32.3 C
Mumbai
June 7, 2026
Mumbai News Kannada
ತುಳುನಾಡು

ಮೂಲ್ಕಿ : ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 17ನೇ ವಾರ್ಷಿಕೋತ್ಸವ






ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ತಿಳಿಸುವ ಕಾರ್ಯವಾಗಬೇಕು -ಶಿವಾನಂದ ಶಾಂತಿ

ಮಕ್ಕಳಿಗೆ ಸಂಸ್ಕಾರವನ್ನು ಚಿಕ್ಕಂದಿನಿಂದಲೇ ಮೈಗೂಡಿಸಿ ಬರುವಂತೆ ಮಾಡಬೇಕು ಮತ್ತು ಧಾರ್ಮಿಕ ಪ್ರಜ್ಞೆ ಮೂಡಿಸುವ ಕಾರ್ಯ ಹಿರಿಯರಿಂದ ಆಗಬೇಕು; ಮೊಬೈಲ್, ಧಾರಾವಾಹಿಗಳಿಂದ ದೂರವಿಟ್ಟು ಭಜನೆ, ಮತ್ತಿತರ ಧಾರ್ಮಿಕ ಕಾರ್ಯಗಳ ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿಯನ್ನು ತಿಳಿಸುವ ಕಾರ್ಯವಾಗಬೇಕು ಎಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ತಂತ್ರಿಗಳಾದ ಶಿವಾನಂದ ಶಾಂತಿ ಮಣಿಬೆಟ್ಟು ಹೇಳಿದರು. ಮುಲ್ಕಿ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದ ಸಮಿತಿಯ ಸಹ ಸಂಸ್ಥೆ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 17ನೇ ವಾರ್ಷಿಕೋತ್ಸವ ಹಾಗೂ ಮಹಾ ಶಿವರಾತ್ರಿಯ ಪ್ರಯುಕ್ತ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದ ವಠಾರದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಪ್ರತಿಭಾ ಪುರಸ್ಕಾರ, ಊರಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಯುವ ಸಮುದಾಯದಲ್ಲಿ ಧಾರ್ಮಿಕ ಪ್ರಜ್ಞೆ ಕಡಿಮೆಯಾಗುತ್ತಿದ್ದು ಧರ್ಮದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಪ್ರಭಾಕರ್ ಪೂಜಾರಿ ವಹಿಸಿದ್ದರು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಸಿಂಧು ಗುಜರನ್ , ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನದ ಅರ್ಚಕ ನಿರಂಜನ್ ಪೂಜಾರಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಭಾಸ್ಕರ್ ಬಂಗೇರ ಪಡುಬಿದ್ರೆ, ಜಯ ಕೃಷ್ಣ ಕೊಟ್ಯಾನ್ ಮತ್ತು ದೈವದ ಪರಿಚಾಕ ಮಾಧವ ಮಡಿವಾಳ ಚಿತ್ರಾಪುರವರನ್ನು ಸನ್ಮಾನಿಸಲಾಯಿತು. ಕೊಳಚಿಕಂಬಳ ಸಾನದಮನೆ ದಿ . ರಾಮಣ್ಣ ಪೂಜಾರಿ ಮತ್ತು ದಿ . ಹರಿಯಪ್ಪ ಕೊಟ್ಯಾನ್ ಸ್ಮರಣಾರ್ಥ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಮೂಲಕ ವಿದ್ಯಾರ್ಥಿ ವೇತನ ನೀಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಾಧಕರನ್ನು ದಾನಿಗಳನ್ನು ಗೌರವಿಸಲಾಯಿತು.

ಉದ್ಯಮಿಗಳಾದ ಪ್ರವೀಣ್ ಕುಮಾರ್ ಬೊಳ್ಳರು , ಮುಲ್ಕಿ ಪ್ರಮೋದ್ ಕುಡ್ವ, ಮಂತ್ರ ಸರ್ಫ್ ಕ್ಲಬ್, ಕೊಳಚಿಕಂಬಳ ನಟರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು ಕೊಳಚಿಕಂಬಳ ಶ್ರೀ ಜಾರಂದಾಯ ದೈವಸ್ಥಾನದ ಗುರಿಕಾರರಾದ ಹರಿಶ್ಚಂದ್ರ ಪಿ. ಸಾಲ್ಯಾನ್, ಶೇಷ ಪೂಜಾರಿ, ಪ್ರಾಣೇಶ್ ಪೂಜಾರಿ ಸಾನದ ಮನೆ,, ಕೃಷ್ಣ ಕೊಟ್ಯಾನ್ ಸಾನದ ಮನೆ , ದೈವಸ್ಥಾನದ ಸಮಿತಿಯ ಉಪಾಧ್ಯಕ್ಷ ಹೇಮನಾಥ ಕೊಟ್ಯಾನ್, ಮಹಿಳಾ ಮಂಡಳಿಯ ಅಧ್ಯಕ್ಷೆ ಲತಾ ಶೇಖರ್, ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ ಅಧ್ಯಕ್ಷ ಚರಣ್ ಬಂಗೇರ, ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಕೊಟ್ಯಾನ್, ಕೋಶಾಧಿಕಾರಿ ಸುನೀಲ್ ಕೊಟ್ಯಾನ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಹಿಳೆಯರಿಂದ ಮತ್ತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಲಕುಮಿ ತಂಡದಿಂದ ಅಂಟೀ ಬೊಕ್ಕ ಅಂಕಲ್ ಮಳು ಹಾಸ್ಯಮಯ ನಾಟಕ ಪ್ರದರ್ಶನ ಜರುಗಿತು. ಯೂತ್ ಕ್ಲಬ್ ಅಧ್ಯಕ್ಷ ಚರಣ್ ಬಂಗೇರ ಸ್ವಾಗತಿಸಿದರು. ಹರಿಶ್ಚಂದ್ರ ಪಿ. ಸಾಲ್ಯಾನ್ ಪ್ರಸ್ತಾವನೆ ಗೈದರು, ಲತಾ ಶೇಖರ್ ವಂದಿಸಿದರು. ಕಾರ್ತಿಕ್ ಕಾರ್ಯಕ್ರಮ ನಿರೂಪಿಸಿದರು.



Related posts

ಉಡುಪಿ: ವಿಶ್ವ ಗೀತಾ ಪರ್ಯಾಯದ ವೈಭವ; ಶ್ರೀಕೃಷ್ಣ ಮಠದಲ್ಲಿ 2 ಕೋಟಿ ರೂ. ವೆಚ್ಚದ ‘ಸ್ವರ್ಣ ಭಗವದ್ಗೀತೆ’ ಲೋಕಾರ್ಪಣೆ

Mumbai News Desk

ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ದಾರದ ನಿಮ್ಮಿತ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

Mumbai News Desk

ಮುಲ್ಕಿ : ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದಲ್ಲಿ ‘ವನ ಮಹೋತ್ಸವ’ ದಿನಾಚರಣೆ, ಹಸಿರು ಕ್ರಾಂತಿಗೆ ಕರೆ

Mumbai News Desk

ಹೆಜಮಾಡಿ ಬಿಲ್ಲವ ಸಂಘದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Mumbai News Desk

ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಸಮಾಲೋಚನಾ ಸಭೆ, ಆ. 31ರಂದು ಮುಷ್ಟಿ ಕಾಣಿಕೆ ಅರ್ಪಿಸಲು ನಿರ್ಣಯ

Mumbai News Desk

ಶ್ರದ್ದಾ ಭಕ್ತಿಯಿಂದ ನೆರೆದ ಜನ ಸಾಗರದೊಂದಿಗೆ ಸಸಿಹಿತ್ಲು ಶ್ರೀ ಭಗವತೀ ದೇವಿಗೆ ಅದ್ದೂರಿಯ ಬ್ರಹ್ಮಕಲಶೋತ್ಸವ

Mumbai News Desk