31 C
Mumbai
March 6, 2026
Mumbai News Kannada
ಸುದ್ದಿ

ಮುಂಬೈ : ಪ್ರವೀಣ್ ಭಟ್ ಅವರಿಗೆ ಪಿತೃ ವಿಯೋಗ





​ಮೂಡಬಿದ್ರೆ ಕುಂಜಾಡಿಯ ನಿವಾಸಿಯಾದ ಹಿರಿಯ ಸಮಾಜ ಸೇವಕ, ಪ್ರಗತಿಪರ ಕೃಷಿಕ ಹಾಗೂ ದಾನಿಗಳಾದ ಮಹಾಬಲ (95) ಅವರು ಮಾರ್ಚ್ 5ರಂದು ದೈವಾಧೀನರಾಗಿದ್ದಾರೆ. ಮೃತರು ಮುಂಬೈನ ಖ್ಯಾತ ಜ್ಯೋತಿಷಿ, ಪುರೋಹಿತ ಹಾಗೂ ಸಯನ್ ಕನ್ನಡ ಸಂಘದ ಅಧ್ಯಕ್ಷರಾದ ಪ್ರವೀಣ್ ಭಟ್ ಅವರ ತಂದೆಯಾಗಿದ್ದಾರೆ.
​ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಸಕ್ರಿಯ ಸದಸ್ಯರಾಗಿ ಸಾಂಪ್ರದಾಯಿಕ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿದ್ದ ಅವರು, ಕೃಷಿ ಕ್ಷೇತ್ರದಲ್ಲಿಯೂ ಅಪಾರ ಸಾಧನೆ ಮಾಡಿದ ಸಾಧಕರಾಗಿದ್ದರು. ಮೃತರು ಪತ್ನಿ, ಪ್ರವೀಣ್ ಭಟ್ ಸೇರಿದಂತೆ ಆರು ಮಂದಿ ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
​ಇವರ ನಿಧನಕ್ಕೆ ಕನ್ನಡ ಸಂಘ ಸಯನ್ ನ ಪದಾಧಿಕಾರಿಗಳು, ಸಲಹೆಗಾರರು, ಸದಸ್ಯರು, ಮುಂಬೈ ಬಿಲ್ಲವರು, ಶ್ರೀ ನಾರಾಯಣ ಗುರು ಭಜನಾ ಮಂಡಳಿಯ ಸದಸ್ಯರು ಹಾಗೂ ಜಯ ಸಿ. ಸುವರ್ಣ ಅಭಿಮಾನಿ ಬಳಗದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಮಾಜದ ಹಿತಚಿಂತಕರಾಗಿದ್ದ ಅವರ ಅಗಲಿಕೆಯು ಈ ಭಾಗದ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.



Related posts

ಮಜ್ ಗಾಂವ್ ನ ರಾಜ್ ಕಮಲ್ ಟೈಲರ್ಸ್ ನ ಮಾಲಕ ದೇವಪ್ಪ ಪೂಜಾರಿ ನಿಧನ

Mumbai News Desk

ಸತತ 12 ಗಂಟೆ ಚರ್ಚೆ, ವಾಗ್ವಾದ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭಾಭವನ ನಿರ್ಮಾಣಕ್ಕೆ ಸಹಕಾರ ರತ್ನ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಸಹಕಾರ

Mumbai News Desk

ಚೀನಾದ  ಮಿಲಿಯನ್ ಡಾಲರ್ ರೌಂಡ್ ಟೇಬಲ್ ಅಧೀವೇಶನಕ್ಕೆ ಸ್ಪೀಕ‌ರ್ ಆಗಿ   ಡಾ| ಆರ್.ಕೆ ಶೆಟ್ಟಿ ಆಯ್ಕೆ

Mumbai News Desk

ಸುರತ್ಕಲ್ : 2 ತಂಡಗಳ ನಡುವೆ ಗಲಾಟೆ, ಇಬ್ಬರಿಗೆ ಚೂರಿ ಇರಿತ

Mumbai News Desk

ರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಮತ್ತು ಸಬಲೀಕರಣ ಸಮಸ್ಯೆಗಳ ಬಗ್ಗೆ ಚರ್ಚೆ.

Mumbai News Desk