September 6, 2026
Mumbai News Kannada
ಸುದ್ದಿ

ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಮಂತ್ರಾಲಯ ಪರಿಮಳ’ ಪ್ರಶಸ್ತಿ ಪ್ರದಾನ





ಮಂತ್ರಾಲಯ: ಭಾರತದ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಆಂಧ್ರಪ್ರದೇಶದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಫೆಬ್ರವರಿ 25ರಂದು ನಡೆದ ಭವ್ಯ ಸಮಾರಂಭದಲ್ಲಿ, ಪ್ರಸಿದ್ಧ ಸಂಘಟಕ ಹಾಗೂ ಸಮಾಜ ಸೇವಕ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ‘ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026’ ನೀಡಿ ಗೌರವಿಸಲಾಯಿತು.

​ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರೂ ಆಗಿರುವ ಸೂರ್ಯಕಾಂತ್ ಅವರ ಸುದೀರ್ಘ ಸಮಾಜ ಸೇವೆ, ಸಮರ್ಥ ನಾಯಕತ್ವ ಮತ್ತು ಚಿಂತನಶೀಲ ವ್ಯಕ್ತಿತ್ವವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಪ್ರಶಸ್ತಿ ಹಸ್ತಾಂತರಿಸಿದರು.

ಈ ಸಮಾರಂಭದಲ್ಲಿ ಆಂಧ್ರಪ್ರದೇಶ ಮತ್ತು ಕರ್ನಾಟಕದ ಪ್ರಮುಖ ರಾಜಕೀಯ ಮುಖಂಡರು, ಕಾರ್ಮಿಕ ನಾಯಕರು ಹಾಗೂ ಮಂತ್ರಾಲಯ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಭಿನಂದನೆಗಳ ಮಹಾಪೂರ:

ಗುರುಗಳ ಅನುಗ್ರಹದೊಂದಿಗೆ ಈ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಜಯ ಸಿ. ಸುವರ್ಣ ಅಭಿಮಾನಿಗಳು, ಶ್ರೀ ನಾರಾಯಣ ಗುರು ಭಜನಾ ಮಂಡಳಿ ಹಾಗೂ ಮುಂಬಯಿ ಬಿಲ್ಲವರು ಹೃತೂವ೯ಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಸೂರ್ಯಕಾಂತ್ ಅವರ ನಾಯಕತ್ವವು ಸಮಾಜದ ಏಳಿಗೆಗೆ ಮತ್ತಷ್ಟು ಶಕ್ತಿಯಾಗಲಿ ಎಂದು ಅಭಿಮಾನಿ ಬಳಗ ಹಾರೈಸಿದೆ.



Related posts

ಪೆರುವಾಯಿ ನಾರಾಯಣ ಭಟ್ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ.

Mumbai News Desk

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ   ‘ಸುವರ್ಣಯುಗ’ ಕೃತಿ ಬಿಡುಗಡೆ

Mumbai News Desk

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk

ಸಿವಿಲ್ ಇಂಜಿನಿಯರಿಂಗ್ ಸಂಸ್ಥೆಯ ಉಪಾಧ್ಯಕ್ಷರಾಗಿ ಜೀವನ್ ಶೆಟ್ಟಿ ಮುಲ್ಕಿ ಆಯ್ಕೆ

Mumbai News Desk

ಕೇಮುಂಡೇಲು : ಅಂಗಾಗ ಕೃಷಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿದ ಡಾ. ಕೆ. ಜಿ. ಸುರೇಶ್ ರಾವ್ ಅವರಿಗೆ ಹುಟ್ಟೂರ ಅಭಿನಂದನೆ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk