May 9, 2026
Mumbai News Kannada
ಪ್ರಕಟಣೆ

ಫೆ.7, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ





ಮೀರಾ ರೋಡ್ ಫೆ.2: ಮೀರಾಭಾಯಂದರ್ ಪರಿಸರದಲ್ಲಿ ಬೆಳಗಾವಿ ಬೇವಿನಕೊಪ್ಪ ಶ್ರೀ ವಿಜಯಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಸ್ಥಾಪನೆಗೊಂಡ ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ಎಂಬ ಧಾರ್ಮಿಕ ಸಂಸ್ಥೆಯು ಭಕ್ತಾದಿಗಳ ಮತ್ತು ದಾನಿಗಳ ಸಹಕಾರದೊಂದಿಗೆ ತನ್ನ ವಾರ್ಷಿಕ ದಿನಾಚರಣೆಯ ಅಂಗವಾಗಿ ಕಳೆದ 16 ವರ್ಷಗಳಿಂದ ಶ್ರೀಕ್ಷೇತ್ರ ಗಣೇಶ್ ಪುರಿಗೆ ಪಾದಯಾತ್ರೆಯೊಂದಿಗೆ ಆಚರಿಸುತ್ತಾ ಬಂದಿದೆ. ಇದೀಗ ಸಂಸ್ಥೆಯ 17ನೇ ವಾರ್ಷಿಕ ದಿನಾಚರಣೆಯ ಅಂಗವಾಗಿ ಫೆ.7ರಂದು ಗಣೇಶ್ ಪುರಿ (ನಮ್ಮಯ ನಡಿಗೆ ಸ್ವಾಮಿಯ ನೆಡೆಗೆ) ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಸಂಜೆ 6 ಗಂಟೆಗೆ ಮೀರಾ ರೋಡ್ ಪೂರ್ವ ಸಿಲ್ವರ್ ಪಾರ್ಕ್ ಶ್ರೀಗಣೇಶ್ ಜೈ ಮಾತಾ ಮಂದಿರ ಇಲ್ಲಿ ಧಾರ್ಮಿಕ ವಿಧಿವಿಧಾನಗಳು, ಭಜನೆ ಹಾಗೂ ಮಂಗಳಾರತಿ ನಡೆಯಲಿದೆ. ಮೀರಾಗಾಂವ್ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಸಾಣೂರು ಸಾಂತಿಂಜ ಜನಾರ್ಧನ ಭಟ್ ಆಶೀರ್ವಚನ ನೀಡಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಹಿರಿಯ ನಾಗರಿಕರಿಗೆ ಹಾಗೂ ಅಸ್ವಸ್ತರಿಗೆ ಬಸ್ಸಿನ ವ್ಯವಸ್ಥೆ ಮಾಡಲಾಗುವುದು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಗುರು ಭಕ್ತರು ಭಾಗವಹಿಸಿ ಸಹಕರಿಸಬೇಕಾಗಿ ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಜಿ.ಗಾಣಿಗ, ಗೌರವಾಧ್ಯಕ್ಷ ಆನಂದ ಶೆಟ್ಟಿ ಕುಕ್ಕುಂದೂರು , ಉಪಾಧ್ಯಕ್ಷರುಗಳಾದ ವಸಂತಿ ಶೆಟ್ಟಿ, ರವೀಂದ್ರ ಶೆಟ್ಟಿ ದೇರಳಕಟ್ಟೆ, ಸಂಚಾಲಕ ವೈ.ಟಿ.ಶೆಟ್ಟಿ, ಹೆಜಮಾಡಿ,ಗೌ.ಕಾರ್ಯದರ್ಶಿ ಸೀತಾರಾಮ್ ಸಿ. ಶೆಟ್ಟಿ ಅಮಾಸೆಬೈಲು , ಕೋಶಾಧಿಕಾರಿ ಶೈಲೇಶ್ ಶೆಟ್ಟಿ ಸೂಡ, ಜೊತೆ ಕಾರ್ಯದರ್ಶಿ ಬಾಬಾ ಪ್ರಸಾದ್ ಅರಸ ಕುತ್ಯಾರು, ಜೊತೆ ಕೋಶಾಧಿಕಾರಿ ಪ್ರಸಾದ್ ಶೆಟ್ಟಿ ನೀರೆ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಶ್ರೀ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರಾಜೇಶ್ ಶೆಟ್ಟಿ ಕಾಪು, ಮುಖ್ಯ ಸಲಹೆಗಾರ ಗುಣಪಾಲ್ ಉಡುಪಿ , ಅರ್ಚಕರಾದ ಲಕ್ಷ್ಮಣ್ ಶೆಟ್ಟಿ, ನಾರಾಯಣ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ, ಭಜನಾ ಸಮಿತಿ ಹಾಗೂ ಸಾಂಸ್ಕೃತಿಕ ವಿಭಾಗದ ಸದಸ್ಯರು
ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ



Related posts

ಡಿ.10 ರಂದು ಕರ್ನಾಟಕ ಸಂಘ, ಡೊಂಬಿವಲಿಯ ನಾಡಹಬ್ಬ ಸಮಾರಂಭ

Mumbai News Desk

ಮಾ. 8 ರಂದು ಜಗಜ್ಯೋತಿ ಕಲಾವೃಂದ ಕಚೇರಿಯಲ್ಲಿ ಮಹಾಶಿವರಾತ್ರಿ ಪೂಜೆ

Mumbai News Desk

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ ಡೊಂಬಿವಲಿ ಪೂರ್ವ : ಫೆ. 8ಕ್ಕೆ ವಾರ್ಷಿಕ ಮಂಗಳೂತ್ಸವ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬೈ ಭೇಟಿಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. 

Mumbai News Desk

ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ ; ದೇವಿಯ ವಾರ್ಷಿಕ ಮಹೋತ್ಸವ ಶುಕ್ರವಾರದಿಂದ ಆರಂಭ

Mumbai News Desk