September 6, 2026
Mumbai News Kannada
ಪ್ರಕಟಣೆ

ಜ. 31ರಿಂದ ಹೆಜಮಾಡಿಯಲ್ಲಿ ಮಹಿಳಾ ಕ್ರಿಕೆಟ್ ಹಬ್ಬ:ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಪ್ರೀಮಿಯರ್ ಲೀಗ್





ಯುವವಾಹಿನಿ ಪಡುಬಿದ್ರಿ ಘಟಕದ ಆಶ್ರಯದಲ್ಲಿ ಜ.31, ಫೆ.1ರಂದು ಹೆಜಮಾಡಿಯ ಬಸ್ತಿಪಡ್ಪು ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬಿಲ್ಲವ ಪ್ರೀಮಿಯರ್ ಲೀಗ್-2026 ಮಹಿಳಾ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಲ್ಲವ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ ಮಾತನಾಡಿ, ದುಬೈ, ಕುವೈಟ್ 2, ಬೆಂಗಳೂರು, ಕೊಲ್ಯ, ಕಾರ್ಕಳ, ಪಡುಬಿದ್ರಿ ಮತ್ತು ಹೆಜಮಾಡಿಯ ಒಟ್ಟು 8 ಮಹಿಳಾ ತಂಡಗಳು ಭಾಗವಹಿಸುವ ಲೀಗ್ ಮಾದರಿ ಕ್ರಿಕೆಟ್ ಪಂದ್ಯಾವಳಿಯ ಪ್ರತಿಯೊಂದು ತಂಡದಲ್ಲೂ ಇತರ ಸಮಾಜದ ಐವರು ಮಹಿಳಾ ಕ್ರಿಕೆಟಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣ ಮಹಿಳಾ ಕ್ರಿಕೆಟ್ ಪ್ರತಿಭೆಗಳಿಗೆ ಮುನ್ನೆಲೆಗೆ ಬರಲು ಉತ್ತಮ ಅವಕಾಶ ಕಲ್ಪಿಸಲಾಗಿದೆ ಎಂದರು.
ಜ.31ರಂದು ಬೆಳಗ್ಗೆ 10ಗಂಟೆಗೆ ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷ ವಿಧಿತ್ ಪೂಜಾರಿ karnire ಅಧ್ಯಕ್ಷತೆಯಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟು ರಕ್ಷಾ ಪೂಜಾರಿ ಕಾರ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಮಾಜಿ ಸಚಿವ ವಿನಯಕುಮಾರ್ ಸೊರಕೆ, ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾಂಜಲಿ ಸುವರ್ಣ, ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಕಾರ್ಯದ್ಯಕ್ಷ ಸೂರ್ಯಕಾಂತ್ ಜೆ.ಸುವರ್ಣ ಉಪಸ್ಥಿತರಿರುವರು.
ಫೆ.1ರಂದು ಸಂಜೆ 6ಗಂಟೆಗೆ ನಡೆಯುವ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಗಣ್ಯರು ಭಾಗಿಯಾಗಲಿದ್ದಾರೆ.
ಲೀಗ್ ಮಾದರಿಯಲ್ಲಿ ತಲಾ 6 ಓವರ್‌ಗಳ ಪಂದ್ಯ ನಡೆಯಲಿದ್ದು ವಿಜೇತರಿಗೆ ಪ್ರಥಮ ಪ್ರಶಸ್ತಿ ರೂಪದಲ್ಲಿ 1 ಲಕ್ಷ ರೂ., ದ್ವಿತೀಯ 50 ಸಾವಿರ ರೂ., ತೃತೀಯ 25 ಸಾವಿರ ರೂ. ಜೊತೆಗೆ ಸರಣಿ ಶ್ರೇಷ್ಠರಿಗೆ ನಗದು 20 ಸಾವಿರ, ಅತ್ಯುತ್ತಮ ಬ್ಯಾಟರ್ ನಗದು 10 ಸಾವಿರ ರೂ., ಅತ್ಯುತ್ತಮ ಬೌಲರ್ ನಗದು 10 ಸಾವಿರ ವೈಯಕ್ತಿಕ ಬಹುಮಾನಗಳಿವೆ.
ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷ ವಿಧಿತ್ ಪೂಜಾರಿ ಕರ್ನಿರೆ, ಮಾಜಿ ಅಧ್ಯಕ್ಷರಾದ ಯಶೋದಾ, ರವಿರಾಜ್ ಕೋಟ್ಯಾನ್ ಮತ್ತು ಅಶೋಕ್ ಪೂಜಾರಿ ಉಪಸ್ಥಿತರಿದ್ದರು.



Related posts

ಮಾ 9 ರಿಂದ 11 ರ ವರಗೆ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯ 9ನೇ ವಾರ್ಷಿಕೋತ್ಸವ.

Mumbai News Desk

ನಾಸಿಕ್: ನಾಳೆ(ಜ.26) ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ

Mumbai News Desk

ಮೇ 31, 2026 ರಂದು ಕುಮಾರಿ ಲಿಖಿತಾ ರತ್ನಾಕರ ಕರ್ಕೇರರ ಭರತನಾಟ್ಯಂ ಪ್ರಥಮ ರಂಗ ಪ್ರವೇಶ

Mumbai News Desk

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk

ಅಂದೇರಿ  :ಶ್ರೀ ಮದ್ಭಾರತ  ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ಮಂದಿರದ 22ನೇ ಪ್ರತಿಷ್ಟಾ ಮಹೋತ್ಸವ.

Mumbai News Desk

ಮಿಸ್ಟರ್/ಮಿಸ್/ಮಿಸೆಸ್ ಕರ್ನಾಟಕ ಸ್ಟೈಲ್ ಐಕಾನ್‌-2025: ಗ್ರ್ಯಾಂಡ್ ಫಿನಾಲೆ ಡಿ. 18 ರಂದು ನಿಶಿತಾ ಸೂರ್ಯಕಾಂತ್ ಸುವರ್ಣ ಆಯೋಜನೆಯಲ್ಲಿ ‘ಸೀಸನ್‌ 6’ ರ ಅಂತಿಮ ಹಂತ

Mumbai News Desk