31.6 C
Mumbai
June 8, 2026
Mumbai News Kannada
ಸುದ್ದಿ

ಉಡುಪಿ : ಕೋಡಿಬೆಂಗ್ರೆ ಮಗುಚಿ ಬಿದ್ದ ಟೂರಿಸ್ಟ್ ಬೋಟ್, ಇಬ್ಬರು ಸಾವು





ಉಡುಪಿ ಜಿಲ್ಲೆಯ ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದ್ದು, ಮೈಸೂರಿನ 28 ಬಿಪಿಒ ಉದ್ಯೋಗಿಗಳ ಪೈಕಿ ನಾಲ್ವರು ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಆ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿದ ಪ್ರವಾಸಿಗರನ್ನು ರಕ್ಷಿಸಲಾಗಿದೆ. ಲೈಫ್ ಜಾಕೆಟ್‌ಗಳ ಕೊರತೆ ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆಯಿಂದಲೇ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಹೇಳಲಾಗಿದೆ.
ಸ್ಥಳೀಯ ರೆಸಾರ್ಟ್‌ನಲ್ಲಿ ತಂಗಿದ್ದ 10 ಮಂದಿ ಪ್ರವಾಸಿಗರು ಸಮುದ್ರ ವಿಹಾರಕ್ಕಾಗಿ ದೋಣಿಯಲ್ಲಿ ತೆರಳಿದ್ದಾಗ ಸಮುದ್ರದ ಮಧ್ಯಭಾಗದಲ್ಲಿ ಅಲೆಗಳ ಹೊಡೆತಕ್ಕೆ ದೋಣಿ ಅಕಸ್ಮಿಕವಾಗಿ ಪಲ್ಟಿಯಾಗಿದೆ.
ದುರಂತದ ಸಮಯದಲ್ಲಿ ದೋಣಿಯಲ್ಲಿದ್ದ ಯಾವುದೇ ಪ್ರವಾಸಿಗರು ಲೈಫ್ ಜಾಕೆಟ್ ಧರಿಸಿರಲಿಲ್ಲ ಎಂಬ ಆಘಾತಕಾರಿ ಅಂಶ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ. ದೋಣಿ ಮಗುಚಿದ ತಕ್ಷಣ ಸ್ಥಳೀಯ ಮೀನುಗಾರರು ಮತ್ತು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪ್ರವಾಸಿಗರನ್ನು ದಡಕ್ಕೆ ತಂದಿದ್ದಾರೆ. ಸದ್ಯ ತೀವ್ರವಾಗಿ ಅಸ್ವಸ್ಥಗೊಂಡಿರುವ ನಾಲ್ವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸುರಕ್ಷತಾ ನಿಯಮಗಳ ಉಲ್ಲಂಘನೆಯ ಕುರಿತು ತನಿಖೆ ಕೈಗೊಂಡಿದ್ದಾರೆ.



Related posts

ಶ್ರೀ ಸುಬ್ರಮಣ್ಯ ಮಹಾಗಣಪತಿ ಸ್ಪೋರ್ಟ್ ಕ್ಲಬ್ ತೋಕೂರು ಗೆ, ಅರಸು ಪ್ರಶಸ್ತಿ 2024

Mumbai News Desk

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ನೇಮಕ

Mumbai News Desk

ಕರ್ನಾಟಕ : ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬರ – ಹಾಲಿನ ದರ ಹೆಚ್ಚಳ

Mumbai News Desk

ಹೈದರಾಬಾದ್ ಹೊರವಲಯದಲ್ಲಿ ರೈಲ್ವೆ ಹಳಿ ಮೇಲೆ ಕಿಯಾ ಸೋನೆಟ್ ಕಾರನ್ನು 8 ಕಿಲೋಮೀಟರ್ ಓಡಿಸಿದ ಮಹಿಳೆ, ರೈಲು ಸಂಚಾರ ಸ್ಥಗಿತ.

Mumbai News Desk

ಹೆಜಮಾಡಿ : ಸಾವಿತ್ರಿ ಡಿ ಸಾಲ್ಯಾನ್ ನಿಧನ

Mumbai News Desk

ಸುರತ್ಕಲ್ : 2 ತಂಡಗಳ ನಡುವೆ ಗಲಾಟೆ, ಇಬ್ಬರಿಗೆ ಚೂರಿ ಇರಿತ

Mumbai News Desk