32 C
Mumbai
April 24, 2026
Mumbai News Kannada
ಸುದ್ದಿ

ಆಂಧ್ರಪ್ರದೇಶದ ಪಟಾಕಿ ಘಟಕದಲ್ಲಿ ಭಾರಿ ಸ್ಫೋಟ, 18 ಮಂದಿ ಸಾವು






 

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ದುರಂತಕ್ಕೆ 18 ಮಂದಿ ಬಲಿಯಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪಟಾಕಿ ತಯಾರಿಕಾ ಘಟಕದಲ್ಲಿ ದಿಢೀರ್ ಸ್ಫೋಟ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರ್ಖಾನೆಯನ್ನು ಆವರಿಸಿಕೊಂಡಿದೆ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎಂದು ನಂಬಲಾಗಿದೆ.

ಕಾಕಿನಾಡ ಜಿಲ್ಲೆಯ ಸಾಮರ್ಲಕೋಟ ಮಂಡಲದ ವೆಟ್ಲಪಾಲಂ-ಜಿ. ಮೇಡುಪಾಡು ನಡುವೆ ಇರುವ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದೆ.ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಕಾರ್ಮಿಕರ ಮೃತದೇಹಗಳು ನೂರಾರು ಅಡಿ ದೂರದ ಹೊಲಗದ್ದೆಗಳಿಗೆ ಹಾರಿಬಿದ್ದಿವೆ. ಸ್ಥಳೀಯ ಪೆದಪುಡಿ ರಸ್ತೆಯಲ್ಲಿರುವ ಅಡಪಾ ನಾನಿ ಎಂಬುವವರ ಕುಟುಂಬಕ್ಕೆ ಸೇರಿದ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಇಡೀ ಪ್ರದೇಶ ದಟ್ಟ ಹೊಗೆಯಿಂದ ಆವೃತವಾಗಿದೆ.

ಈ ಭೀಕರ ಸ್ಫೋಟಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ದುರ್ಘಟನೆ ಸಂಭವಿಸುವ ವೇಳೆ ಕಾರ್ಖಾನೆಯಲ್ಲಿ 30 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತದ ಹಿಂದಿನ ಕಾರಣಗಳನ್ನು ಪತ್ತೆಹಚ್ಚಲು ತನಿಖೆಗೆ ಆದೇಶಿಸಿದ್ದಾರೆ. ಈ ದುರಂತವು ಇಡೀ ಜಿಲ್ಲೆಯಾದ್ಯಂತ ಶೋಕದ ಛಾಯೆ ಮೂಡಿಸಿದೆ. ಮೃತರ ಕುಟುಂಬಗಳಿಗೆ ಸರ್ಕಾರವು ಶೀಘ್ರದಲ್ಲೇ ಪರಿಹಾರ ಘೋಷಿಸುವ ಸಾಧ್ಯತೆಯಿದೆ.



Related posts

ಮೈತ್ರಿ ಮಲ್ಲಿಗೆ ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ, 200ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಪರ್ಧಿಗಳಿದ್ದ ಕಣದಲ್ಲಿ ರಾಜ್ಯಕ್ಕೆ ಪ್ರಶಸ್ತಿ ಗೆದ್ದು ಕೊಟ್ಟ ಏಕೈಕ ಸಾಧಕಿ

Mumbai News Desk

ಕುಂಬಳೆ : ಡಿವೈಎಫ್ಐ ಪ್ರ‌ಮುಖ ನಾಯಕಿ, ಯುವ ನ್ಯಾಯವಾದಿ ರಂಜಿತಾ ಆತ್ಮಹತ್ಯೆಗೆ ಶರಣು

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ದುಬೈ :ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ  “ದಿ ಬೋಟ್ ಮ್ಯಾನ್ ಹಬ್” ರೆಸ್ಟೋರೆಂಟ್ ಉದ್ಘಾಟನೆ

Mumbai News Desk

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

Mumbai News Desk

ಬಗ್ವಾಡಿ, ಬಚ್ಚು ಸಿ ಕುಂದರ್ ನಿಧನ

Mumbai News Desk