
ಹೊಸ ಅಂಗಣ ಪ್ರಕಟಣಾಲಯದ ವತಿಯಿಂದ ಹರಿಶ್ಚಂದ್ರ ಪಿ. ಸಾಲಿಯಾನ್ ಅವರ 22ನೇ ಕೃತಿ “ತುಳುನಾಡ್ಡ ತುಳು ಗಾದೆಲು” ಪುಸ್ತಕದ ಬಿಡುಗಡೆ ಸಮಾರಂಭವು ಇದೇ ಮಾರ್ಚ್ 10, 2026ರಂದು ಗುರುವಾರ ಸಂಜೆ 4:00 ಗಂಟೆಗೆ ಮೂಲ್ಕಿಯ ಕೆ.ಎಸ್. ರಾವ್ ನಗರದ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಅವರು ಈ ಕೃತಿಯನ್ನು ಬಿಡುಗಡೆಗೊಳಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪೂವಾರಿ ಸಂಪಾದಕ ವಿಜಯ್ ಕುಮಾರ್ ಭಂಡಾರಿ ಹೆಬ್ಬಾರಬೈಲು,ಪುತ್ತೂರು, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಮಹಾಬಲ ಎನ್. ಸನಿಲ್, ಸಾಮಾಜಿಕ ಕಾರ್ಯಕರ್ತ ಜನಾರ್ದನ ಬಂಗೇರ, ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಹಾಗೂ ಸದಾನಂದ ಆಚಾರ್ಯ ಟಿಕಿಟರ್ ಭಾಗವಹಿಸಲಿದ್ದಾರೆ. ಹೊಸ ಅಂಗಣ ಪ್ರಕಾಶನದ ಹರಿಶ್ಚಂದ್ರ ಪಿ ಸಾಲಿಯಾನ್ ಅವರು ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತ ಕೋರಿದ್ದಾರೆ.




