32 C
Mumbai
March 7, 2026
Mumbai News Kannada
ಮುಂಬಯಿ

ಮೂರು ದಶಕಗಳ ಅವಿರತ ಸೇವಾ ಪಯಣ: ಭಾರತ್ ಬ್ಯಾಂಕಿನ ಹಿರಿಯ ಅಧಿಕಾರಿ ಸುಧೀರ್ ಸುವರ್ಣರಿಗೆ ಅಭಿನಂದನಾ ಪೂರ್ವಕ ಬೀಳ್ಕೊಡುಗೆ





ಭಾರತ್ ಬ್ಯಾಂಕಿನ ಮುಂಬೈಯ ಮಲಾಡ್ ಪೂರ್ವ ರಾಣಿ ಸತಿ ಮಾರ್ಗ,ಶಾಖೆಯಲ್ಲಿ ಉಪ ಪ್ರಬಂಧಕರಾಗಿ ಸೇವೆ ಸಲ್ಲಿಸುತ್ತಿದ್ದ ಸುಧೀರ್ ಬಿ. ಸುವರ್ಣ ಅವರು 37 ವರ್ಷಗಳ ಸುದೀರ್ಘ ಹಾಗೂ ಸ್ತುತ್ಯಾರ್ಹ ಸೇವೆಯ ನಂತರ ದಿನಾಂಕ 31/01/2026 ರಂದು ಅಧಿಕೃತವಾಗಿ ಸೇವಾ ನಿವೃತ್ತಿ ಹೊಂದಿದರು.


1989ರ ಏಪ್ರಿಲ್‌ನಲ್ಲಿ ಮುಂಬೈನ ಮೋದಿ ಸ್ಟ್ರೀಟ್ ಶಾಖೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಇವರು, ನಂತರ ಗೊರೇಗಾಂವ್ (ಪಶ್ಚಿಮ )ದಹಿಸರ್, ಬೊರಿವಿಲಿ (ಪಶ್ಚಿಮ), ಬೆಂಗಳೂರು ಶಾಖೆಗಳು ಹಾಗೂ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದರು. ಬ್ಯಾಂಕಿನ ಏಳಿಗೆಗಾಗಿ ಶ್ರಮಿಸಿದ ಇವರು ಅತ್ಯಂತ ಶಿಸ್ತುಬದ್ಧ, ಕಾರ್ಯದಕ್ಷ ಹಾಗೂ ಗ್ರಾಹಕ ಸ್ನೇಹಿ ಅಧಿಕಾರಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.


ಇವರ ನಿವೃತ್ತಿಯ ಅಂಗವಾಗಿ ದಿನಾಂಕ 03/02/2026 ರಂದು ಅವರ ಸ್ವಗ್ರಹ ಗೊರೇಗಾಂವ್ ಪೂರ್ವ ಗೋಕುಲ್ಧಾಮ್ ನಲ್ಲಿ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು.
ಅವರ ಆತ್ಮೀಯರಾದ ನವೀನ್ ಜೆ ಸುವರ್ಣ,ನರೇಶ್ ಟಿ. ಅಮೀನ್, ಸತೀಶ್ ಜೆ. ಬಂಗೇರ, ರೋಹಿತ್ ಜಿ. ಬಂಗೇರ, ತಾರಾನಾಥ್ ಎಸ್. ಅಮೀನ್ ಮತ್ತು ಉಮೇಶ್ ಜಿ. ಕೋಟ್ಯಾನ್ ಹಾಗೂ ಅಪಾರ ಹಿತೇಷಿಗಳ ಪರವಾಗಿ ಸುಧೀರ್ ಬಿ. ಸುವರ್ಣ ಅವರ ನಿಷ್ಠಾವಂತ ಸೇವೆಯನ್ನು ಗೌರವಿಸಿ ಅವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಹಾಗೂ ನೆನಪಿನ ಕಾಣಿಕೆಯನ್ನು ನೀಡಿ ಭವ್ಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಮಮತಾ ಸುವರ್ಣ ಹಾಗೂ ಪುತ್ರ ಪರಿತೋಷ್ ಸುವರ್ಣ ಅವರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಸುಧೀರ್ ಬಿ. ಸುವರ್ಣ ಅವರಿಗೆ ಮುಂದಿನ ನಿವೃತ್ತ ಜೀವನವು ಸುಖ, ಶಾಂತಿ ಮತ್ತು ಸುದೀರ್ಘ ಆರೋಗ್ಯದಿಂದ ಕೂಡಿರಲಿ ಎಂದು ಅವರ ಹಿತೇಷಿಗಲ್ಲರ ಶುಭ ಹಾರೈಕೆ.



Related posts

ಅಂಧೇರಿ ಪಶ್ಚಿಮ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ ನೀಡಿ ಭಕ್ತರನ್ನು ಹರಸಿದ ಶ್ರೀ ಓಡಿಯೂರು ಸ್ವಾಮಿ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಾಮೂಹಿಕ ಗುರು ಪೂಜೆ :

Mumbai News Desk

ಯಕ್ಷಪ್ರಿಯ ಬಳಗ ಮೀರಾಭಾಯಂದರ್’ ಇದರ ‘ಯಕ್ಷ ನವಮಿ’ ಕಾರ್ಯಕ್ರಮ

Mumbai News Desk

ಬಿಲ್ಲವರ ಅಸೋಸಿಯೇಶನ್ ಕಲ್ವಾ ಸ್ಥಳೀಯ ಕಚೇರಿಗೆ ಬೆಳ್ಳಿ ಹೊಳಪು! ರಜತ ಮಹೋತ್ಸವ ಸಂಭ್ರಮ.

Mumbai News Desk

ಮೀರಾರೋಡ್ ಪೂರ್ವದ ಶ್ರೀ ರಾಧಾ ಕೃಷ್ಣ ವೃದ್ಧಾಶ್ರಮಕ್ಕೆ ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ  ಮಹಿಳಾ ವಿಭಾಗ ಭೇಟಿ

Mumbai News Desk

ಕುಲಾಲ ಸಂಘ ಮುಂಬಯಿ  : ವಿದ್ಯಾರ್ಥಿ ವೇತನ ವಿತರಣೆ.

Mumbai News Desk