30.9 C
Mumbai
June 8, 2026
Mumbai News Kannada
ಪ್ರಕಟಣೆ

ಮೂಲ್ಕಿ: ಮಾರ್ಚ್ 10ರಂದು, ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ





ಹೊಸ ಅಂಗಣ ಪ್ರಕಟಣಾಲಯದ ವತಿಯಿಂದ ಹರಿಶ್ಚಂದ್ರ ಪಿ. ಸಾಲಿಯಾನ್ ಅವರ 22ನೇ ಕೃತಿ “ತುಳುನಾಡ್ಡ ತುಳು ಗಾದೆಲು” ಪುಸ್ತಕದ ಬಿಡುಗಡೆ ಸಮಾರಂಭವು ಇದೇ ಮಾರ್ಚ್ 10, 2026ರಂದು ಗುರುವಾರ ಸಂಜೆ 4:00 ಗಂಟೆಗೆ ಮೂಲ್ಕಿಯ ಕೆ.ಎಸ್. ರಾವ್ ನಗರದ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಅವರು ಈ ಕೃತಿಯನ್ನು ಬಿಡುಗಡೆಗೊಳಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪೂವಾರಿ ಸಂಪಾದಕ ವಿಜಯ್ ಕುಮಾರ್ ಭಂಡಾರಿ ಹೆಬ್ಬಾರಬೈಲು,ಪುತ್ತೂರು, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಮಹಾಬಲ ಎನ್. ಸನಿಲ್, ಸಾಮಾಜಿಕ ಕಾರ್ಯಕರ್ತ ಜನಾರ್ದನ ಬಂಗೇರ, ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಹಾಗೂ ಸದಾನಂದ ಆಚಾರ್ಯ ಟಿಕಿಟರ್ ಭಾಗವಹಿಸಲಿದ್ದಾರೆ. ಹೊಸ ಅಂಗಣ ಪ್ರಕಾಶನದ ಹರಿಶ್ಚಂದ್ರ ಪಿ ಸಾಲಿಯಾನ್ ಅವರು ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತ ಕೋರಿದ್ದಾರೆ.



Related posts

ಬೊರಿವಲಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ನಾಗರ ಪಂಚಮಿ ಉತ್ಸವ

Mumbai News Desk

ಸಾಲಿಯಾನ್ ಆದಿ ಮೂಲಸ್ಥಾನ ಫಲಿಮಾರು : ಮೇ. 3ರಿಂದ ಮೇ 9ರ ತನಕ ನಾಗದೇವರಿಗೆ ಅಶ್ಲೇಷ ಬಲಿ, ನೂತನ ಗೋಪುರ ಸಮರ್ಪಣೆ, ನಾಗದೇವರ ಧರ್ಮದೈವಗಳ ವಾರ್ಷಿಕ ಉತ್ಸವ, ಧರ್ಮದೈವಗಳ ನೇಮೋತ್ಸವ.

Mumbai News Desk

ಡೊಂಬಿವಲಿ: ಮಾರ್ಚ್ 17 (ನಾಳೆ) ಅನುಜಾ ಮಹಿಳಾ ಸಂಸ್ಥೆಯ 45ನೇ ವಾರ್ಷಿಕೋತ್ಸವ

Mumbai News Desk

ಜ. 30 ರಿಂದ ಫೆ.1ರ ತನಕ ಜರ್ಮನಿನಲ್ಲಿ ಓಪನ್ ವರ್ಲ್ಡ್ ವೇಟ್ ಲಿಪ್ಟಿಂಗ್ ಚಾಂಪಿಯನ್‌ಶಿಪ್‌

Mumbai News Desk

ಏ. 13 ರಂದು ಮಂಗಳೂರಲ್ಲಿ ನಡೆಯಲಿರುವ ಕುಲಾಲ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಡಿಸೇಂಬರ್ 15ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk