32 C
Mumbai
March 7, 2026
Mumbai News Kannada
ಪ್ರಕಟಣೆ

ಫೆ.28 ರಂದು ಡೊಂಬಿವಲಿಯಲ್ಲಿ ಶನಿವಾರ ಸಮೂಹಿಕ ಶ್ರೀ ಶನೀಶ್ವರ ಮಹಾಪೂಜೆ ಮತ್ತು ತಾಳಮದ್ದಳೆ





ಡೊಂಬಿವಲಿ: ಇಲ್ಲಿನ ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯ ವತಿಯಿಂದ ಫೆಬ್ರವರಿ 28, ಶನಿವಾರದಂದು ಅನಂತ ಸ್ಮೃತಿ ಕಟ್ಟಡದ ಸ್ಥಳೀಯ ಕಚೇರಿ ಸಂಕೀರ್ಣದಲ್ಲಿ ‘ಸಮೂಹಿಕ ಶ್ರೀ ಶನೀಶ್ವರ ಮಹಾಪೂಜೆ’ ಮತ್ತು ‘ಶ್ರೀ ಶನೀಶ್ವರ ಮಹಾತ್ಮೆ’ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ವಿವರ:

ಶನಿವಾರ ಬೆಳಿಗ್ಗೆ 11:30ಕ್ಕೆ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಪ್ರಧಾನ ಅರ್ಚಕ ಸತೀಶ್ ಕೋಟ್ಯಾನ್ ಅವರಿಂದ ಕಲಶ ಪ್ರತಿಷ್ಠಾಪನೆ ನೆರವೇರಲಿದೆ. ಮಧ್ಯಾಹ್ನ 12:00 ಗಂಟೆಗೆ ದೀಪ ಪ್ರಜ್ವಲನೆ ಹಾಗೂ 12:15ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1:30ರಿಂದ ‘ಶ್ರೀ ಶನೀಶ್ವರ ಮಹಾತ್ಮೆ’ ಯಕ್ಷಗಾನ ತಾಳಮದ್ದಳೆ ಜರುಗಲಿದ್ದು, ರಾತ್ರಿ 7:30ಕ್ಕೆ ಮಹಾ ಮಂಗಳಾರತಿ, ತೀರ್ಥ ಪ್ರಸಾದ ಹಾಗೂ ಅನ್ನಪ್ರಸಾದ ವಿತರಣೆ ನಡೆಯಲಿದೆ.

ಬಿಲ್ಲವರ ಅಸೋಸಿಯೇಶನ್ ಮುಂಬೈ ಕೇಂದ್ರ ಸಮಿತಿಯ ಪದಾಧಿಕಾರಿಗಳಾದ ಎಲ್. ವಿ. ಅಮೀನ್ (ಗೌರವ ಅಧ್ಯಕ್ಷರು), ಹರೀಶ್ ಜಿ. ಅಮೀನ್ (ಅಧ್ಯಕ್ಷರು), ಹರೀಶ್ ಜಿ. ಸಾಲ್ಯಾನ್ (ಗೌರವ ಪ್ರಧಾನ ಕಾರ್ಯದರ್ಶಿ), ರವಿ ಎಸ್. ಸನಿಲ್ (ಗೌರವ ಪ್ರಧಾನ ಕೋಶಾಧಿಕಾರಿ), ಶಕುಂತಲಾ ಕೆ. ಕೋಟ್ಯಾನ್ (ಮಹಿಳಾ ವಿಭಾಗದ ಕಾರ್ಯಾಧ್ಯಕ್ಷರು), ಧರ್ಮಪಾಲ ಜಿ. ಅಂಚನ್, ಸದಾಶಿವ ವೈ. ಕೋಟ್ಯಾನ್, ಪುರುಷೋತ್ತಮ ಎಸ್. ಕೋಟ್ಯಾನ್ ಹಾಗೂ ನವೀನ್ ಎಲ್. ಬಂಗೇರ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಲಿದೆ.

ಸಮೂಹಿಕ ಶನಿ ಪೂಜೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಭಕ್ತರು ₹300 ಸೇವಾ ಶುಲ್ಕದೊಂದಿಗೆ ಹೆಸರು ನೋಂದಾಯಿಸಿಕೊಳ್ಳಬಹುದು.

​ಡೊಂಬಿವಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಶ್ರೀಧರ್ ಬಿ. ಅಮೀನ್, ಗೌರವ ಅಧ್ಯಕ್ಷ ಮಂಜಪ್ಪ ಕೆ. ಪೂಜಾರಿ, ಉಪಾಧ್ಯಕ್ಷರುಗಳಾದ ಚಂದ್ರಹಾಸ ಎಸ್. ಪಾಲನ್ ಮತ್ತು ಸಚಿನ್ ಜಿ. ಪೂಜಾರಿ, ಗೌರವ ಕಾರ್ಯದರ್ಶಿ ಜೆ. ಜೆ. ಕೋಟ್ಯಾನ್ ಹಾಗೂ ಗೌರವ ಕೋಶಾಧಿಕಾರಿ ಆನಂದ್ ಡಿ. ಪೂಜಾರಿ, ಮಹಿಳಾ ವಿಭಾಗ ಮತ್ತು ಯುವ ವಿಭಾಗದ ಸದಸ್ಯರು ಈ ಸಮಾರಂಭಕ್ಕೆ ಭಕ್ತಾಭಿಮಾನಿಗಳನ್ನು ಹಾರ್ದಿಕವಾಗಿ ಆಮಂತ್ರಿಸಿದ್ದಾರೆ..



Related posts

ವಿಜಯ ಕಾಲೇಜು ಮೂಲ್ಕಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘ ಮುಂಬಯಿ: ಮಾರ್ಚ್ 7ರಂದು ವಾರ್ಷಿಕ ಸ್ನೇಹ ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ

Mumbai News Desk

ಡಿ.15 ರಿಂದ 21 ರ ವರಗೆ ಸಿರಿಕಲಾಮೇಳ (ಅ) ಬೆಂಗಳೂರು ಮತ್ತು ಅತಿಥಿ ಕಲಾವಿದರಿಂದ “ಮುಂಬಯಿ ಯಕ್ಷ ಸಪ್ತಾಹ 2023”

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಲ್ಲಿಕಾರು, ಮೂಡಬಿದೆರೆ ಶತಮಾನೋತ್ಸವದ ಸಂಭ್ರಮದಲ್ಲಿ ನಮ್ಮ ಶಾಲೆ :

Mumbai News Desk

ಫೆ. 10ಕ್ಕೆ ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ – ಸಂತ ಸಮಾಗಮ

Mumbai News Desk

ಆ. 25. ಬಾಂಬೆ ಬಂಟ್ಸ್ ಅಸೋಷಿಯೇಶನ್ ವತಿಯಿಂದ ವಾರ್ಷಿಕ ಶೈಕ್ಷಣಿಕ ಸಹಾಯ ವಿತರಣಾ,ಯಕ್ಷಗಾನ,ಸಾಧಕರಿಗೆ ಸನ್ಮಾನ

Mumbai News Desk

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk