34 C
Mumbai
March 13, 2026
Mumbai News Kannada
ಸುದ್ದಿ

ಕಾಂದಿವಲಿ: ಯೂನಿಯನ್ ಬ್ಯಾಂಕ್ ನಿವೃತ್ತ ಅಧಿಕಾರಿ ಕುಸುಮಲತಾ ಸುವರ್ಣ ನಿಧನ





ಮುಂಬಯಿ: ಇಲ್ಲಿನ ಕಾಂದಿವಲಿ ಪಶ್ಚಿಮದ ಎಂ.ಜಿ. ರಸ್ತೆಯ ಸ್ವಾಮಿ ದರ್ಶನ್ ಸೊಸೈಟಿಯ ನಿವಾಸಿ, ಯೂನಿಯನ್ ಬ್ಯಾಂಕಿನ ನಿವೃತ್ತ ಅಧಿಕಾರಿ ಕುಸುಮಲತಾ ಕೃಷ್ಣ ಸುವರ್ಣ (71) ಅವರು ಮಾರ್ಚ್ 12ರಂದು ನಿಧನರಾದರು.

​ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನವರಾದ ಇವರು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪುತ್ರಿ, ಭಾರತ್ ಬ್ಯಾಂಕಿನ ಕೇಂದ್ರ ಕಚೇರಿಯ ಸಿಬ್ಬಂದಿ ವೀಣಾ ಸುವರ್ಣ, ಸಹೋದರಿಯರಾದ ಶಾಲಿನಿ ಅಶೋಕ್ ಮೂಡಬಿದ್ರಿ, ಮೀರಾ ಸೋಮನಾಥ ಅಮೀನ್, ಸಹೋದರ ಲೋಕೇಶ್ ವಿ. ಕರ್ಕೇರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಕುಸುಮಲತಾ ಸುವರ್ಣ ಅವರ ನಿಧನಕ್ಕೆ ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಉಪ ಕಾರ್ಯಾಧ್ಯಕ್ಷ ನ್ಯಾಯವಾದಿ ಸೋಮನಾಥ ಅಮೀನ್, ನಿರ್ದೇಶಕರುಗಳಾದ ಗಂಗಾಧರ್ ಜೆ. ಪೂಜಾರಿ, ಭಾಸ್ಕರ್ ಸಾಲಿಯನ್ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ತೀವ್ರ ಸಂತಾಪ ಸೂಚಿಸಿದ್ದಾರೆ.



Related posts

ಮುಂಬಯಿ ಕನ್ನಡ ಸಂಘ: ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk

ಮೂಲ್ಕಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾದಸ್ವರ ವಾದಕ ನಾಗೇಶ್ ಬಪ್ಪನಾಡು ಅವರಿಗೆ ಆದ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ್ ಸ್ವಾಮೀಜಿ ಅವರಿಂದ ಗೌರವ.

Mumbai News Desk

ಮುಂಬಯಿ : ಥಾಣೆಯ ಮುಂಬ್ರಾ ಬಳಿ ಚಲಿಸುವ ರೈಲಿನಿಂದ ಬಿದ್ದು ಕನಿಷ್ಠ 5 ಪ್ರಯಾಣಿಕರು ಸಾವು

Mumbai News Desk

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

Mumbai News Desk

ಕಾರ್ಕಳ : ಬಿಜೆಪಿಯ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ನಿಧನ

Mumbai News Desk

ಬೈಂದೂರು: ಕೊಡೇರಿ ಕಡಲ್ಕೊರೆತ ಪ್ರದೇಶಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ತಂಡ ಭೇಟಿ: ಸ್ಥಳೀಯರೊಂದಿಗೆ ಸಮಾಲೋಚನೆ

Mumbai News Desk