32 C
Mumbai
March 7, 2026
Mumbai News Kannada
ತುಳುನಾಡು

ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ, ಸಮಾಜಿಕ ಕಾರ್ಯಕರ್ತ ಜನಾರ್ಧನ ಬಂಗೇರ ಅವರಿಗೆ ಸನ್ಮಾನ





ಸಮಾಜ ಸೇವೆ ಮೂಲಕ ಜೀವನದಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಂಡರೆ ಸಾರ್ಥಕವಾಗಲು ಸಾಧ್ಯ ಎಂದು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು. ಅವರು ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್‌ನ ಸಭಾಂಗಣದಲ್ಲಿ ಶುಕ್ರವಾರ ನಡೆದ ಹೊಸ ಅಂಗಳ ತಿಂಗಳ ಬೆಳಕು ಹಾಗೂ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಮೂಲ್ಕಿ ಕೆ.ಎಸ್. ರಾವ್ ನಗರದ ಸಾಮಾಜಿಕ ಕಾರ್ಯಕರ್ತ ಜನಾರ್ದನ ಬಂಗೇರವವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಜನಾರ್ಧನ ಬಂಗೇರ ಮಾತನಾಡುತ್ತಾ ಮೂಲ್ಕಿ ಕೆ.ಎಸ್. ರಾವ್ ನಗರದಲ್ಲಿ ಬಹಳಷ್ಟು ಸಮಸ್ಯೆಗಳು ಕಾಡುತ್ತಿದ್ದ ಸಂದರ್ಭದಲ್ಲಿ ಜನರಿಗೆ ನೀರಿನ ಅಭಾವ ಬಂದಾಗ ಪ್ರತಿಭಟನೆಗಳನ್ನು ನಡೆಸಿ ತುಂಬೆಯಿಂದ ನೀರು ಸರಬರಾಜು ಮಾಡಲು ಪ್ರಯತ್ನಿಸಿದೆ, ಅದಲ್ಲದೆ ಇಲ್ಲಿಯ 500 ಮನೆಯ ಜನರಿಗೆ ಹಕ್ಕು ಪತ್ರ ಕೊಡುವುದಕ್ಕೆ ಪ್ರಯತ್ನ ಮಾಡಿ ಯಶಸ್ವಿಯಾಗಿದ್ದೇನೆ. ಕೆಲವು ಮನೆಗಳಿಗೆ ಹೌಸಿಂಗ್ ಬೋರ್ಡ್‌ನಿಂದ ಮನೆ ನಿರ್ಮಾಣಕ್ಕೆ ಸಾಲ ಸಿಗುವುದಕ್ಕೆ ಪ್ರಯತ್ನಿಸಿದ್ದೇನೆ ಹೀಗೆ ಒಂದಲ್ಲ ಹಲವಾರು ಸಾಮಾಜಿಕ ಕೆಲಸಗಳನ್ನು ಮಾಡಿದ್ದೇನೆ. ಇನ್ನೂ ಕೂಡ ಮಾಡಲು ತಮ್ಮೆಲ್ಲರ ಸಹಕಾರ ಬೇಕೆಂದು ಹೇಳಿದರು.


ಮುಖ್ಯ ಅತಿಥಿಗಳಾಗಿ ಸಾಹಿತಿ ಜೊಸ್ಸಿ ಪಿಂಟೋ ಕಿನಿಗೋಳಿ, ಕಾಂತು ಸೇವೆಗಾರ ಟ್ರಸ್ಟ್‌ನ ಅಧ್ಯಕ್ಷ ವಾಸು ಪೂಜಾರಿ ಕೊಲಕಾಡಿ, ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಿನಾಥ ಪಡಂಗ, ಶ್ರೀ ನಾರಾಯಣ ಗುರು ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ ಮತ್ತು ಹಳೆಯಂಗಡಿ ಬಂಕಿ ನಾಯಕರು, ಕೇಶವಾನಂದ ಗುರೂಜಿ ಚಿತ್ರಾಪು, ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್, ವಾಸು ಪೂಜಾರಿ ಚಿತ್ರಾಪು, ನಿವೃತ್ತ ಪ್ರಾಂಶುಪಾಲ ವೈ ಎನ್ ಸಾಲ್ಯಾನ್, ಉದ್ಯಮಿ ಜೋನ್ ಕ್ವಾಡ್ರಸ್, ಜೆ.ಸಿ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಹಬಿಬುಲ್ಲ, ನ್ಯಾಯವಾದಿ ರವೀಶ್ ಕಾಮತ್, ದೀಪ್ತಿ ಸಾಧು ಅಂಚನ್ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಕೆ. ಎಮ್ ಕೊಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.
ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ. ಸಾಲ್ಯಾನ್ ಸ್ವಾಗತಿಸಿದರು. ವಾಮನ್ ಕೋಟ್ಯಾನ್ ಧನ್ಯವಾದ ಅರ್ಪಿಸಿದರು. ರವಿಚಂದ್ರ ಕಾರ್ಯಕ್ರಮ ನಿರ್ವಹಿಸಿದರು.



Related posts

ಮುಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ 153 ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಸಮವಸ್ತ್ರ ಹೊಲಿಗೆಯ ಮೊತ್ತ ವಿತರಣೆ

Mumbai News Desk

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ದೈವ ಪಾತ್ರಿ ಮುರಳಿ ಪೂಜಾರಿಗೆ ಸನ್ಮಾನ

Mumbai News Desk

ಮೂಲ್ಕಿ ಪುನರೂರು ಶ್ರೀದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ

Mumbai News Desk

ಮೂಲ್ಕಿ : ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ

Mumbai News Desk

ಮೂಲ್ಕಿ ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ಆದಿಕಿಲ್ಲಾಡಿ ಶ್ರೀ ಕೊಡ್ದಬ್ಬು ದೈವಸ್ಥಾನದ ಗುರಿಕಾರರಾದ ವಿ ಎಸ್ ವಸಂತ್ ಗುರಿಕಾರಯವರಿಗೆ ಸನ್ಮಾನ

Mumbai News Desk

ಉಳ್ಳೂರು: ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 19ನೇ ವರ್ಧಂತಿ ಮಹೋತ್ಸವ ಸಂಪನ್ನ

Mumbai News Desk