32 C
Mumbai
April 24, 2026
Mumbai News Kannada
ಸುದ್ದಿ

ಮುಂಬೈ : ಜೈಹಿಂದ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥಾಪಕ ಸದಸ್ಯ ನಾರಾಯಣ ಉಚ್ಚಿಲ್ ನಿಧನ






ಜೈಹಿಂದ್ ಸ್ಪೋರ್ಟ್ಸ್ ಕ್ಲಬ್‌ನ (JSC) ಸಂಸ್ಥಾಪಕ ಸದಸ್ಯರು ಹಾಗೂ ಕ್ಲಬ್‌ನ ಪ್ರಥಮ ಕೋಶಾಧಿಕಾರಿಗಳಾದ ಶ್ರೀ ನಾರಾಯಣ್ ಕೆ. ಉಚ್ಚಿಲ್ (100) ಅವರು ಇಂದು ನಿಧನರಾಗಿದ್ದಾರೆ. ಕ್ರೀಡಾ ವಲಯದಲ್ಲಿ “ಸಾಯ್ಬೆರು” ಎಂದೇ ಅತ್ಯಂತ ಜನಪ್ರಿಯರಾಗಿದ್ದ ಇವರು, ಸಮುದಾಯದ ಪ್ರಸಿದ್ಧ ಕ್ರೀಡಾ ವ್ಯಕ್ತಿತ್ವಗಳಲ್ಲಿ ಒಬ್ಬರಾಗಿದ್ದರು.

1945ರಲ್ಲಿ ಜೈಹಿಂದ್ ಸ್ಪೋರ್ಟ್ಸ್ ಕ್ಲಬ್ ಅನ್ನು ಅಸ್ತಿತ್ವಕ್ಕೆ ತಂದ ಆಶಯದ ತಂಡದಲ್ಲಿ ಉಚ್ಚಿಲ್ ಅವರು ಪ್ರಮುಖರು. ಅವರ ಅಂದಿನ ದೂರದೃಷ್ಟಿ ಮತ್ತು ಸಮರ್ಪಣಾ ಮನೋಭಾವವೇ ಇಂದು ಕ್ಲಬ್ ಬೃಹತ್ತಾಗಿ ಬೆಳೆದು ನಿಲ್ಲಲು ಗಟ್ಟಿ ಅಡಿಪಾಯವಾಗಿದೆ. ಫುಟ್ಬಾಲ್ ಕ್ರೀಡೆಯಲ್ಲಿ ಅತೀವ ಆಸಕ್ತಿ ಹೊಂದಿದ್ದ ಅವರು, ಹಲವು ಪಂದ್ಯಾವಳಿಗಳಲ್ಲಿ ಜೈಹಿಂದ್ ತಂಡವನ್ನು ಹೆಮ್ಮೆಯಿಂದ ಪ್ರತಿನಿಧಿಸಿದ್ದರು.

ಕ್ಲಬ್‌ನ ಏಳಿಗೆಗಾಗಿ ಮತ್ತು ಸಮುದಾಯದ ಅಭಿವೃದ್ಧಿಗಾಗಿ ಅವರು ಹಮ್ಮಿಕೊಂಡಿದ್ದ ಹಲವಾರು ಯೋಜನೆಗಳು ಸ್ಮರಣೀಯ. ಕ್ರೀಡೆಯ ಮೇಲಿನ ಅವರ ಅಪಾರ ಪ್ರೀತಿ ಮತ್ತು ನಾಯಕತ್ವದ ಗುಣವು ಮುಂದಿನ ಪೀಳಿಗೆಯ ಕ್ರೀಡಾಪಟುಗಳಿಗೆ ಸದಾ ಸ್ಫೂರ್ತಿಯಾಗಿರಲಿದೆ.

ಜೈಹಿಂದ್ ಸ್ಪೋರ್ಟ್ಸ್ ಕ್ಲಬ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದೆ. “ನಮ್ಮ ಸಂಸ್ಥಾಪಕ ಸದಸ್ಯರ ಅಗಲಿಕೆ ಕ್ಲಬ್‌ಗೆ ಮತ್ತು ಇಡೀ ಸಮುದಾಯಕ್ಕೆ ತುಂಬಲಾರದ ನಷ್ಟ. ಅವರ ಸೇವೆ ಮತ್ತು ಕ್ರೀಡಾ ಸಾಧನೆಯನ್ನು ನಾವು ಸದಾ ಗೌರವದಿಂದ ಸ್ಮರಿಸುತ್ತೇವೆ,” ಎಂದು ಕ್ಲಬ್ ಪ್ರಕಟಣೆಯಲ್ಲಿ ತಿಳಿಸಿದೆ.
ಮೃತರು ಪುತ್ರಿಯರು, ಪುತ್ರ,, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಜೈಹಿಂದ್ ಸ್ಪೋರ್ಟ್ಸ್ ಕ್ಲಬ್‌ನ ಎಲ್ಲಾ ಸದಸ್ಯರು ಪ್ರಾರ್ಥಿಸಿದ್ದಾರೆ.



Related posts

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ

Mumbai News Desk

ವಿಶ್ವಕಪ್ ವಿಜೇತ ಕಬ್ಬಡ್ಡಿ ತಂಡದ ಆಟಗಾರ್ತಿ ಕು. ಧನಲಕ್ಷ್ಮಿ ಪೂಜಾರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ: 5 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

Mumbai News Desk

ನಾವುಂದ ಮೂರ್ತೆದಾರರ ಸೊಸೈಟಿಯಿಂದ 9 ಲಕ್ಷ ರೂ. ಠೇವಣಿ ಹಣ ವಂಚನೆ : 16 ಮಂದಿಯ ವಿರುದ್ದ ಪ್ರಕರಣ ದಾಖಲು

Mumbai News Desk

ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರು, ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ , ಆರ್ಥಿಕ ನೆರವು ವಿತರಣೆ.

Mumbai News Desk

” ಕನ್ನಡಿಗರ ಉನ್ನತ ಮಹಾವಿದ್ಯಾಲಯ ಐರೋಲಿ ಯ ಜ್ಞಾನ ವಿಕಾಸ ಮಂಡಳದ ಮೆಹತಾ ಮಹಾವಿದ್ಯಾಲಯ”

Mumbai News Desk

ಡೊಂಬಿವಲಿಯ ಕಲಾವಿದೆ ರಿತಿಕ ಶಂಕರ್ ಸುವರ್ಣ ಅವರಿಂದ ಅಯೋಧ್ಯೆಯಲ್ಲಿ ಭರತನಾಟ್ಯ ಸೇವೆ.

Mumbai News Desk