ ವಾರ್ಷಿಕೋತ್ಸವ

Mumbai News Desk

ಡಿ.1ರಂದು ಕರ್ನಾಟಕ ಸಂಘ ಡೊಂಬಿವಲಿ : ಲಲಿತ ಕಲಾ ಹಾಗೂ ಮಹಿಳಾ ವಿಭಾಗದ ವತಿಯಿಂದ ನಾಡಹಬ್ಬ.

Mumbai News Desk