September 6, 2026
Mumbai News Kannada
ಸುದ್ದಿ

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್,ಪೃಥ್ವಿ ಸೇವಾ ಟ್ರಸ್ಟ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ





ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಪೃಥ್ವಿ ಸೇವಾ ಟ್ರಸ್ಟ್ ಮಂಗಳೂರು, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದಿಂದ ಉಚಿತ ಬೃಹತ್ ರಕ್ತದಾನ ಶಿಬಿರವು ನಡೆಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸೇವಾ ಭಾರತಿ ಕರ್ನಾಟಕ ಇದರ ಕಾರ್ಯದರ್ಶಿಯಾದ ಕೆ ಚನ್ನಯ್ಯ ಸ್ವಾಮಿ ಇವರು ಉದ್ಘಾಟಿಸಿ ಮಾತಾಡಿದರು ರಕ್ತದಾನವು ಖರೀದಿಸಿ ಮಾಡುವ ದಾನವಲ್ಲ ಸ್ವಯಂ ಪ್ರೇರಿತರಾಗಿ ತಮ್ಮ ರಕ್ತವನ್ನು ದಾನ ಮಾಡುವುದೇ ಅಮೂಲ್ಯವಾದ ದಾನ ಎಂದು ನುಡಿದರು. ರೆಡ್ ಕ್ರಾಸ್ ಸಂಸ್ಥೆಯ ಸಿಎ ಶಾಂತರಾಮ್ ಶೆಟ್ಟಿ ಅವರು ಮಾತಾಡಿ ರೇಟ್ ಕ್ರಾಸ್ ಸಂಸ್ಥೆಯು ಇನ್ನೂ ಹಲವಾರು ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿದೆ ಎಂದು ಹೇಳಿದರು ಈ ರಕ್ತದಾನ ಶಿಬಿರದಲ್ಲಿ ಸುಮಾರು ನೂರಕ್ಕೂ ಮಿಕ್ಕಿ ರಕ್ತದಾನಿಗಳು ಭಾಗವಹಿಸಿದರು.


ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಪೃಥ್ವಿ ಸೇವಾ ಟ್ರಸ್ಟ್ ನ ಅಧ್ಯಕ್ಷೇ ಲೋಲಾಕ್ಷಿ ಫರ್ನಂಡಿಸ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷತ ಕದ್ರಿ, ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಟ್ರಸ್ಟಿ ಕಲ್ಪನಾ ಕೋಟಿಯನ್, ಶೈನೀ ಉಪಸ್ಥಿತಿದ್ದರು,


ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷೇ ಅಕ್ಷತಾ ಕದ್ರಿ ಅವರು ಸ್ವಾಗತ ಮಾಡಿದರು, ಪೃಥ್ವಿ ಸೇವಾ ಟ್ರಸ್ಟ್ ನ ಅಧ್ಯಕ್ಷೇ ಲೋಲಾಕ್ಷಿ ಫರ್ನಾಂಡಿಸ್ ವಂದನಾರ್ಪಣೆ ಮಾಡಿದರು, ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಶೈನಿ ಇವರು ನೆರವೇರಿಸಿದರು.



Related posts

ಪರೀಕ್ಷಾ ಅಕ್ರಮ ಹಾಗೂ ತೀವ್ರ ಪ್ರತಿಭಟನೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

Mumbai News Desk

” ಸಾಧನೆಯ ಮೂಲಕ ಮನಸ್ಸನ್ನು ತಿಳಿಗೊಳಿಸುವುದೇ ಜೀವನದ ಮುಖ್ಯ ಉದ್ದೇಶ “: ಶ್ರೀ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ.

Mumbai News Desk

ನೆಲೆ ಫೌಂಡೇಶನ್ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ ಪ್ರದಾನ : ಮೂಲತ್ವ ಪೌಂಡೇಶನ್ ನ ಕಾರ್ಯ ಶ್ಲಾಘನೀಯ – ಆರ್ ಎಸ್ ಎಸ್ ಮುಖಂಡ ವಾಮನ್ ಶೆಣೈ ಅಭಿಮತ

Mumbai News Desk

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಜವಾಬ್ದಾರಿ: ಮಹಾತ್ಮ ಜ್ಯೋತಿರಾವ್ ಫುಲೆ 200ನೇ ಜನ್ಮ ದಿನಾಚರಣೆಯ ಉನ್ನತ ಮಟ್ಟದ ಸಮಿತಿಗೆ ನಾಮನಿರ್ದೇಶನ

Mumbai News Desk

ಮಂಗಳೂರು ವಿವಿ ಘಟಿಕೋತ್ಸವ : ರೋಹನ್ ಮೊಂತೇರೋ, ಕನ್ಯಾನ ಸದಾಶಿವ ಶೆಟ್ಟಿ, ಎಂ. ಎನ್ ರಾಜೇಂದ್ರಕುಮಾರ್ ಗೆ ಗೌರವ ಡಾಕ್ಟರೇಟ್

Mumbai News Desk

ನಿಶಾ ಪೂಜಾರಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk