30.9 C
Mumbai
June 8, 2026
Mumbai News Kannada
ಪ್ರಕಟಣೆ

ಮಂಗಳೂರು: ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ. 18 ರಂದು ಬೃಹತ್ ರಕ್ತದಾನ ಶಿಬಿರ ಆಯೋಜನೆ





ನಗರದ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ), ಪೃಥ್ವಿ ಸೇವಾ ಟ್ರಸ್ಟ್ (ರಿ) ಮತ್ತು ವಿಶ್ವಬೆಳಕು ಸೌಹಾರ್ದ ಸಹಕಾರಿ ಸಂಘ ನಿಯಮಿತ ಇವರುಗಳ ಸಂಯುಕ್ತ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಈ ರಕ್ತದಾನ ಶಿಬಿರವು ಜನೆವರಿ 18, 2026 ರಂದು ಬೆಳಿಗ್ಗೆ 9:00 ಗಂಟೆಗೆ ಮಂಗಳೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಕ್ತನಿಧಿ ಕೇಂದ್ರದಲ್ಲಿ ನಡೆಯಲಿದೆ.

ಸೇವಾ ಭಾರತಿ ಕರ್ನಾಟಕದ ಕಾರ್ಯದರ್ಶಿಗಳಾದ ಶ್ರೀ ಕೆ. ಚನ್ನಯ್ಯ ಸ್ವಾಮಿ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮೂಲತ್ವ ಫೌಂಡೇಶನ್ ಸಂಸ್ಥಾಪಕರಾದ ಶ್ರೀ ಪ್ರಕಾಶ್ ಕೋಟ್ಯಾನ್, ರೆಡ್ ಕ್ರಾಸ್ ಸಂಸ್ಥೆಯ ಶ್ರೀ ಎ. ಶಾಂತಾರಾಮ್ ಶೆಟ್ಟಿ, ಪೃಥ್ವಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀಮತಿ ಲೋಲಾಕ್ಷಿ ಫೆರ್ನಾಂಡಿಸ್ ಮತ್ತು ವಿಶ್ವಬೆಳಕು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಮತಿ ಅಕ್ಷತಾ ಎನ್. ಕದ್ರಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

“ರಕ್ತದಾನವು ಮಹಾದಾನವಾಗಿದ್ದು, ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳ ಜೀವ ಉಳಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಮಾನವೀಯ ಕಾರ್ಯದಲ್ಲಿ ಭಾಗಿಯಾಗಬೇಕು” ಎಂದು ಆಯೋಜಕರು ವಿನಂತಿಸಿದ್ದಾರೆ.



Related posts

ದಿ. ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್ (ರಿ) ಮುಂಬಯಿ. ನಾಳೆ (ಸೆ. 16) ವಿಶ್ವಕರ್ಮ ಮಹೋತ್ಸವ.

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ವತಿಯಿಂದ (ನಾಳೆ) ಫೆ.26 ರಂದು ಪಾನಕ ಸೇವೆ

Mumbai News Desk

ಕರ್ನಾಟಕ ಸಮಾಜ ಸೂರತ್ : ನ. 24ರಂದು ಕರ್ನಾಟಕ ರಾಜ್ಯೋತ್ಸವ

Mumbai News Desk

ಶ್ರೀ ಶನೀಶ್ವರ ಮಹತೋಭಾರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್. ಶನಿ ಕಥೆ ಪ್ರವಚನ ಮತ್ತು  ಗ್ರಂಥ ವಾಚನ ಶಿಕ್ಷಣ ತರಬೇತಿ – 

Mumbai News Desk

ಮೊಗವೀರ ಪ್ರೀಮಿಯರ್ ಲೀಗ್ (ಎಂಪಿಎಲ್) ಕ್ರಿಕೆಟ್ ಟೂರ್ನಮೆಂಟ್ – 2026ಕ್ಕೆ ಆಹ್ವಾನ

Mumbai News Desk

 ನ 29,30 ಮತ್ತು ಡಿ 1 ಸತತ ಮೂರು ದಿವಸ  ಮಕ್ಕಳ ಕಲರವದಲ್ಲಿ ನಾಟಕೋತ್ಸವ, ಯಕ್ಷಗಾನೋತ್ಸವ, ವಾರ್ಷಿಕೋತ್ಸವಗಳ ವಿಜೃಂಭಣೆಯ ಮಹಾಮೇಳ.

Mumbai News Desk