September 6, 2026
Mumbai News Kannada
ಸುದ್ದಿ

ಉಡುಪಿ : ಪ್ರವಾಸಿ ತಾಣಗಳ ಅಭಿವೃದ್ಧಿಗೆ ಆದ್ಯತೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ





ದೇಶದಲ್ಲಿ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕೇಂದ್ರ ಪ್ರವಾಸೋದ್ಯಮ ಇಲಾಖೆಯು ಐವತ್ತಕ್ಕೂ ಹೆಚ್ಚು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು
ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೇಂದ್ರ ಸರ್ಕಾರದ ಜಾಗತಿಕ ಪ್ರವಾಸೋದ್ಯಮ ತಾಣ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸುಸ್ಥಿರತೆ ತರುವುದು ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವುದರೊಂದಿಗೆ ಪರಿಸರ ಸ್ನೇಹಿಯಾಗಿ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿ ಪಡಿಸುವುದರ ಮೂಲಕ ಪ್ರವಾಸಿಗರನ್ನು ಆಕರ್ಷಿಸುವುದು ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಗಮನಹರಿಸುವ ಗುರಿಯೊಂದಿಗೆ ಡೆಸ್ಟಿನೇಷನ್ ಡೆವಲಪ್ಮೆಂಟ್ ಸ್ಕೀಮ್ ಅನ್ನು ಜಾರಿಗೆ ತಂದಿದೆ ಎಂದರು. ಜಿಲ್ಲೆಯಲ್ಲಿ ಈ ಯೋಜನೆಗೆ ಕೋಡಿ- ಕನ್ಯಾನ,ಕೋಡಿ- ಕುಂದಾಪುರ,ಬಾರ್ಕೂರು ಬಂದರು ಪ್ರದೇಶ ಹಾಗೂ ತ್ರಾಸಿ- ಮರವಂತೆ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ಈ ಯೋಜನೆಗಳಲ್ಲಿ ನವೀಕರಿಸಬಹುದಾದ ಇಂಧನಗಳ ಬಳಕೆ, ಮೂಲ ಸೌಕರ್ಯ ಹಾಗೂ ಪ್ರವಾಸಿಗರಿಗೆ ಜಾಗತಿಕ ಅಭಿಯಾನಗಳು ಸೇರಿ ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲೆಯ ಒಂದು ಪ್ರವಾಸಿ ತಾಣವನ್ನು ಆಯ್ಕೆ ಮಾಡಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಕೇಂದ್ರ ಸರ್ಕಾರ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ರೂಪಾಯಿ 300 ಕೋಟಿ ಅನುದಾನ ನೀಡಲಿದೆ ಪ್ರವಾಸಿ ತಾಣದ ಅಭಿವೃದ್ಧಿಗೆ ಖಾಸಗಿ ಸಹ ಭಾಗಿತ್ವವನ್ನು ಉತ್ತೇಜಿಸಲಾಗುವುದು. ಅದಕ್ಕೆ ಅಗತ್ಯವಿರುವ ಭೂಮಿಯನ್ನು ಸಹ ಒದಗಿಸುವ ಅಗತ್ಯವಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂದ್ಯಾ ಎನ್. ಎಂ ಉಪಸ್ಥಿತರಿದ್ದರು.



Related posts

ಮೂಡುಬಿದ್ರೆ ಮಹಾವೀರ ಕಾಲೇಜಿನ ವಜ್ರ ಮಹೋತ್ಸವದ ಸಿದ್ಧತೆಗಾಗಿ ಮಾ. 22ರಂದು ಮುಂಬೈನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಲೋಚನಾ ಸಭೆ

Mumbai News Desk

ರಾಷ್ಟ್ರ, ಕರ್ನಾಟಕ ಮತ್ತು ಮಹಾರಾಷ್ಟ್ರದ ಇಂದಿನ ಸಂಕ್ಷಿಪ್ತ ಮುಖ್ಯಾಂಶಗಳು

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಧರ್ಮಸ್ಥಳದಲ್ಲಿ ಬಿಡುಗಡೆ

Mumbai News Desk

ಉಚಿತ ಗ್ಯಾರಂಟಿ ಸಂಸ್ಕೃತಿ ಮತ್ತು ದೇಶದ ಆರ್ಥಿಕತೆ: ಸುಪ್ರೀಂ ಕೋರ್ಟ್ ಎಚ್ಚರಿಕೆ

Mumbai News Desk

ಲಂಡನ್ ವಿಶ್ವವಿದ್ಯಾಲಯದಿಂದ ತನ್ವಿ ನಾಯ್ಕ್ ಅವರಿಗೆ ಉನ್ನತ ಸ್ನಾತಕೋತ್ತರ ಪದವಿ

Mumbai News Desk

ಕಲಂಬೋಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥೆ ಇದರ ಮಹಿಳಾ ವಿಭಾಗದ ಹರಸಿನ ಕುಂಕುಮ ಕಾಯ೯ಕ್ರಮ.

Mumbai News Desk