July 22, 2026
Mumbai News Kannada
ಸುದ್ದಿ

ಆಂಧ್ರಪ್ರದೇಶದ ಪಟಾಕಿ ಘಟಕದಲ್ಲಿ ಭಾರಿ ಸ್ಫೋಟ, 18 ಮಂದಿ ಸಾವು








 

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ದುರಂತಕ್ಕೆ 18 ಮಂದಿ ಬಲಿಯಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪಟಾಕಿ ತಯಾರಿಕಾ ಘಟಕದಲ್ಲಿ ದಿಢೀರ್ ಸ್ಫೋಟ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರ್ಖಾನೆಯನ್ನು ಆವರಿಸಿಕೊಂಡಿದೆ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎಂದು ನಂಬಲಾಗಿದೆ.

ಕಾಕಿನಾಡ ಜಿಲ್ಲೆಯ ಸಾಮರ್ಲಕೋಟ ಮಂಡಲದ ವೆಟ್ಲಪಾಲಂ-ಜಿ. ಮೇಡುಪಾಡು ನಡುವೆ ಇರುವ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದೆ.ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಕಾರ್ಮಿಕರ ಮೃತದೇಹಗಳು ನೂರಾರು ಅಡಿ ದೂರದ ಹೊಲಗದ್ದೆಗಳಿಗೆ ಹಾರಿಬಿದ್ದಿವೆ. ಸ್ಥಳೀಯ ಪೆದಪುಡಿ ರಸ್ತೆಯಲ್ಲಿರುವ ಅಡಪಾ ನಾನಿ ಎಂಬುವವರ ಕುಟುಂಬಕ್ಕೆ ಸೇರಿದ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಇಡೀ ಪ್ರದೇಶ ದಟ್ಟ ಹೊಗೆಯಿಂದ ಆವೃತವಾಗಿದೆ.

ಈ ಭೀಕರ ಸ್ಫೋಟಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ದುರ್ಘಟನೆ ಸಂಭವಿಸುವ ವೇಳೆ ಕಾರ್ಖಾನೆಯಲ್ಲಿ 30 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತದ ಹಿಂದಿನ ಕಾರಣಗಳನ್ನು ಪತ್ತೆಹಚ್ಚಲು ತನಿಖೆಗೆ ಆದೇಶಿಸಿದ್ದಾರೆ. ಈ ದುರಂತವು ಇಡೀ ಜಿಲ್ಲೆಯಾದ್ಯಂತ ಶೋಕದ ಛಾಯೆ ಮೂಡಿಸಿದೆ. ಮೃತರ ಕುಟುಂಬಗಳಿಗೆ ಸರ್ಕಾರವು ಶೀಘ್ರದಲ್ಲೇ ಪರಿಹಾರ ಘೋಷಿಸುವ ಸಾಧ್ಯತೆಯಿದೆ.



Related posts

ಮಣ್ಣಿನ ಮಗನ ಜಾಗತಿಕ ಗರ್ಜನೆ: ಆಸ್ಕರ್ ಅಂಗಳಕ್ಕೆ ‘ಕಾಂತಾರ ಚಾಪ್ಟರ್ ಒನ್’ ಲಗ್ಗೆ

Mumbai News Desk

ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ವಿಯೋಗ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ವಿಶ್ವನಾಥ ಯು. ಮಾಡಾ ನಿಧನಕ್ಕೆ ನುಡಿ ನಮನ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ ‘ಬ್ಯಾಂಕೊ ಬ್ಲೂ ರಿಬ್ಬನ್- 2023- 2024 ಪ್ರಶಸ್ತಿ

Mumbai News Desk

ಎಸ್. ಎಸ್. ಸಿ. (CBSE) ಪರೀಕ್ಷೆ: ಶಮ ಸಂಜೀವ ಬಂಗೇರಗೆ 97.4% ಅಂಕ

Mumbai News Desk

ಸರ್ಕಾರಕ್ಕೆ ನಮ್ಮ ಬೇಡಿಕೆ ತಲುಪಿಸಲು ಮಹಾ ಅಧಿವೇಶನ ಅಗತ್ಯ” — ಭಟ್ಕಳ ಪೂರ್ವಭಾವಿ ಸಭೆಯಲ್ಲಿ ಧರ್ಮಪಾಲ್ ಯು. ದೇವಾಡಿಗ

Mumbai News Desk