25 C
Mumbai
March 7, 2026
Mumbai News Kannada
ಪ್ರಕಟಣೆ

ಡೊಂಬಿವಲಿ: ಫೆ. 28ರಂದು ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ ಮತ್ತು ಭಜನಾ ಸ್ಪರ್ಧೆ





ಡೊಂಬಿವಲಿ: ಇಲ್ಲಿನ ಕರ್ನಾಟಕ ಸಂಘದ ಲಲಿತ ಕಲಾ ವಿಭಾಗದ ವತಿಯಿಂದ ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ ಹಾಗೂ ಶ್ರೀ ಪುರಂದರ ದಾಸರ ಭಜನಾ ಸ್ಪರ್ಧೆಯನ್ನು ಫೆಬ್ರುವರಿ 28ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ.

ಡೊಂಬಿವಲಿ ಪೂರ್ವದ ಎಂ.ಐ.ಡಿ.ಸಿ ವಿಭಾಗದ ಎಲ್.ಐ.ಸಿ ಕಚೇರಿ ಬಳಿ ಇರುವ ‘ಹೋಟೆಲ್ ಶಿವಂ ಹಾಲ್’ನಲ್ಲಿ ಈ ಸಮಾರಂಭ ನಡೆಯಲಿದೆ. ಅಂದು ಬೆಳಿಗ್ಗೆ 11.00 ಗಂಟೆಗೆ ಮಕ್ಕಳಿಂದ ‘ಕುಣಿತ ಭಜನಾ ಸ್ಪರ್ಧೆ’ ಆಯೋಜಿಸಲಾಗಿದ್ದು, ನಂತರ ಶ್ರೀ ಪುರಂದರ ದಾಸರ ಭಜನಾ ಸ್ಪರ್ಧೆ ನಡೆಯಲಿದೆ. ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಂಘ ಡೊಂಬಿವಲಿಯ ಅಧ್ಯಕ್ಷರಾದ ಶ್ರೀ ಸುಕುಮಾರ ಎನ್. ಶೆಟ್ಟಿ ಅವರು ವಹಿಸಲಿದ್ದಾರೆ. ಸಂಘದ ಕಾರ್ಯಾಧ್ಯಕ್ಷರಾದ ಡಾ|| ದಿವಾಕರ ಟಿ. ಶೆಟ್ಟಿ, ಇಂದ್ರಾಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಉಪನ್ಯಾಸಕರಾಗಿ ಶ್ರೀ ಸಚಿನ್ ಸುವರ್ಣ ಸಸಿಹಿತ್ಲು ಅವರು ಆಗಮಿಸಲಿದ್ದಾರೆ.

ಸಂಘದ ಉಪಾಧ್ಯಕ್ಷರಾದ ಶ್ರೀ ಲೋಕನಾಥ ಎ. ಶೆಟ್ಟಿ, ಉಪ-ಕಾರ್ಯಾಧ್ಯಕ್ಷರಾದ ಶ್ರೀ ದೇವದಾಸ ಎಲ್. ಕುಲಾಲ್, ಗೌರವ ಪ್ರಧಾನ ಕಾರ್ಯದರ್ಶಿ ಪ್ರೊ. ಅಜಿತ್ ಬಿ. ಉಮ್ರಾಣಿ, ಗೌರವ ಕೋಶಾಧಿಕಾರಿ ಶ್ರೀ ತಾರಾನಾಥ ಎಸ್. ಅಮೀನ್, ಜೊತೆ ಕಾರ್ಯದರ್ಶಿ ಶ್ರೀ ದಿನೇಶ್ ಬಿ. ಕುಡ್ವ ಹಾಗೂ ಜೊತೆ ಕೋಶಾಧಿಕಾರಿ ಶ್ರೀಮತಿ ವಿಮಲಾ ವಿ. ಶೆಟ್ಟಿ, ಲಲಿತ ಕಲಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಸುಷ್ಮಾ ಡಿ. ಶೆಟ್ಟಿ, ಕಾರ್ಯದರ್ಶಿ ಶ್ರೀ ರಮೇಶ ಎ. ಶೆಟ್ಟಿ ಹಾಗೂ ಸಂಘದ ಸರ್ವ ಕಾರ್ಯಕಾರಿ ಮಂಡಳಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗಾಗಿ ಪರಿಸರದ ಕನ್ನಡಿಗರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘವು ಪ್ರಕಟಣೆಯಲ್ಲಿ ಕೋರಿದೆ.



Related posts

ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ವತಿಯಿಂದ ಫೆ. 26 ರಂದು ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲು ವಿತರಣೆ.

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ, ಫೆ. 1ರಂದು 18ನೇ ವಾರ್ಷಿಕ ಶ್ರೀ ಶನಿ ಮಹಾ ಪೂಜೆ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ : ಅ. 11 ರಂದು ರಕ್ತದಾನ ಶಿಬಿರ.

Mumbai News Desk

ಸೆ.20 : ಮಾತೃಭೂಮಿ ಕೋ -ಆಪರೇಟಿವ್ ಕ್ರೆಡಿಟ್ ಸೊಸೈಟಿ ಇದರ 37ನೇ ವಾರ್ಷಿಕ ಮಹಾಸಭೆ

Mumbai News Desk

ಪುನೀತ್ ನ ಚಿಕಿತ್ಸೆ ನೆರವಿಗಾಗಿ ಮನವಿ

Mumbai News Desk

ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ ಫೌಂಡೇಶನ್ ಸಾಯನ್ – ಕೋಲಿವಾಡ, ಡಿ  25.ರಂದು 21ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಗುರುವಂದನೆ.

Mumbai News Desk