July 23, 2026
Mumbai News Kannada
ಪ್ರಕಟಣೆ

ಡೊಂಬಿವಲಿ: ಫೆ. 28ರಂದು ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ ಮತ್ತು ಭಜನಾ ಸ್ಪರ್ಧೆ







ಡೊಂಬಿವಲಿ: ಇಲ್ಲಿನ ಕರ್ನಾಟಕ ಸಂಘದ ಲಲಿತ ಕಲಾ ವಿಭಾಗದ ವತಿಯಿಂದ ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ ಹಾಗೂ ಶ್ರೀ ಪುರಂದರ ದಾಸರ ಭಜನಾ ಸ್ಪರ್ಧೆಯನ್ನು ಫೆಬ್ರುವರಿ 28ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ.

ಡೊಂಬಿವಲಿ ಪೂರ್ವದ ಎಂ.ಐ.ಡಿ.ಸಿ ವಿಭಾಗದ ಎಲ್.ಐ.ಸಿ ಕಚೇರಿ ಬಳಿ ಇರುವ ‘ಹೋಟೆಲ್ ಶಿವಂ ಹಾಲ್’ನಲ್ಲಿ ಈ ಸಮಾರಂಭ ನಡೆಯಲಿದೆ. ಅಂದು ಬೆಳಿಗ್ಗೆ 11.00 ಗಂಟೆಗೆ ಮಕ್ಕಳಿಂದ ‘ಕುಣಿತ ಭಜನಾ ಸ್ಪರ್ಧೆ’ ಆಯೋಜಿಸಲಾಗಿದ್ದು, ನಂತರ ಶ್ರೀ ಪುರಂದರ ದಾಸರ ಭಜನಾ ಸ್ಪರ್ಧೆ ನಡೆಯಲಿದೆ. ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಂಘ ಡೊಂಬಿವಲಿಯ ಅಧ್ಯಕ್ಷರಾದ ಶ್ರೀ ಸುಕುಮಾರ ಎನ್. ಶೆಟ್ಟಿ ಅವರು ವಹಿಸಲಿದ್ದಾರೆ. ಸಂಘದ ಕಾರ್ಯಾಧ್ಯಕ್ಷರಾದ ಡಾ|| ದಿವಾಕರ ಟಿ. ಶೆಟ್ಟಿ, ಇಂದ್ರಾಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಉಪನ್ಯಾಸಕರಾಗಿ ಶ್ರೀ ಸಚಿನ್ ಸುವರ್ಣ ಸಸಿಹಿತ್ಲು ಅವರು ಆಗಮಿಸಲಿದ್ದಾರೆ.

ಸಂಘದ ಉಪಾಧ್ಯಕ್ಷರಾದ ಶ್ರೀ ಲೋಕನಾಥ ಎ. ಶೆಟ್ಟಿ, ಉಪ-ಕಾರ್ಯಾಧ್ಯಕ್ಷರಾದ ಶ್ರೀ ದೇವದಾಸ ಎಲ್. ಕುಲಾಲ್, ಗೌರವ ಪ್ರಧಾನ ಕಾರ್ಯದರ್ಶಿ ಪ್ರೊ. ಅಜಿತ್ ಬಿ. ಉಮ್ರಾಣಿ, ಗೌರವ ಕೋಶಾಧಿಕಾರಿ ಶ್ರೀ ತಾರಾನಾಥ ಎಸ್. ಅಮೀನ್, ಜೊತೆ ಕಾರ್ಯದರ್ಶಿ ಶ್ರೀ ದಿನೇಶ್ ಬಿ. ಕುಡ್ವ ಹಾಗೂ ಜೊತೆ ಕೋಶಾಧಿಕಾರಿ ಶ್ರೀಮತಿ ವಿಮಲಾ ವಿ. ಶೆಟ್ಟಿ, ಲಲಿತ ಕಲಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಸುಷ್ಮಾ ಡಿ. ಶೆಟ್ಟಿ, ಕಾರ್ಯದರ್ಶಿ ಶ್ರೀ ರಮೇಶ ಎ. ಶೆಟ್ಟಿ ಹಾಗೂ ಸಂಘದ ಸರ್ವ ಕಾರ್ಯಕಾರಿ ಮಂಡಳಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗಾಗಿ ಪರಿಸರದ ಕನ್ನಡಿಗರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘವು ಪ್ರಕಟಣೆಯಲ್ಲಿ ಕೋರಿದೆ.



Related posts

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಜ1 ರಂದು, ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ.

Mumbai News Desk

ಜೂನ್ 8ರಂದು “ಕನ್ನಡ ವೆಲ್ಫೇರ್ ಸಂಘ” ಜೆರಿಮರಿ, ಕುರ್ಲಾ ಪಶ್ಚಿಮ – ನೂತನ ಸಂಘದ ಉದ್ಘಾಟನೆ.

Mumbai News Desk

ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಕುಲಾಲ ಸಂಘ ಮುಂಬಯಿ: ನವಿ ಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗ – ಪೆ 15.: ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: ಡಿ. 9 ರಂದು 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಶ್ರೀ ಜಗದಂಬಾ ಮಂದಿರ, ಡೊಂಬಿವಲಿ (ಪ.): ಸೆ. 28ಕ್ಕೆ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಯಕ್ಷಗಾನ.

Mumbai News Desk