32.3 C
Mumbai
June 7, 2026
Mumbai News Kannada
ಪ್ರಕಟಣೆ

ಜ. 31ರಿಂದ ಹೆಜಮಾಡಿಯಲ್ಲಿ ಮಹಿಳಾ ಕ್ರಿಕೆಟ್ ಹಬ್ಬ:ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಪ್ರೀಮಿಯರ್ ಲೀಗ್





ಯುವವಾಹಿನಿ ಪಡುಬಿದ್ರಿ ಘಟಕದ ಆಶ್ರಯದಲ್ಲಿ ಜ.31, ಫೆ.1ರಂದು ಹೆಜಮಾಡಿಯ ಬಸ್ತಿಪಡ್ಪು ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬಿಲ್ಲವ ಪ್ರೀಮಿಯರ್ ಲೀಗ್-2026 ಮಹಿಳಾ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಲ್ಲವ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ ಮಾತನಾಡಿ, ದುಬೈ, ಕುವೈಟ್ 2, ಬೆಂಗಳೂರು, ಕೊಲ್ಯ, ಕಾರ್ಕಳ, ಪಡುಬಿದ್ರಿ ಮತ್ತು ಹೆಜಮಾಡಿಯ ಒಟ್ಟು 8 ಮಹಿಳಾ ತಂಡಗಳು ಭಾಗವಹಿಸುವ ಲೀಗ್ ಮಾದರಿ ಕ್ರಿಕೆಟ್ ಪಂದ್ಯಾವಳಿಯ ಪ್ರತಿಯೊಂದು ತಂಡದಲ್ಲೂ ಇತರ ಸಮಾಜದ ಐವರು ಮಹಿಳಾ ಕ್ರಿಕೆಟಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣ ಮಹಿಳಾ ಕ್ರಿಕೆಟ್ ಪ್ರತಿಭೆಗಳಿಗೆ ಮುನ್ನೆಲೆಗೆ ಬರಲು ಉತ್ತಮ ಅವಕಾಶ ಕಲ್ಪಿಸಲಾಗಿದೆ ಎಂದರು.
ಜ.31ರಂದು ಬೆಳಗ್ಗೆ 10ಗಂಟೆಗೆ ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷ ವಿಧಿತ್ ಪೂಜಾರಿ karnire ಅಧ್ಯಕ್ಷತೆಯಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟು ರಕ್ಷಾ ಪೂಜಾರಿ ಕಾರ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಮಾಜಿ ಸಚಿವ ವಿನಯಕುಮಾರ್ ಸೊರಕೆ, ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾಂಜಲಿ ಸುವರ್ಣ, ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಕಾರ್ಯದ್ಯಕ್ಷ ಸೂರ್ಯಕಾಂತ್ ಜೆ.ಸುವರ್ಣ ಉಪಸ್ಥಿತರಿರುವರು.
ಫೆ.1ರಂದು ಸಂಜೆ 6ಗಂಟೆಗೆ ನಡೆಯುವ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಗಣ್ಯರು ಭಾಗಿಯಾಗಲಿದ್ದಾರೆ.
ಲೀಗ್ ಮಾದರಿಯಲ್ಲಿ ತಲಾ 6 ಓವರ್‌ಗಳ ಪಂದ್ಯ ನಡೆಯಲಿದ್ದು ವಿಜೇತರಿಗೆ ಪ್ರಥಮ ಪ್ರಶಸ್ತಿ ರೂಪದಲ್ಲಿ 1 ಲಕ್ಷ ರೂ., ದ್ವಿತೀಯ 50 ಸಾವಿರ ರೂ., ತೃತೀಯ 25 ಸಾವಿರ ರೂ. ಜೊತೆಗೆ ಸರಣಿ ಶ್ರೇಷ್ಠರಿಗೆ ನಗದು 20 ಸಾವಿರ, ಅತ್ಯುತ್ತಮ ಬ್ಯಾಟರ್ ನಗದು 10 ಸಾವಿರ ರೂ., ಅತ್ಯುತ್ತಮ ಬೌಲರ್ ನಗದು 10 ಸಾವಿರ ವೈಯಕ್ತಿಕ ಬಹುಮಾನಗಳಿವೆ.
ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷ ವಿಧಿತ್ ಪೂಜಾರಿ ಕರ್ನಿರೆ, ಮಾಜಿ ಅಧ್ಯಕ್ಷರಾದ ಯಶೋದಾ, ರವಿರಾಜ್ ಕೋಟ್ಯಾನ್ ಮತ್ತು ಅಶೋಕ್ ಪೂಜಾರಿ ಉಪಸ್ಥಿತರಿದ್ದರು.



Related posts

ಶ್ರೀ ಜಗದಂಬಾ ಮಂದಿರ ಡೊಂಬಿವಲಿ : ಜು. 29ಕ್ಕೆ ನಾಗರ ಪಂಚಮಿ ಉತ್ಸವ

Mumbai News Desk

ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ: ಮಾರ್ಚ್ 6ರಂದು ಬಪ್ಪನಾಡಿನಿಂದ ಹಸಿರು ವಾಣಿ ಹೊರೆ ಕಾಣಿಕೆ ಸಮರ್ಪಣೆ

Mumbai News Desk

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk

ಮಾ. 31 : ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ಕಾಪುವಿನವರೆಗೆ ಭಜನಾ ಸಂಕೀರ್ತನಾ ಪಾದಯಾತ್ರೆ

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ಅ. 4 ರಂದು ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.

Mumbai News Desk

ಡಿ. 21: ಮುಂಬಯಿ ಕನ್ನಡ ಸಂಘದ ದತ್ತಿ ಉಪನ್ಯಾಸ ಕಾರ್ಯಕ್ರಮ

Mumbai News Desk