
ಭಯಂದರ್ (ಜ. 22):
ಭಯಂದರ್ ಪೂರ್ವದ ಡಾ. ಅರುಣೋದಯ ರೈ ಅವರು ಸ್ಥಾಪಿಸಿರುವ ರೈ ಸಮಿತಿ ಎಜುಕೇಷನಲ್ ಟ್ರಸ್ಟ್ ಸಂಚಾಲಿತ ಸೈಂಟ್ ಆಗ್ನೆಸ್ ಇಂಗ್ಲಿಷ್ ಹೈಸ್ಕೂಲ್ಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ಶ್ರೀ ಅನಂತ ಅಸ್ರಣ್ಣರು ಜನವರಿ 21 ರಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಅಸ್ರಣ್ಣ ಅವರು ಶಾಲೆಯ ಸಂಸ್ಥಾಪಕರಾದ ಡಾ. ಅರುಣೋದಯ ರೈ ಅವರನ್ನು ಗೌರವಿಸಿದರು. ತದನಂತರ ಶಾಲೆಯ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಆಶೀರ್ವಚನ ನೀಡಿದರು.
”ವಿದ್ಯಾ ಸಂಸ್ಥೆಗಳು ಕೇವಲ ಅಕ್ಷರ ಜ್ಞಾನವನ್ನಷ್ಟೇ ನೀಡದೆ, ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರವನ್ನು ನೀಡುವ ವಿದ್ಯಾ ದೇಗುಲಗಳಾಗಬೇಕು. ಈ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲಿ. ಸತ್ಕಾರ್ಯಗಳನ್ನು ಮಾಡುವ ಮನೋಬಲ ಅವರಲ್ಲಿ ಬೆಳೆಯಲಿ,” ಎಂದು ಹಾರೈಸಿದರು.
ಶ್ರೀಗಳ ಈ ಪವಿತ್ರ ಭೇಟಿಯು ಶಾಲೆಯ ವಿದ್ಯಾರ್ಥಿಗಳಲ್ಲಿ ಹಾಗೂ ಸಿಬ್ಬಂದಿ ವರ್ಗದಲ್ಲಿ ಹೊಸ ಪ್ರೇರಣೆ ಮತ್ತು ಸಂತೋಷವನ್ನು ತುಂಬಿತು.




