May 4, 2026
Mumbai News Kannada
ಸುದ್ದಿ

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ನೇತೃತ್ವವದಲ್ಲಿ ದೀಪೋತ್ಸವ : ಮುಂಬೈಯ ನವೀನ್ ಶೆಟ್ಟಿ ತೋನ್ಸೆಗೆ ಗೌರವ





ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪವಿತ್ರ ಅಂಗಳದಲ್ಲಿ ಇತ್ತೀಚೆಗೆ ಭಕ್ತಿ ಮತ್ತು ಆಧ್ಯಾತ್ಮದ ಅಲೆ ಎದ್ದಿತು. ಗಣೇಶಪುರಿಯ ಪರಮ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ದಿವ್ಯ ನೇತೃತ್ವದಲ್ಲಿ ನಡೆದ ಪಾರಾಯಣ ಮತ್ತು ದೀಪೋತ್ಸವ ಕಾರ್ಯಕ್ರಮವು ನೆರೆದಿದ್ದ ಸಾವಿರಾರು ಭಕ್ತರ ಕಣ್ಮನ ಸೆಳೆಯಿತು. ಮಂದಿರದ ಪ್ರಾಂಗಣವು ಮಂತ್ರಘೋಷಗಳಿಂದ ಮೊಳಗುತ್ತಿದ್ದರೆ, ಸಾಲು ಸಾಲಾಗಿ ಬೆಳಗಿದ ಹಣತೆಗಳು ಅಯೋಧ್ಯೆಯ ಧರ್ಮದೀಪ್ತಿಯನ್ನು ಜಗತ್ತಿಗೆ ಸಾರುವಂತಿದ್ದವು.
ಈ ಶುಭ ಸಂದರ್ಭದಲ್ಲಿ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮುಲುಂಡು ನಿವಾಸಿ, ಖ್ಯಾತ ಉದ್ಯಮಿ ನವೀನ್ ಶೆಟ್ಟಿ ತೋನ್ಸೆ ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.

ಶ್ರೀ ಬಾಲಯೋಗಿ ಸದಾನಂದ ಸ್ವಾಮೀಜಿಯವರು ನವೀನ್ ಶೆಟ್ಟಿ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ್ದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾಗಿ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಗಳಾದ ಚಂಪತ್ ರಾಯ್ ಜಿ ಅವರು ಉಪಸ್ಥಿತರಿದ್ದು, ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು. ಭಕ್ತರ ಸಮ್ಮುಖದಲ್ಲಿ ನಡೆದ ಈ ದೀಪೋತ್ಸವವು ಕೇವಲ ಒಂದು ಧಾರ್ಮಿಕ ವಿಧಿಯಾಗಿರದೆ, ಭಕ್ತಿ ಮತ್ತು ಸಮರ್ಪಣಾ ಭಾವದ ಮಹಾಸಂಗಮವಾಗಿ ಮೂಡಿಬಂತು.



Related posts

ಕುತ್ಯಾರು ವಿದ್ಯಾದಾಯಿನಿ ಹಿ.ಪ್ರಾ.ಶಾಲೆ ಶತಸಂವತ್ಸರೋತ್ಸವ

Mumbai News Desk

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ,   ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಶೆಟ್ಟಿ ಆಯ್ಕೆ.

Mumbai News Desk

ಹೆಜಮಾಡಿ : ಸಾವಿತ್ರಿ ಡಿ ಸಾಲ್ಯಾನ್ ನಿಧನ

Mumbai News Desk

ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ – ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಅರ್ಜಿ ಸಲ್ಲಿಸುವುದು ಹೇಗೆ?

Mumbai News Desk

ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ: ಡಾ. ಬೋರಲಿಂಗಯ್ಯ ಚಾಲನೆ

Mumbai News Desk

ದ್ವಾರಕಾಮಯಿ ಮಠ ಶ್ರೀ ಕ್ಷೇತ್ರ ಶಂಕರಪುರದ ವತಿಯಿಂದ ಪುಲ್ವಾಮ ದಾಳಿಯಲ್ಲಿ ಮಡಿದ ಯೋಧರಿಗೆ ನುಡಿ -ನಮನ

Mumbai News Desk