July 23, 2026
Mumbai News Kannada
ಸುದ್ದಿ

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ







ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಫೆಬ್ರವರಿ 7ರ ಶನಿವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು ಮತ್ತು ವಯೋಸಹಜ ಅನಾರೋಗ್ಯದಿಂದ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪ್ಪಣ್ಣ ಹೆಗ್ಡೆ ಅವರು 1983 ರಿಂದ 1985 ರವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಜನತಾ ಪಕ್ಷದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ರಾಜಕೀಯದ ಜೊತೆಗೆ ಧಾರ್ಮಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದ ಅವರು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿಯಾಗಿ ಮತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಇವರು ತಾಲೂಕು ಕೋ-ಆಪರೇಟಿವ್ ಮಾರ್ಕೆಟಿಂಗ್ ಸೊಸೈಟಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್‌ನ ಉಪಾಧ್ಯಕ್ಷರಾಗಿ ಹಾಗೂ ಬಸ್ರೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದ್ದರು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಹಲವಾರು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.



Related posts

ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನ  ದ  , 50ನೇ ವಾರ್ಷಿಕ ಮಹಾಪೂಜೆ, ಗೆ ಚಾಲನೆ.

Mumbai News Desk

ಹೆಜಮಾಡಿ : ಸಾವಿತ್ರಿ ಡಿ ಸಾಲ್ಯಾನ್ ನಿಧನ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಲಾಸ್ಯಾ ಶಂಕರ ಶೆಟ್ಟಿ ಶೇ. 90.80, ಲಿಖಿತ್ ಶಂಕರ್ ಶೆಟ್ಟಿಗೆ ಶೇ. 85 ಅಂಕ.

Mumbai News Desk

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರದ 15 ನೆಯ ವರ್ಧಂತ್ಯುತ್ಸವ ಸಂಪನ್ನ.

Mumbai News Desk

ಒಕ್ಕೂಟದ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ

Mumbai News Desk