33 C
Mumbai
April 26, 2026
Mumbai News Kannada
ತುಳುನಾಡು

ಮುಲ್ಕಿ : ಹರಿಶ್ಚಂದ್ರ ಸಾಲಿಯಾನ್‌ರವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ





​ಹರಿಶ್ಚಂದ್ರ ಎ. ಸಾಲಿಯಾನ್‌ರವರು ಸರ್ಕಾರಿ ಸೇವೆಯಿಂದ ನಿವೃತ್ತರಾದ ನಂತರ ತುಳು ಮತ್ತು ಕನ್ನಡ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರು ‘ಹೊಸ ಅಂಗಣ’ ಮಾಸ ಪತ್ರಿಕೆಯನ್ನು ಆರಂಭಿಸಿ 10 ವರ್ಷಗಳ ಕಾಲ ಯಶಸ್ವಿಯಾಗಿ ನಡೆಸುತ್ತಾ, ಲೇಖಕರಿಗೆ ಬರವಣಿಗೆಯ ವೇದಿಕೆಯನ್ನು ಕಲ್ಪಿಸಿಕೊಟ್ಟಿದ್ದಾರೆ. ಇವರಿಗೆ ನಾವೆಲ್ಲರೂ ಪ್ರೋತ್ಸಾಹ ನೀಡಬೇಕು ಎಂದು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ಹೇಳಿದರು.
​ಅವರು ಕೆ. ಎಸ್. ರಾವ್ ನಗರದ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಮಾರ್ಚ್ 10ರಂದು ಹೊಸ ಅಂಗಣ ಪ್ರಕಾಶನಾಲಯದ ಅಡಿಯಲ್ಲಿ ಪ್ರಕಟವಾದ ಹರಿಶ್ಚಂದ್ರ ಎ. ಸಾಲಿಯಾನ್‌ರವರ 22ನೇ ಕೃತಿ ‘ತುಳುನಾಡ್ಡ ತುಳು ಗಾದೆಲು’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.


ಸಾಹಿತ್ಯ ಲೋಕದಲ್ಲಿ ಇಂತಹ ಗಾದೆಗಳ ಕೃತಿಗಳನ್ನು ಬರೆಯುವವರು ತೀರಾ ಕಡಿಮೆ. ಇಂತಹ ಉತ್ತಮ ಕೆಲಸ ಮಾಡಿದ ಹರಿಶ್ಚಂದ್ರ ಸಾಲಿಯಾನ್ ಅವರಿಗೆ ನಮ್ಮ ಬೆಂಬಲ ಸದಾ ಇರಲಿ ಎಂದು ಹಾರೈಸಿದರು.
​ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ‘ಯುಗಪುರುಷ’ದ ಸಂಪಾದಕ ಭುವನಾಭಿರಾಮ ಉಡುಪ ಅವರು ಮಾತನಾಡಿ, ಹರಿಶ್ಚಂದ್ರ ಸಾಲಿಯಾನ್ ಅವರ ಮೊದಲ ಕೃತಿಯನ್ನು ಯುಗಪುರುಷ ಪ್ರಕಾಶನಾಲಯವೇ ಪ್ರಕಟಿಸಿತ್ತು. ಅವರ ‘ಮದು-ಮದಿಪು ನುಡಿಕಟ್ಟು’ ಕೃತಿ ಈಗಾಗಲೇ ಜನಪ್ರಿಯವಾಗಿದೆ. ಅದೇ ರೀತಿ ಈ ನೂತನ ಕೃತಿಯೂ ಅಪಾರ ಜನಮೆಚ್ಚುಗೆ ಗಳಿಸುವುದರಲ್ಲಿ ಸಂದೇಹವಿಲ್ಲ ಎಂದರು.
​ವೇದಿಕೆಯಲ್ಲಿ ಉದ್ಯಮಿ ಸದಾಶಿವ ಆಚಾರ್ಯ, ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ಮಹಾಬಲ ಎನ್. ಸನಿಲ್, ತುಳು ಪತ್ರಿಕೆ ಸಂಪಾದಕ ಪೂವರಿ ವಿಜಯ್ ಕುಮಾರ್ ಭಂಡಾರಿ ಪುತ್ತೂರು, ಸಾಮಾಜಿಕ ಕಾರ್ಯಕರ್ತ ಜಗದೀಶ್ ಬಂಗೇರ, ಗೋಪಿನಾಥ್ ಪಡಂಗ, ದಿನೇಶ್ ಕೊಲ್ನಾಡು , ಜಯಪಾಲ ಶೆಟ್ಟಿ, ಯೋಗ್ ಕ್ಯಾಡ್ವಾಸ್, ನಿವೃತ್ತ ಪೊಲೀಸ್ ಅಧಿಕಾರಿ ಕೆ. ಎನ್. ಕೋಟ್ಯಾನ್, ಸರೋಜಿನಿ ಸುವರ್ಣ, ಇಂದಿರಾ, ವಿಜಯ್ ಎಚ್. ಸಾಲಿಯಾನ್, ಕೇಶವಾನಂದ ಗುರೂಜಿ, ಕರುಣಾಕರ ಸುವರ್ಣ, ಜಿ. ಟಿ. ಆಚಾರ್ಯ,ಮುಂಬೈ, ಜೆ . ಎಸ್.ಕರ್ಕೇರ ಅವರು ಭಾಗವಹಿಸಿದ್ದರು.
​ಇದೇ ಸಂದರ್ಭದಲ್ಲಿ ಪ್ರತಿಭಾವಂತ ಲೇಖಕಿ ಶರೋನ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಜೆಸಿ ದಿನೇಶ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರೆ, ವಾಸು ಪೂಜಾರಿಯವರು ವಂದನಾರ್ಪಣೆ ಮಾಡಿದರು.



Related posts

ಕಲ್ಯಾಣಪುರ : ಸಂತೆಕಟ್ಟೆ ಬಿಲ್ಲವರ ಸೇವಾಸಂಘ (ರಿ ), ನಯಂಪಳ್ಳಿ – ಸಂತೆಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆ

Mumbai News Desk

ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ದಾರದ ನಿಮ್ಮಿತ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಚಂದ್ರಶೇಖರ ಬೆಳ್ಚಡ ಸಾರಥ್ಯದಲ್ಲಿ ಕಟೀಲಿನಲ್ಲಿ 50ನೇ ವರ್ಷದ ಗಂಪ ಯಕ್ಷ ಸುವರ್ಣ ಸಂಭ್ರಮ.

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವದ ನಾಲ್ಕನೇ ದಿನದ ಸಮಾರಂಭ;

Mumbai News Desk

ಉಡುಪಿ ಕಂಬಳ ಶಂಕುಸ್ಥಾಪನೆ: ನಿಷೇಧಾಜ್ಞೆ ಉಲ್ಲಂಘಿಸಿದ ಸಂಸದರು, ಶಾಸಕರು ಸೇರಿ 37 ಮಂದಿಯ ವಿರುದ್ಧ ಎಫ್‌ಐಆರ್ ದಾಖಲು

Mumbai News Desk