29 C
Mumbai
August 21, 2026
Mumbai News Kannada
ಸುದ್ದಿ

ಬೆಂಗಳೂರು : ಭಾರತ್ ಬ್ಯಾಂಕ್ ಅಧಿಕಾರಿ ಹೇಮಾ ಭಾಸ್ಕರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ





ವರದಿ: ಜಯ ಸಿ ಪೂಜಾರಿ, ಕೆಳಾರ್ಕಳ ಬೆಟ್ಟು.

ಭಾರತ್ ಬ್ಯಾಂಕಿನ ಬೆಂಗಳೂರಿನ ಮಾಗಡಿ ರಸ್ತೆ ಶಾಖೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಾ ಭಾಸ್ಕರ್ ಅವರು 35 ವರ್ಷಗಳ ಸುದೀರ್ಘ ಹಾಗೂ ಸ್ತುತ್ಯಾರ್ಹ ಸೇವೆಯ ನಂತರ ದಿನಾಂಕ 31.01.2026 ರಂದು ಸೇವಾ ನಿವೃತ್ತಿ ಹೊಂದಿದರು. ತಮ್ಮ ವೃತ್ತಿಜೀವನದ ಆರಂಭದಲ್ಲಿ ಮುಂಬೈನ ಸಿ.ಎಸ್.ಟಿ ಪಕ್ಕದ ಬಳ್ಳಾರ್ಡ್ ಪೀಯರ್ ಹಾಗೂ ಮೀರಾ ರೋಡ್ ಭಾಯಂದರ್ ಶಾಖೆಗಳಲ್ಲಿ ದಕ್ಷತೆಯಿಂದ ಸೇವೆ ಸಲ್ಲಿಸಿದ್ದ ಇವರು, ಬ್ಯಾಂಕಿನ ಏಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅವರ ನಿವೃತ್ತಿಯ ಅಂಗವಾಗಿ ಮಾಗಡಿ ರಸ್ತೆ ಶಾಖೆಯಲ್ಲಿ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾರತ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕರಾದ ಮುರಳೀಧರ ಕೋಟ್ಯಾನ್ ಅವರು ಉಪಸ್ಥಿತರಿದ್ದು, ಹೇಮಾ ಅವರ ನಿಷ್ಠಾವಂತ ಸೇವೆಯನ್ನು ಸ್ಮರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹೇಮಾ ಅವರ ಪತಿ ಭಾಸ್ಕರ್ ಪೂಜಾರಿ ಹಾಗೂ ಪುತ್ರ ಆಕಾಶ್ ಪೂಜಾರಿ ಅವರು ಜೊತೆಯಾಗಿದ್ದರು.
ಮಾಗಡಿ ರಸ್ತೆ ಶಾಖಾ ಪ್ರಬಂಧಕರಾದ ಗೋಪಾಲ್ ಪೂಜಾರಿ ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದರು. ಸಮಾರಂಭದಲ್ಲಿ ವಿವಿಧ ಶಾಖೆಗಳ ಪ್ರಬಂಧಕರು ಹಾಗೂ ಸಹೋದ್ಯೋಗಿಗಳು ಪಾಲ್ಗೊಂಡು ತಮ್ಮ ಆತ್ಮೀಯ ಸಹೋದ್ಯೋಗಿಗೆ ಸನ್ಮಾನಿಸಿ ಶುಭ ಕೋರಿದರು.



Related posts

ಉಡುಪಿ : ಡಿವೈನ್ ಪಾರ್ಕ್ ಸಂಸ್ಥಾಪಕ, ಆಧ್ಯಾತ್ಮಿಕ ಚಿಂತಕ ಎ ಚಂದ್ರಶೇಖರ್ ಉಡುಪ ನಿಧನ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ – ಕೋಟ ಶ್ರೀನಿವಾಸ ಪೂಜಾರಿ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ಮುಂಬಯಿ: ಜಿಲ್ಲೆಯಲ್ಲಿ ಸಾಮರಸ್ಯ, ಶಾಂತಿ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿ   ಮತ್ತು ಪೊಲೀಸ್ ಆಯುಕ್ತರಿಗೆ  ಮನವಿ.

Mumbai News Desk

ಪೆರುವಾಯಿ ನಾರಾಯಣ ಭಟ್ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ.

Mumbai News Desk

ಸಾಧಕ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಭವ್ಯ ಸನ್ಮಾನ: ದೇಶದ ಭವಿಷ್ಯ ಕಟ್ಟಲು ಮಕ್ಕಳಿಗೆ ಸಂಸ್ಕಾರ ಅಗತ್ಯ – ಶ್ರೀ ಶೀರೂರು ಶ್ರೀಗಳು

Mumbai News Desk