30.4 C
Mumbai
June 11, 2026
Mumbai News Kannada
ತುಳುನಾಡು

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ





ಮಾಜಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ವಿನಯ್ ಕುಮಾರ್ ಸೊರಕೆಯವರ ಆದೇಶದ ಮೇರೆಗೆ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷರಾದ ವೈ. ಸುಕುಮಾರ್ ಅವರ ಶಿಫಾರಸ್ಸಿನಂತೆ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಅವರನ್ನು ನೇಮಕ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಕಾಪು ರಾಜೀವ ಭವನದಲ್ಲಿ ಸನ್ಮಾನ್ಯ ವಿನಯ್ ಕುಮಾರ್ ಸೊರಕೆ ಅವರು ಪ್ರಭೋದ್ ಚಂದ್ರ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ಸದಸ್ಯರಾದ ಸುಧೀರ್ ಎಸ್ ಕರ್ಕೇರ,ಸುಭಾಶ್ ಸಾಲ್ಯಾನ್, ಶೇಖರ್, ಯೋಗೀಶ್ ಹೆಜಮಾಡಿ ಉಪಸ್ಥಿತರಿದ್ದರು, ನೂತನವಾಗಿ ಆಯ್ಕೆಯಾದ ಪ್ರಭೋದ್ ಚಂದ್ರ ಅವರು ಪಕ್ಷವನ್ನು ಗ್ರಾಮೀಣ ಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಈ ನೇಮಕಾತಿಯ ಮೂಲಕ ಹೆಜಮಾಡಿ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಇನ್ನಷ್ಟು ಬಲವತ್ತಾಗಲಿ ಎಂದು ಹಾರೈಸಲಾಯಿತು.

​ಪ್ರಬೋದ್ ಚಂದ್ರ ಅವರು ಈ ಹಿಂದೆ ಡಿಸಿಸಿ ಬ್ಯಾಂಕ್‌ನಲ್ಲಿ ಉಡುಪಿ ಜಿಲ್ಲೆಯ ವಿವಿಧ ಶಾಖೆಗಳಲ್ಲಿ ಹಿರಿಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಉತ್ತಮ ಆಡಳಿತ ಮತ್ತು ಸೇವೆಯಿಂದ ಗುರುತಿಸಿಕೊಂಡಿದ್ದಾರೆ. ತಮ್ಮ ಕರ್ತವ್ಯದ ಮೂಲಕ ಸಾವಿರಾರು ಮಂದಿಯ, ಎಲ್ಲಾ ಜಾತಿ-ಧರ್ಮದ ಜನರ ಪ್ರೀತಿ ಹಾಗೂ ಗೌರವಕ್ಕೆ ಪಾತ್ರರಾಗಿದ್ದಾರೆ



Related posts

ಉದ್ಯಮಿ ಮನೋಹರ ಎಸ್ ಶೆಟ್ಟಿ ದಂಪತಿಗಳಿಗೆ : ಕಾಪು ಬಂಟರ ಸಂಘದಿಂದ ಸನ್ಮಾನ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಸೋತ್ಸವ, ಧಾರ್ಮಿಕ ಸಭೆ;

Mumbai News Desk

ಕಾಪುವಿನ ಶ್ರೀ ಬಬ್ಬರ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಕಾಲದಿ ನೇಮೋತ್ಸವ

Mumbai News Desk

ಮುಲ್ಕಿ : ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದಲ್ಲಿ ‘ವನ ಮಹೋತ್ಸವ’ ದಿನಾಚರಣೆ, ಹಸಿರು ಕ್ರಾಂತಿಗೆ ಕರೆ

Mumbai News Desk

ಮುಲ್ಕಿ : ಸಾಧಕರ ಅರಸು ಕಂಬಳ ಪ್ರಶಸ್ತಿ 2025 ಪ್ರಕಟ – ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ

Mumbai News Desk

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

Mumbai News Desk