ಕಲ್ಯಾಣ(ಪ) : ಪ್ರತಿ ವರ್ಷದಂತೆ ಈ ವರ್ಷವೂ ಸಂಘದ ವಾರ್ಷಿಕ ಮಹಿಳಾ ದಿನಾಚರಣೆಯನ್ನು ಬರುವ 8 ಮಾರ್ಚ್ ರಂದು ಕಲ್ಯಾಣ(ಪ)ದ ಬ್ರಾಹ್ಮಣ ಸೊಸೈಟಿ ಸಭಾಗ್ರಹದಲ್ಲಿ ಸಂಜೆ 5ದ ರಿಂದ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ DMD Architect ಮಾಲಿಕರಾದ ಶ್ರೀಮತಿ ಶೈಲಜ ವೈದ್ಯರವರು ಹಾಗೂ ಗೌರವ ಅತಿಥಿಯಾಗಿ ಛಾಯಾಕಿರಣ ಪತ್ರಿಕೆಯ ಉಪ ಸಂಪಾದಕಿಯಾದ ಶ್ರೀಮತಿ ಶಾಲಿನಿ ಶೆಟ್ಟಿಯವರು ಆಗಮಿಸಲಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಈ ಸಂದರ್ಭದಲ್ಲಿ ಕಲ್ಯಾಣ ಡೊಂಬಿವಲಿ ಪರಿಸರದ ಸಮಾಜ ಸೇವಕಿ, ಮುಂಬೈ ಮಹಾನಗರ ಕನ್ನಡ ಸಂಘದ ಮಹಿಳಾಧ್ಯಕ್ಷೆಯಾದ ಶ್ರೀಮತಿ ವಿದ್ಯಾ ಸತೀಶ್ ಅಲಗೂರ್ ರವರನ್ನು ಸನ್ಮಾನಿಸಲಾಗುವುದು. ಈ ಸಂದರ್ಭದಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ತಾವೆಲ್ಲರೂ ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕಾಗಿ ಸಂಘದ ಅಧ್ಯಕ್ಷ ಶ್ರೀ ಜಯಂತ ದೇಶಮುಖ್, ಉಪಾಧ್ಯಕ್ಷೆ ಶ್ರೀಮತಿ ಜಯಂತಿ ಗೋಪಾಲ ಹೆಗ್ಡೆ, ಮಹಿಳಾಧ್ಯಕ್ಷೆ ಶ್ರೀಮತಿ ವೀಣಾ ಕಾಮತ್ ಹಾಗೂ ಪೂರ್ವ ಅಧ್ಯಕ್ಷೆ ದರ್ಶನಾ ಸೋನ್ಕರ್ ರವರು ಸಂಘದ ಪರವಾಗಿ ವಿನಂತಿಸಿಕೊಂಡಿದ್ದಾರೆ.




