July 22, 2026
Mumbai News Kannada
ಪ್ರಕಟಣೆ

ಡೊಂಬಿವಲಿ: ಜಗಜ್ಯೋತಿ ಕಲಾವೃಂದದಿಂದ ಫೆ. 15 ರಂದು ಮಹಾಶಿವರಾತ್ರಿ ಪೂಜೆ







ಡೊಂಬಿವಲಿ: ಇಲ್ಲಿನ ಮಹಾತ್ಮ ಫುಲೆ ರಸ್ತೆಯಲ್ಲಿರುವ ಜಗಜ್ಯೋತಿ ಕಲಾವೃಂದದ (ರಿ.) ವತಿಯಿಂದ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 15ರ ಭಾನುವಾರ ಪಶ್ಚಿಮ ದೊಂಬಿವಲಿಯ ವಿವೇಕಾನಂದ ಶಾಲೆಯ ಸಮೀಪವಿರುವ ‘ಪಂಚಮ್’ ಸಹಕಾರಿ ಗೃಹನಿರ್ಮಾಣ ಸಂಘದ ಸಂಕೀರ್ಣದಲ್ಲಿರುವ ವೃಂದದ ಕಚೇರಿಯಲ್ಲಿ ಈ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ಕಾರ್ಯಕ್ರಮದ ವಿವರ:

ಅಂದು ಮಧ್ಯಾಹ್ನ 4.00 ಗಂಟೆಯಿಂದ ಸಂಜೆ 7.00 ಗಂಟೆಯವರೆಗೆ ಭಕ್ತಾದಿಗಳಿಂದ ಮತ್ತು ಕಲಾ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 7.15ಕ್ಕೆ ಮಹಾಶಿವರಾತ್ರಿಯ ಮಂಗಳಾರತಿ ನೆರವೇರಲಿದ್ದು, ತದನಂತರ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

​ಈ ಭಕ್ತಿಪೂರ್ವಕ ಕಾರ್ಯಕ್ರಮಕ್ಕೆ ವೃಂದದ ಎಲ್ಲಾ ಸದಸ್ಯರು, ಹಿತೈಷಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜಗಜ್ಯೋತಿ ಕಲಾವೃಂದದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಸ್ಥಳ: ಜಗಜ್ಯೋತಿ ಕಲಾವೃಂದ (ರಿ.),

ಪಂಚಮ್ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿ,

ಮಹಾತ್ಮ ಫುಲೆ ರಸ್ತೆ, ಡೊಂಬಿವಲಿ (ಪಶ್ಚಿಮ) – 421 202.



Related posts

ಶ್ರೀ ಜೈ ಭವಾನಿ ಶನೀಶ್ವರ ಮಂದಿರ, ಡೊಂಬಿವಲಿ – ಮನವಿ ಪತ್ರ,

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಮೂಲತ್ವ ದಸರಾ ಮಹೋತ್ಸವ

Mumbai News Desk

ಪದ್ಮಶಾಲಿ ಸಮಾಜ ಸೇವಾ ಸಂಘ,ಪದ್ಮಶಾಲಿ ಎಜ್ಯುಕೇಶನ್ ಸೊಸೈಟಿ, ಮಹಿಳಾ ಬಳಗ – ಸೆ. 15ಕ್ಕೆ ವಾರ್ಷಿಕ ಮಹಾಸಭೆ.

Mumbai News Desk

ಫೆ. 11 ರಂದು ಜಗಜ್ಯೋತಿ ಕಲಾವೃಂದ (ರಿ.) ಮುಂಬಯಿ 37ನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ.

Mumbai News Desk

ಮುಂಬೈ ವಿಶ್ವವಿದ್ಯಾನಿಲಯದಲ್ಲಿ ಎ. 4: ಮಾಜಿ ಮುಖ್ಯಮಂತ್ರಿ ಡಾ. ವೀರಪ್ಪ ಮೊಯ್ಲಿ ಅವರಿಂದ ‘ಧೀಮಂತ ಧರ್ಮಪಾಲ’ ಆತ್ಮಕಥನ ಕೃತಿ ಲೋಕಾರ್ಪಣೆ

Mumbai News Desk

ಡೊಂಬಿವಲಿ: “ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಆಶ್ರಯದಲ್ಲಿ ಜ. 3ರಂದು ಶ್ರೀ ಶನೀಶ್ವರ ಮಹಾಪೂಜೆ ಹಾಗೂ ಸತ್ಯನಾರಾಯಣ ಪೂಜೆ

Mumbai News Desk