July 23, 2026
Mumbai News Kannada
ಸುದ್ದಿ

ಉಡುಪಿ : ಕೋಡಿಬೆಂಗ್ರೆ ಮಗುಚಿ ಬಿದ್ದ ಟೂರಿಸ್ಟ್ ಬೋಟ್, ಇಬ್ಬರು ಸಾವು







ಉಡುಪಿ ಜಿಲ್ಲೆಯ ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದ್ದು, ಮೈಸೂರಿನ 28 ಬಿಪಿಒ ಉದ್ಯೋಗಿಗಳ ಪೈಕಿ ನಾಲ್ವರು ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಆ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿದ ಪ್ರವಾಸಿಗರನ್ನು ರಕ್ಷಿಸಲಾಗಿದೆ. ಲೈಫ್ ಜಾಕೆಟ್‌ಗಳ ಕೊರತೆ ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆಯಿಂದಲೇ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಹೇಳಲಾಗಿದೆ.
ಸ್ಥಳೀಯ ರೆಸಾರ್ಟ್‌ನಲ್ಲಿ ತಂಗಿದ್ದ 10 ಮಂದಿ ಪ್ರವಾಸಿಗರು ಸಮುದ್ರ ವಿಹಾರಕ್ಕಾಗಿ ದೋಣಿಯಲ್ಲಿ ತೆರಳಿದ್ದಾಗ ಸಮುದ್ರದ ಮಧ್ಯಭಾಗದಲ್ಲಿ ಅಲೆಗಳ ಹೊಡೆತಕ್ಕೆ ದೋಣಿ ಅಕಸ್ಮಿಕವಾಗಿ ಪಲ್ಟಿಯಾಗಿದೆ.
ದುರಂತದ ಸಮಯದಲ್ಲಿ ದೋಣಿಯಲ್ಲಿದ್ದ ಯಾವುದೇ ಪ್ರವಾಸಿಗರು ಲೈಫ್ ಜಾಕೆಟ್ ಧರಿಸಿರಲಿಲ್ಲ ಎಂಬ ಆಘಾತಕಾರಿ ಅಂಶ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ. ದೋಣಿ ಮಗುಚಿದ ತಕ್ಷಣ ಸ್ಥಳೀಯ ಮೀನುಗಾರರು ಮತ್ತು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪ್ರವಾಸಿಗರನ್ನು ದಡಕ್ಕೆ ತಂದಿದ್ದಾರೆ. ಸದ್ಯ ತೀವ್ರವಾಗಿ ಅಸ್ವಸ್ಥಗೊಂಡಿರುವ ನಾಲ್ವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸುರಕ್ಷತಾ ನಿಯಮಗಳ ಉಲ್ಲಂಘನೆಯ ಕುರಿತು ತನಿಖೆ ಕೈಗೊಂಡಿದ್ದಾರೆ.



Related posts

ಪಡುಬಿದ್ರಿ ನಡಿಪಟ್ನ ಮೊಗವೀರ ಮಹಾಸಭಾ ಮುಂಬಯಿ ಶಾಖೆಯ 136ನೇ ವಾರ್ಷಿಕ ಮಹಾಸಭೆ.

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ, ಮುಂಡ್ಕೂರು ವತಿಯಿಂದ ಏರ್ ಕಂಡಿಷನರ್ ಸ್ಫೋಟಗೊಂಡ ದುರ್ಘಟನೆಯಲ್ಲಿ ಮೃತರಾದ ತಾರಾನಾಥ ವಿ ಬಂಜನ್ ಅವರಿಗೆ ಶ್ರದ್ಧಾಂಜಲಿ.

Mumbai News Desk

ರಾಜ್ಯವ್ಯಾಪಿ ಕಂಬಳಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ :ಯಾವ ಮೂಲೆಯಲ್ಲಾದ್ರೂ ಕಂಬಳ ನಡೆಸಲು ಆದೇಶ

Mumbai News Desk

ಅವಿಭಜಿತ ಜಿಲ್ಲೆಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

Mumbai News Desk

ಮೊದಲ ಮಳೆಗೆ ತತ್ತರಿಸಿದ ಮುಂಬಯಿ, ತಲ್ಲಣಗೊಂಡ ಜನತೆ,ಅಪಾರ ಹಾನಿ.

Mumbai News Desk

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ

Mumbai News Desk